Advertisement
ಧಾರ್ಮಿಕ

ಶಕ್ತಿಯ ದೇವತೆಗೆ ನಮೋ ನಮಃ..

Share

ಒಂದೊಂದು ಹಬ್ಬಕ್ಕೆ ಅದರದೇ ಆದ ವಿಶೇಷತೆಗಳಿರುತ್ತವೆ. ಹಬ್ಬದ ಹುಟ್ಟಿಗೆ ಕಾರಣಗಳು ಐತಿಹ್ಯಗಳಿರುತ್ತವೆ. ನವರಾತ್ರಿಯ ಕುರಿತಾಗಿಯು ಹಲವು ಕಥೆಗಳು, ಆಚರಣೆಯ ಕಾರಣಗಳಾಗಿವೆ.

ಲೋಕ ಕಂಟಕನಾಗಿದ್ದ ಮಹಿಷಾಸುರನ ವಧೆಗಾಗಿ ಜನ್ಮವೆತ್ತಿದ ಮಹಾತಾಯಿ ಒಂಬತ್ತು ದಿನಗಳ ಕಾಲ ಹೋರಾಡಿ ಆತನನ್ನು ವಧಿಸಿದಳು ಎಂಬ ಕಥಾಭಾಗವನ್ನು ಬಾಲ್ಯದಿಂದಲೇ ಕೇಳುತ್ತಾ ಬಂದಿದ್ದೇವೆ. ಶಕ್ತಿಯ ದೇವತೆಗೆ ನಮೋ ನಮಃ..
ಪ್ರತಿವರ್ಷ ದೇವಸ್ಥಾನಗಳಲ್ಲಿ ನವರಾತ್ರಿ ಪೂಜೆ ಹಿಂದಿನಿಂದಲೂ ನಡೆದುಕೊಂಡು ಬಂದಿರುತ್ತದೆ. ನಿರ್ದಿಷ್ಟವಾದ ಆರಾಧನಾ ವಿಧಾನ, ಆಹಾರದಲ್ಲಿ ಪಾಲಿಸಲೇಬೇಕಾದ ನಿಯಮಗಳು, ‌ಪ್ರತಿಯೊಂದು ದಿನಕ್ಕೂ ವಿಭಿನ್ನ ನೈವೇದ್ಯಗಳು ನವರಾತ್ರಿಯ ವಿಶೇಷ.

ದೇವಿಯ ಆರಾಧನೆಯಲ್ಲಿ ಅಲಂಕಾರಕ್ಕೆ ಬಹಳ ಮಹತ್ವವಿದೆ. ಒಂಬತ್ತು ದಿನವೂ ಪ್ರತ್ಯೇಕ ಬಣ್ಣದ ವಸ್ತ್ರಗಳನ್ನು ದೇವಿಗೆ ಉಡಿಸುವ ಕ್ರಮವನ್ನು ಕೆಲವು ದೇವಾಲಯಗಳಲ್ಲಿ ಪಾಲಿಸುತ್ತಾರೆ. ಶೃಂಗೇರಿ ಶಾರದಾ ಅಮ್ಮನವರ ನವರಾತ್ರಿ ಅಲಂಕಾರ ವಿಶೇಷವಾಗಿರುತ್ತದೆ. ಪ್ರತಿಯೊಂದು ದಿನವೂ ವಿಶೇಷವಾಗಿ ಸಿಂಗರಿಸಲ್ಪಟ್ಟ ಮಾತೆಯ ವಸ್ತ್ರ ವಿನ್ಯಾಸಕ್ಕೆ ತಕ್ಕುದಾದ ಆಭರಣಗಳು. ನಿಜಕ್ಕೂ ಶಾರದಾ ಮಾತೆಯೇ ಪ್ರತ್ಯಕ್ಷವಾಗಿರುವಳೇನೋ ಎಂಬಷ್ಟು ಸಹಜ ಅನುಭವ. ‌
ನವರಾತ್ರಿಯ ದಿನಗಳಲ್ಲಿ ಮಾಡಿದ ಪಾರಾಯಣ , ಅರ್ಚನೆ , ಪೂಜೆಗಳು ವರ್ಷವಿಡೀ ನಮ್ಮನ್ನು ರಕ್ಷಿಸುವುದರಲ್ಲಿ ಯಾವ ಸಂಶಯವೂ ಇಲ್ಲ.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

10 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

23 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

2 days ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago