ಶಕ್ತಿಯ ದೇವತೆಗೆ ನಮೋ ನಮಃ..

October 18, 2020
6:35 PM

ಒಂದೊಂದು ಹಬ್ಬಕ್ಕೆ ಅದರದೇ ಆದ ವಿಶೇಷತೆಗಳಿರುತ್ತವೆ. ಹಬ್ಬದ ಹುಟ್ಟಿಗೆ ಕಾರಣಗಳು ಐತಿಹ್ಯಗಳಿರುತ್ತವೆ. ನವರಾತ್ರಿಯ ಕುರಿತಾಗಿಯು ಹಲವು ಕಥೆಗಳು, ಆಚರಣೆಯ ಕಾರಣಗಳಾಗಿವೆ.

ಲೋಕ ಕಂಟಕನಾಗಿದ್ದ ಮಹಿಷಾಸುರನ ವಧೆಗಾಗಿ ಜನ್ಮವೆತ್ತಿದ ಮಹಾತಾಯಿ ಒಂಬತ್ತು ದಿನಗಳ ಕಾಲ ಹೋರಾಡಿ ಆತನನ್ನು ವಧಿಸಿದಳು ಎಂಬ ಕಥಾಭಾಗವನ್ನು ಬಾಲ್ಯದಿಂದಲೇ ಕೇಳುತ್ತಾ ಬಂದಿದ್ದೇವೆ. ಶಕ್ತಿಯ ದೇವತೆಗೆ ನಮೋ ನಮಃ..
ಪ್ರತಿವರ್ಷ ದೇವಸ್ಥಾನಗಳಲ್ಲಿ ನವರಾತ್ರಿ ಪೂಜೆ ಹಿಂದಿನಿಂದಲೂ ನಡೆದುಕೊಂಡು ಬಂದಿರುತ್ತದೆ. ನಿರ್ದಿಷ್ಟವಾದ ಆರಾಧನಾ ವಿಧಾನ, ಆಹಾರದಲ್ಲಿ ಪಾಲಿಸಲೇಬೇಕಾದ ನಿಯಮಗಳು, ‌ಪ್ರತಿಯೊಂದು ದಿನಕ್ಕೂ ವಿಭಿನ್ನ ನೈವೇದ್ಯಗಳು ನವರಾತ್ರಿಯ ವಿಶೇಷ.

ದೇವಿಯ ಆರಾಧನೆಯಲ್ಲಿ ಅಲಂಕಾರಕ್ಕೆ ಬಹಳ ಮಹತ್ವವಿದೆ. ಒಂಬತ್ತು ದಿನವೂ ಪ್ರತ್ಯೇಕ ಬಣ್ಣದ ವಸ್ತ್ರಗಳನ್ನು ದೇವಿಗೆ ಉಡಿಸುವ ಕ್ರಮವನ್ನು ಕೆಲವು ದೇವಾಲಯಗಳಲ್ಲಿ ಪಾಲಿಸುತ್ತಾರೆ. ಶೃಂಗೇರಿ ಶಾರದಾ ಅಮ್ಮನವರ ನವರಾತ್ರಿ ಅಲಂಕಾರ ವಿಶೇಷವಾಗಿರುತ್ತದೆ. ಪ್ರತಿಯೊಂದು ದಿನವೂ ವಿಶೇಷವಾಗಿ ಸಿಂಗರಿಸಲ್ಪಟ್ಟ ಮಾತೆಯ ವಸ್ತ್ರ ವಿನ್ಯಾಸಕ್ಕೆ ತಕ್ಕುದಾದ ಆಭರಣಗಳು. ನಿಜಕ್ಕೂ ಶಾರದಾ ಮಾತೆಯೇ ಪ್ರತ್ಯಕ್ಷವಾಗಿರುವಳೇನೋ ಎಂಬಷ್ಟು ಸಹಜ ಅನುಭವ. ‌
ನವರಾತ್ರಿಯ ದಿನಗಳಲ್ಲಿ ಮಾಡಿದ ಪಾರಾಯಣ , ಅರ್ಚನೆ , ಪೂಜೆಗಳು ವರ್ಷವಿಡೀ ನಮ್ಮನ್ನು ರಕ್ಷಿಸುವುದರಲ್ಲಿ ಯಾವ ಸಂಶಯವೂ ಇಲ್ಲ.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಶಾಸ್ತ್ರ ಮತ್ತು ಆಧುನಿಕತೆಯ ಸಮನ್ವಯದ ಹಬ್ಬ — ಯುಗಾದಿ
March 19, 2026
8:15 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror