Advertisement
ಧಾರ್ಮಿಕ

ಶಕ್ತಿಯ ದೇವತೆಗೆ ನಮೋ ನಮಃ..

Share

ಒಂದೊಂದು ಹಬ್ಬಕ್ಕೆ ಅದರದೇ ಆದ ವಿಶೇಷತೆಗಳಿರುತ್ತವೆ. ಹಬ್ಬದ ಹುಟ್ಟಿಗೆ ಕಾರಣಗಳು ಐತಿಹ್ಯಗಳಿರುತ್ತವೆ. ನವರಾತ್ರಿಯ ಕುರಿತಾಗಿಯು ಹಲವು ಕಥೆಗಳು, ಆಚರಣೆಯ ಕಾರಣಗಳಾಗಿವೆ.

ಲೋಕ ಕಂಟಕನಾಗಿದ್ದ ಮಹಿಷಾಸುರನ ವಧೆಗಾಗಿ ಜನ್ಮವೆತ್ತಿದ ಮಹಾತಾಯಿ ಒಂಬತ್ತು ದಿನಗಳ ಕಾಲ ಹೋರಾಡಿ ಆತನನ್ನು ವಧಿಸಿದಳು ಎಂಬ ಕಥಾಭಾಗವನ್ನು ಬಾಲ್ಯದಿಂದಲೇ ಕೇಳುತ್ತಾ ಬಂದಿದ್ದೇವೆ. ಶಕ್ತಿಯ ದೇವತೆಗೆ ನಮೋ ನಮಃ..
ಪ್ರತಿವರ್ಷ ದೇವಸ್ಥಾನಗಳಲ್ಲಿ ನವರಾತ್ರಿ ಪೂಜೆ ಹಿಂದಿನಿಂದಲೂ ನಡೆದುಕೊಂಡು ಬಂದಿರುತ್ತದೆ. ನಿರ್ದಿಷ್ಟವಾದ ಆರಾಧನಾ ವಿಧಾನ, ಆಹಾರದಲ್ಲಿ ಪಾಲಿಸಲೇಬೇಕಾದ ನಿಯಮಗಳು, ‌ಪ್ರತಿಯೊಂದು ದಿನಕ್ಕೂ ವಿಭಿನ್ನ ನೈವೇದ್ಯಗಳು ನವರಾತ್ರಿಯ ವಿಶೇಷ.

ದೇವಿಯ ಆರಾಧನೆಯಲ್ಲಿ ಅಲಂಕಾರಕ್ಕೆ ಬಹಳ ಮಹತ್ವವಿದೆ. ಒಂಬತ್ತು ದಿನವೂ ಪ್ರತ್ಯೇಕ ಬಣ್ಣದ ವಸ್ತ್ರಗಳನ್ನು ದೇವಿಗೆ ಉಡಿಸುವ ಕ್ರಮವನ್ನು ಕೆಲವು ದೇವಾಲಯಗಳಲ್ಲಿ ಪಾಲಿಸುತ್ತಾರೆ. ಶೃಂಗೇರಿ ಶಾರದಾ ಅಮ್ಮನವರ ನವರಾತ್ರಿ ಅಲಂಕಾರ ವಿಶೇಷವಾಗಿರುತ್ತದೆ. ಪ್ರತಿಯೊಂದು ದಿನವೂ ವಿಶೇಷವಾಗಿ ಸಿಂಗರಿಸಲ್ಪಟ್ಟ ಮಾತೆಯ ವಸ್ತ್ರ ವಿನ್ಯಾಸಕ್ಕೆ ತಕ್ಕುದಾದ ಆಭರಣಗಳು. ನಿಜಕ್ಕೂ ಶಾರದಾ ಮಾತೆಯೇ ಪ್ರತ್ಯಕ್ಷವಾಗಿರುವಳೇನೋ ಎಂಬಷ್ಟು ಸಹಜ ಅನುಭವ. ‌
ನವರಾತ್ರಿಯ ದಿನಗಳಲ್ಲಿ ಮಾಡಿದ ಪಾರಾಯಣ , ಅರ್ಚನೆ , ಪೂಜೆಗಳು ವರ್ಷವಿಡೀ ನಮ್ಮನ್ನು ರಕ್ಷಿಸುವುದರಲ್ಲಿ ಯಾವ ಸಂಶಯವೂ ಇಲ್ಲ.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

4 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

8 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

13 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

19 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago