Advertisement
ಧಾರ್ಮಿಕ

ಶಕ್ತಿಯ ದೇವತೆಗೆ ನಮೋ ನಮಃ..

Share

ಒಂದೊಂದು ಹಬ್ಬಕ್ಕೆ ಅದರದೇ ಆದ ವಿಶೇಷತೆಗಳಿರುತ್ತವೆ. ಹಬ್ಬದ ಹುಟ್ಟಿಗೆ ಕಾರಣಗಳು ಐತಿಹ್ಯಗಳಿರುತ್ತವೆ. ನವರಾತ್ರಿಯ ಕುರಿತಾಗಿಯು ಹಲವು ಕಥೆಗಳು, ಆಚರಣೆಯ ಕಾರಣಗಳಾಗಿವೆ.

Advertisement

ಲೋಕ ಕಂಟಕನಾಗಿದ್ದ ಮಹಿಷಾಸುರನ ವಧೆಗಾಗಿ ಜನ್ಮವೆತ್ತಿದ ಮಹಾತಾಯಿ ಒಂಬತ್ತು ದಿನಗಳ ಕಾಲ ಹೋರಾಡಿ ಆತನನ್ನು ವಧಿಸಿದಳು ಎಂಬ ಕಥಾಭಾಗವನ್ನು ಬಾಲ್ಯದಿಂದಲೇ ಕೇಳುತ್ತಾ ಬಂದಿದ್ದೇವೆ. ಶಕ್ತಿಯ ದೇವತೆಗೆ ನಮೋ ನಮಃ..
ಪ್ರತಿವರ್ಷ ದೇವಸ್ಥಾನಗಳಲ್ಲಿ ನವರಾತ್ರಿ ಪೂಜೆ ಹಿಂದಿನಿಂದಲೂ ನಡೆದುಕೊಂಡು ಬಂದಿರುತ್ತದೆ. ನಿರ್ದಿಷ್ಟವಾದ ಆರಾಧನಾ ವಿಧಾನ, ಆಹಾರದಲ್ಲಿ ಪಾಲಿಸಲೇಬೇಕಾದ ನಿಯಮಗಳು, ‌ಪ್ರತಿಯೊಂದು ದಿನಕ್ಕೂ ವಿಭಿನ್ನ ನೈವೇದ್ಯಗಳು ನವರಾತ್ರಿಯ ವಿಶೇಷ.

ದೇವಿಯ ಆರಾಧನೆಯಲ್ಲಿ ಅಲಂಕಾರಕ್ಕೆ ಬಹಳ ಮಹತ್ವವಿದೆ. ಒಂಬತ್ತು ದಿನವೂ ಪ್ರತ್ಯೇಕ ಬಣ್ಣದ ವಸ್ತ್ರಗಳನ್ನು ದೇವಿಗೆ ಉಡಿಸುವ ಕ್ರಮವನ್ನು ಕೆಲವು ದೇವಾಲಯಗಳಲ್ಲಿ ಪಾಲಿಸುತ್ತಾರೆ. ಶೃಂಗೇರಿ ಶಾರದಾ ಅಮ್ಮನವರ ನವರಾತ್ರಿ ಅಲಂಕಾರ ವಿಶೇಷವಾಗಿರುತ್ತದೆ. ಪ್ರತಿಯೊಂದು ದಿನವೂ ವಿಶೇಷವಾಗಿ ಸಿಂಗರಿಸಲ್ಪಟ್ಟ ಮಾತೆಯ ವಸ್ತ್ರ ವಿನ್ಯಾಸಕ್ಕೆ ತಕ್ಕುದಾದ ಆಭರಣಗಳು. ನಿಜಕ್ಕೂ ಶಾರದಾ ಮಾತೆಯೇ ಪ್ರತ್ಯಕ್ಷವಾಗಿರುವಳೇನೋ ಎಂಬಷ್ಟು ಸಹಜ ಅನುಭವ. ‌
ನವರಾತ್ರಿಯ ದಿನಗಳಲ್ಲಿ ಮಾಡಿದ ಪಾರಾಯಣ , ಅರ್ಚನೆ , ಪೂಜೆಗಳು ವರ್ಷವಿಡೀ ನಮ್ಮನ್ನು ರಕ್ಷಿಸುವುದರಲ್ಲಿ ಯಾವ ಸಂಶಯವೂ ಇಲ್ಲ.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

5 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

5 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

18 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

24 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago