ಒಂದೊಂದು ಹಬ್ಬಕ್ಕೆ ಅದರದೇ ಆದ ವಿಶೇಷತೆಗಳಿರುತ್ತವೆ. ಹಬ್ಬದ ಹುಟ್ಟಿಗೆ ಕಾರಣಗಳು ಐತಿಹ್ಯಗಳಿರುತ್ತವೆ. ನವರಾತ್ರಿಯ ಕುರಿತಾಗಿಯು ಹಲವು ಕಥೆಗಳು, ಆಚರಣೆಯ ಕಾರಣಗಳಾಗಿವೆ.
ಲೋಕ ಕಂಟಕನಾಗಿದ್ದ ಮಹಿಷಾಸುರನ ವಧೆಗಾಗಿ ಜನ್ಮವೆತ್ತಿದ ಮಹಾತಾಯಿ ಒಂಬತ್ತು ದಿನಗಳ ಕಾಲ ಹೋರಾಡಿ ಆತನನ್ನು ವಧಿಸಿದಳು ಎಂಬ ಕಥಾಭಾಗವನ್ನು ಬಾಲ್ಯದಿಂದಲೇ ಕೇಳುತ್ತಾ ಬಂದಿದ್ದೇವೆ. ಶಕ್ತಿಯ ದೇವತೆಗೆ ನಮೋ ನಮಃ..
ಪ್ರತಿವರ್ಷ ದೇವಸ್ಥಾನಗಳಲ್ಲಿ ನವರಾತ್ರಿ ಪೂಜೆ ಹಿಂದಿನಿಂದಲೂ ನಡೆದುಕೊಂಡು ಬಂದಿರುತ್ತದೆ. ನಿರ್ದಿಷ್ಟವಾದ ಆರಾಧನಾ ವಿಧಾನ, ಆಹಾರದಲ್ಲಿ ಪಾಲಿಸಲೇಬೇಕಾದ ನಿಯಮಗಳು, ಪ್ರತಿಯೊಂದು ದಿನಕ್ಕೂ ವಿಭಿನ್ನ ನೈವೇದ್ಯಗಳು ನವರಾತ್ರಿಯ ವಿಶೇಷ.
ದೇವಿಯ ಆರಾಧನೆಯಲ್ಲಿ ಅಲಂಕಾರಕ್ಕೆ ಬಹಳ ಮಹತ್ವವಿದೆ. ಒಂಬತ್ತು ದಿನವೂ ಪ್ರತ್ಯೇಕ ಬಣ್ಣದ ವಸ್ತ್ರಗಳನ್ನು ದೇವಿಗೆ ಉಡಿಸುವ ಕ್ರಮವನ್ನು ಕೆಲವು ದೇವಾಲಯಗಳಲ್ಲಿ ಪಾಲಿಸುತ್ತಾರೆ. ಶೃಂಗೇರಿ ಶಾರದಾ ಅಮ್ಮನವರ ನವರಾತ್ರಿ ಅಲಂಕಾರ ವಿಶೇಷವಾಗಿರುತ್ತದೆ. ಪ್ರತಿಯೊಂದು ದಿನವೂ ವಿಶೇಷವಾಗಿ ಸಿಂಗರಿಸಲ್ಪಟ್ಟ ಮಾತೆಯ ವಸ್ತ್ರ ವಿನ್ಯಾಸಕ್ಕೆ ತಕ್ಕುದಾದ ಆಭರಣಗಳು. ನಿಜಕ್ಕೂ ಶಾರದಾ ಮಾತೆಯೇ ಪ್ರತ್ಯಕ್ಷವಾಗಿರುವಳೇನೋ ಎಂಬಷ್ಟು ಸಹಜ ಅನುಭವ.
ನವರಾತ್ರಿಯ ದಿನಗಳಲ್ಲಿ ಮಾಡಿದ ಪಾರಾಯಣ , ಅರ್ಚನೆ , ಪೂಜೆಗಳು ವರ್ಷವಿಡೀ ನಮ್ಮನ್ನು ರಕ್ಷಿಸುವುದರಲ್ಲಿ ಯಾವ ಸಂಶಯವೂ ಇಲ್ಲ.
-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..
ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…
ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…
ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…