Advertisement
ಸುದ್ದಿಗಳು

ಇಂದಿನಿಂದ ‘ನವರಾತ್ರ ನಮಸ್ಯಾ’ | ವೈಭವದೊಂದಿಗೆ ಸಂಪನ್ನವಾದ ರಾಘವೇಶ್ವರ ಶ್ರೀಗಳ ಪುರಪುವೇಶ ಮೆರವಣಿಗೆ

Share

ಸಾಗರದ ರಾಘವೇಶ್ವರ ಸಭಾ ಭವನದಲ್ಲಿ ಸೆ. 22ರಿಂದ ಆರಂಭಗೊಳ್ಳುವ ನವರಾತ್ರ ನಮಸ್ಯಾ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವಹಿಸಲು ಶನಿವಾರ ಸಾಗರಕ್ಕೆ ಆಗಮಿಸಿದ ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಪುರ ಪ್ರವೇಶ ಸಾಗರೋಪಾದಿಯಲ್ಲಿ ಸೇರಿದ ಜನಸಮೂಹದ ಮಧ್ಯದಲ್ಲಿ ವೈಭವದಿಂದ ನಡೆಯಿತು.

ನಗರದ ಶಾರದಾಂಬಾ ವೃತ್ತದಿಂದ ಆರಂಭವಾದ ಮೆರವಣಿಗೆಯು ಗಣಪತಿ ದೇವಾಲಯದವರೆಗೆ ನಡೆಯಿತು. ಸುಮಾರು 10 ಸಾವಿರಕ್ಕೂ ಹೆಚ್ಚು ಶಿಷ್ಯ ಭಕ್ತರು ಸುಮಾರು 1.5 ಕಿಮೀ ಉದ್ದದ ಮೆರವಣಿಗೆಯಲ್ಲಿ ಭವ್ಯವಾಗಿ ನಡೆಯಿತು. 2 ಸಾವಿರ ಮಾತೆಯರು ಪೂರ್ಣಕುಂಭದೊಂದಿಗೆ ಶ್ರೀಗಳವರ ಸ್ವಾಗತಿಸಿದರು. ಚಂಡೆ ವಾದನ, ನಾದಸ್ವರ, ಭಜನಾ ಕುಣಿತ, ರಾಮ ಸಂಕೀರ್ತನೆ ಸೇರಿದಂತೆ ಹತ್ತಕ್ಕೂ ಹೆಚ್ಚು ಕಲಾತಂಡಗಳು ಹಾಗೂ ಸುಮಾರು 15 ಅಡಿ ಎತ್ತರದ ಧನುರ್ಧಾರಿ ರಾಮನ ಮೂರ್ತಿ ಮೆರವಣಿಗೆಯ ಸೊಬಗನ್ನು ಹೆಚ್ಚಿಸಿತ್ತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಆರಂಭದಲ್ಲಿ ಶ್ರೀ ಶಾರದಾ ದೇವಿಗೆ ಪೂಜಿಸಿ, ವಿಶೇಷವಾಗಿ ಅಲಂಕರಿಸಿದ ರಥಾರೋಹಣ ಗೈದ ಶ್ರೀಗಳವರಿಗೆ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೆಳೆಯೂರು, ಮಾಜಿ ಸಚಿವ ಹರತಾಳು ಹಾಲಪ್ಪ, ಶಿಮೂಲ್ ಅಧ್ಯಕ್ಷ ವಿದ್ಯಾಧರ ಫಲ ಸಮರ್ಪಿಸಿದರು. ವಿವಿಧ ಸಮಾಜಗಳ ಮುಖಂಡರು ಭಾಗವಹಿಸಿದ್ದರು.

ಶೋಭಾಯಾತ್ರೆಯ ನಂತರ ಮಾತನಾಡಿದ ಶ್ರೀಗಳು, ಸಾಗರ ನಗರಕ್ಕೆ ಸಾಗರ ಎಂಬ ಹೆಸರು ಸಲ್ಲುವುದು ಹೇಗೆ ಎಂಬ ಪ್ರಶ್ನೆಯಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಪುರಪ್ರವೇಶದ ಸಂದರ್ಭದಲ್ಲಿ ಭಕ್ತಿ ಸಾಗರವಾಗಿ ಹೊಮ್ಮಿದೆ. ಸಾಗರಕ್ಕೆ ಸಾಗರವೇ ಹೋಲಿಕೆ, ಆಕಾಶಕ್ಕೆ ಆಕಾಶವೇ ಹೋಲಿಕೆ, ರಾಮ-ರಾವಣ ಯುದ್ಧಕ್ಕೆ ಆ ಯುದ್ಧವೇ ಹೋಲಿಕೆ ಎಂದು ವಾಲ್ಮೀಕಿ ಮಹರ್ಷಿ ಹೇಳುತ್ತಾರೆ. ಸಾಗರ ನಗರದಲ್ಲಿ ನಡೆದ ಪುರಪ್ರವೇಶ ಉತ್ಸವಕ್ಕೆ ಬೇರೆ ಹೋಲಿಕೆ ಇಲ್ಲ. ಇವೆಲ್ಲ ವೈಭವಗಳು ರಾಜರಾಜೇಶ್ವರಿಗೆ ಸಲ್ಲುತ್ತದೆ ಎಂದರು.

ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಸಾಗರದಲ್ಲಿ ದೇವಿಯ ಆರಾಧನೆ ನಡೆಯುತ್ತಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ. ಶಾಸಕನಾಗಿ ಹಾಗೂ ಮಠದ ಭಕ್ತನಾಗಿ ಕಾರ್ಯಕ್ರಮಕ್ಕೆ ಅಗತ್ಯವಾದ ಎಲ್ಲಾ ಸಹಕಾರ ನೀಡುತ್ತೇನೆ ಎಂದರು.

ನವರಾತ್ರ ನಮಸ್ಯಾ: ಸೋಮವಾರದಿಂದ ಪ್ರತಿದಿನ ಮಧ್ಯಾಹ್ನ ಶ್ರೀಗಳಿಂದ ಲಲಿತೋಪಾಖ್ಯಾನ ವಿಶೇಷ ಪ್ರವಚನ ಇರಲಿದ್ದು, ಬೆಳಗ್ಗೆ ಶ್ರೀಪೂಜೆ, ಲಲಿತಾಮೂರ್ತಿ ಪೂಜೆ, ಚಂಡಿಕಾ ಹವನ, ಚಂಡೀ ಸಪ್ತಶತಿ ಪಾರಾಯಣ, ಕುಂಕುಮಾರ್ಚನೆ, ಭಜನೆ, ಸುವಾಸಿನಿ ಪೂಜೆ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

2 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

2 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

3 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

5 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

17 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

17 hours ago