ನವರಾತ್ರಿ ಸಂಭ್ರಮಕ್ಕೆ ತೆರೆ

October 27, 2020
3:48 PM

ಸರಣಿ ಹಬ್ಬಗಳಲ್ಲಿ ಬಹುದಿನಗಳ ಸಂಭ್ರಮವಿರುವ ನವರಾತ್ರಿ ಮುಗಿದಿದೆ. ವಾರಗಳ ಕಾಲ ದೇವಿಯ ಆರಾಧನೆಯಲ್ಲಿ ತೊಡಗಿಸಿಕೊಂಡ ಭಕ್ತರ ಮನದಲ್ಲಿ ತೃಪ್ತಿಯ ಭಾವನೆ.

ಹಲವು ರೀತಿಯಲ್ಲಿ ಅರ್ಚಿಸಿ , ಪೂಜಿಸಿ, ಅಲಂಕರಿಸಿ ಎಲ್ಲಾ ರೀತಿಯಲ್ಲೂ ತಮ್ಮನ್ನು ಸಮರ್ಪಿಸಿಕೊಂಡ ಭಕ್ತರಿಗೆ ಏನೋ ಖಾಲಿಯಾದ ಅನುಭವ. ಶಾಲಾ ಮಕ್ಕಳಿಗೆ ವರ್ಷವಿಡೀ ಕಾದು ಕುಳಿತು ತಮ್ಮ ಪ್ರತಿಭೆಯನ್ನು ಓರೆಗೆ ಹಚ್ಚುವ ವಾರ್ಷಿಕೋತ್ಸವ ಮುಗಿದ ಅನುಭವ ಭಕ್ತರಿಗೆ.

ಈ ಬಾರಿಯ ನವರಾತ್ರಿ ನನಗೆ 25 ವರ್ಷಗಳ ಹಿಂದಿನ ಆಚರಣೆಯನ್ನು ನೆನಪಿಸಿತು. ಆ ದಿನಗಳಲ್ಲಿ ನಮ್ಮ ಊರಿನ ದೇವಾಲಯದಲ್ಲಿ ‌ ನವರಾತ್ರಿ ಹಬ್ಬದ ಆಚರಣೆ ಪ್ರತೀ ವರ್ಷ ನಡೆಯುತ್ತಿತ್ತು. ಒಂಬತ್ತು ದಿನಗಳ ಕಾಲ ನಡೆಯುತ್ತಿದ್ದ ಆಚರಣೆಯಲ್ಲಿ ಇಡೀ ಗ್ರಾಮದವರು ಮನೆಯ ಹಬ್ಬವೆಂಬಂತೆ ಭಾಗವಹಿಸುತ್ತಿದ್ದರು. ಅಲ್ಲಿ ಪೂಜೆ ನಡೆಯುವಾಗ ‌ ದಿನಕ್ಕೊಂದು ತಂಡದವರು ಭಜನೆ ಮಾಡುತ್ತಿದ್ದರು. ಅವರೊಂದಿಗೆಲ್ಲರೂ ದನಿ ಸೇರಿಸುತ್ತಿದ್ದರು. ದೇವರ ಪ್ರಸಾದವಾಗಿ‌ ಅವಲಕ್ಕಿ, ಗಟ್ಟಿ ಪಾಯಸ, ಕ್ಷೀರ ಮೊದಲಾದವುಗಳನ್ನು ವಿತರಿಸುತ್ತಿದ್ದರು. ವಿಜಯದಶಮಿಯಂದು ನಡೆಯುತ್ತಿದ್ದ ಅನ್ನ ಸಂತರ್ಪಣೆಯಲ್ಲಿ ಎಲ್ಲರೂ ಪಾಲ್ಗೊಳ್ಳುತ್ತಿದ್ದ ನೆನಪುಗಳು ಇಂದು ನಿನ್ನೆಯಂತಿದೆ. ಈ ಬಾರಿ ಕೊರೊನಾದಿಂದಾಗಿ ನವರಾತ್ರಿ ಆಡಂಬರ ರಹಿತವಾಗಿ ನಡೆದಿದೆ. ಯಾವುದೇ ಲೋಪವಿಲ್ಲದೆ, ಆಚರಣೆಗೆ ಭಂಗವಿಲ್ಲದೆ ದೇವಿಯ ಆರಾಧನೆ ನಡೆದಿದೆ. ಗೌಜಿ , ಗದ್ಧಲಗಳಿಗೆ ಕೊರೊನಾ ಬ್ರೇಕ್ ಹಾಕಿದೆ.

ಮುಂದಿನ ದಿನಗಳಲ್ಲಿ ಕೊರೊನಾ ಸಹಿತ ಇತರ ಕಂಟಕಗಳ ನಿವಾರಣೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾ ಎಲ್ಲೆಡೆ ನವರಾತ್ರಿಯನ್ನು ಭಕ್ತರು ಸಂಪನ್ನಗೊಳಿಸಿದರು.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror