Advertisement
ಧಾರ್ಮಿಕ

ಶಕ್ತಿಯ ದೇವತೆಗೆ ನಮೋ ನಮಃ..

Share

ಒಂದೊಂದು ಹಬ್ಬಕ್ಕೆ ಅದರದೇ ಆದ ವಿಶೇಷತೆಗಳಿರುತ್ತವೆ. ಹಬ್ಬದ ಹುಟ್ಟಿಗೆ ಕಾರಣಗಳು ಐತಿಹ್ಯಗಳಿರುತ್ತವೆ. ನವರಾತ್ರಿಯ ಕುರಿತಾಗಿಯು ಹಲವು ಕಥೆಗಳು, ಆಚರಣೆಯ ಕಾರಣಗಳಾಗಿವೆ.

ಲೋಕ ಕಂಟಕನಾಗಿದ್ದ ಮಹಿಷಾಸುರನ ವಧೆಗಾಗಿ ಜನ್ಮವೆತ್ತಿದ ಮಹಾತಾಯಿ ಒಂಬತ್ತು ದಿನಗಳ ಕಾಲ ಹೋರಾಡಿ ಆತನನ್ನು ವಧಿಸಿದಳು ಎಂಬ ಕಥಾಭಾಗವನ್ನು ಬಾಲ್ಯದಿಂದಲೇ ಕೇಳುತ್ತಾ ಬಂದಿದ್ದೇವೆ. ಶಕ್ತಿಯ ದೇವತೆಗೆ ನಮೋ ನಮಃ..
ಪ್ರತಿವರ್ಷ ದೇವಸ್ಥಾನಗಳಲ್ಲಿ ನವರಾತ್ರಿ ಪೂಜೆ ಹಿಂದಿನಿಂದಲೂ ನಡೆದುಕೊಂಡು ಬಂದಿರುತ್ತದೆ. ನಿರ್ದಿಷ್ಟವಾದ ಆರಾಧನಾ ವಿಧಾನ, ಆಹಾರದಲ್ಲಿ ಪಾಲಿಸಲೇಬೇಕಾದ ನಿಯಮಗಳು, ‌ಪ್ರತಿಯೊಂದು ದಿನಕ್ಕೂ ವಿಭಿನ್ನ ನೈವೇದ್ಯಗಳು ನವರಾತ್ರಿಯ ವಿಶೇಷ.

ದೇವಿಯ ಆರಾಧನೆಯಲ್ಲಿ ಅಲಂಕಾರಕ್ಕೆ ಬಹಳ ಮಹತ್ವವಿದೆ. ಒಂಬತ್ತು ದಿನವೂ ಪ್ರತ್ಯೇಕ ಬಣ್ಣದ ವಸ್ತ್ರಗಳನ್ನು ದೇವಿಗೆ ಉಡಿಸುವ ಕ್ರಮವನ್ನು ಕೆಲವು ದೇವಾಲಯಗಳಲ್ಲಿ ಪಾಲಿಸುತ್ತಾರೆ. ಶೃಂಗೇರಿ ಶಾರದಾ ಅಮ್ಮನವರ ನವರಾತ್ರಿ ಅಲಂಕಾರ ವಿಶೇಷವಾಗಿರುತ್ತದೆ. ಪ್ರತಿಯೊಂದು ದಿನವೂ ವಿಶೇಷವಾಗಿ ಸಿಂಗರಿಸಲ್ಪಟ್ಟ ಮಾತೆಯ ವಸ್ತ್ರ ವಿನ್ಯಾಸಕ್ಕೆ ತಕ್ಕುದಾದ ಆಭರಣಗಳು. ನಿಜಕ್ಕೂ ಶಾರದಾ ಮಾತೆಯೇ ಪ್ರತ್ಯಕ್ಷವಾಗಿರುವಳೇನೋ ಎಂಬಷ್ಟು ಸಹಜ ಅನುಭವ. ‌
ನವರಾತ್ರಿಯ ದಿನಗಳಲ್ಲಿ ಮಾಡಿದ ಪಾರಾಯಣ , ಅರ್ಚನೆ , ಪೂಜೆಗಳು ವರ್ಷವಿಡೀ ನಮ್ಮನ್ನು ರಕ್ಷಿಸುವುದರಲ್ಲಿ ಯಾವ ಸಂಶಯವೂ ಇಲ್ಲ.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

1 hour ago

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ

ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…

1 hour ago

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

9 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

18 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

1 day ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

2 days ago