ಒಂದೊಂದು ಹಬ್ಬಕ್ಕೆ ಅದರದೇ ಆದ ವಿಶೇಷತೆಗಳಿರುತ್ತವೆ. ಹಬ್ಬದ ಹುಟ್ಟಿಗೆ ಕಾರಣಗಳು ಐತಿಹ್ಯಗಳಿರುತ್ತವೆ. ನವರಾತ್ರಿಯ ಕುರಿತಾಗಿಯು ಹಲವು ಕಥೆಗಳು, ಆಚರಣೆಯ ಕಾರಣಗಳಾಗಿವೆ.
ಲೋಕ ಕಂಟಕನಾಗಿದ್ದ ಮಹಿಷಾಸುರನ ವಧೆಗಾಗಿ ಜನ್ಮವೆತ್ತಿದ ಮಹಾತಾಯಿ ಒಂಬತ್ತು ದಿನಗಳ ಕಾಲ ಹೋರಾಡಿ ಆತನನ್ನು ವಧಿಸಿದಳು ಎಂಬ ಕಥಾಭಾಗವನ್ನು ಬಾಲ್ಯದಿಂದಲೇ ಕೇಳುತ್ತಾ ಬಂದಿದ್ದೇವೆ. ಶಕ್ತಿಯ ದೇವತೆಗೆ ನಮೋ ನಮಃ..
ಪ್ರತಿವರ್ಷ ದೇವಸ್ಥಾನಗಳಲ್ಲಿ ನವರಾತ್ರಿ ಪೂಜೆ ಹಿಂದಿನಿಂದಲೂ ನಡೆದುಕೊಂಡು ಬಂದಿರುತ್ತದೆ. ನಿರ್ದಿಷ್ಟವಾದ ಆರಾಧನಾ ವಿಧಾನ, ಆಹಾರದಲ್ಲಿ ಪಾಲಿಸಲೇಬೇಕಾದ ನಿಯಮಗಳು, ಪ್ರತಿಯೊಂದು ದಿನಕ್ಕೂ ವಿಭಿನ್ನ ನೈವೇದ್ಯಗಳು ನವರಾತ್ರಿಯ ವಿಶೇಷ.
ದೇವಿಯ ಆರಾಧನೆಯಲ್ಲಿ ಅಲಂಕಾರಕ್ಕೆ ಬಹಳ ಮಹತ್ವವಿದೆ. ಒಂಬತ್ತು ದಿನವೂ ಪ್ರತ್ಯೇಕ ಬಣ್ಣದ ವಸ್ತ್ರಗಳನ್ನು ದೇವಿಗೆ ಉಡಿಸುವ ಕ್ರಮವನ್ನು ಕೆಲವು ದೇವಾಲಯಗಳಲ್ಲಿ ಪಾಲಿಸುತ್ತಾರೆ. ಶೃಂಗೇರಿ ಶಾರದಾ ಅಮ್ಮನವರ ನವರಾತ್ರಿ ಅಲಂಕಾರ ವಿಶೇಷವಾಗಿರುತ್ತದೆ. ಪ್ರತಿಯೊಂದು ದಿನವೂ ವಿಶೇಷವಾಗಿ ಸಿಂಗರಿಸಲ್ಪಟ್ಟ ಮಾತೆಯ ವಸ್ತ್ರ ವಿನ್ಯಾಸಕ್ಕೆ ತಕ್ಕುದಾದ ಆಭರಣಗಳು. ನಿಜಕ್ಕೂ ಶಾರದಾ ಮಾತೆಯೇ ಪ್ರತ್ಯಕ್ಷವಾಗಿರುವಳೇನೋ ಎಂಬಷ್ಟು ಸಹಜ ಅನುಭವ.
ನವರಾತ್ರಿಯ ದಿನಗಳಲ್ಲಿ ಮಾಡಿದ ಪಾರಾಯಣ , ಅರ್ಚನೆ , ಪೂಜೆಗಳು ವರ್ಷವಿಡೀ ನಮ್ಮನ್ನು ರಕ್ಷಿಸುವುದರಲ್ಲಿ ಯಾವ ಸಂಶಯವೂ ಇಲ್ಲ.
-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…