Advertisement
ಸುದ್ದಿಗಳು

ನವರಾತ್ರಿ ಸಂಭ್ರಮಕ್ಕೆ ತೆರೆ

Share

ಸರಣಿ ಹಬ್ಬಗಳಲ್ಲಿ ಬಹುದಿನಗಳ ಸಂಭ್ರಮವಿರುವ ನವರಾತ್ರಿ ಮುಗಿದಿದೆ. ವಾರಗಳ ಕಾಲ ದೇವಿಯ ಆರಾಧನೆಯಲ್ಲಿ ತೊಡಗಿಸಿಕೊಂಡ ಭಕ್ತರ ಮನದಲ್ಲಿ ತೃಪ್ತಿಯ ಭಾವನೆ.

ಹಲವು ರೀತಿಯಲ್ಲಿ ಅರ್ಚಿಸಿ , ಪೂಜಿಸಿ, ಅಲಂಕರಿಸಿ ಎಲ್ಲಾ ರೀತಿಯಲ್ಲೂ ತಮ್ಮನ್ನು ಸಮರ್ಪಿಸಿಕೊಂಡ ಭಕ್ತರಿಗೆ ಏನೋ ಖಾಲಿಯಾದ ಅನುಭವ. ಶಾಲಾ ಮಕ್ಕಳಿಗೆ ವರ್ಷವಿಡೀ ಕಾದು ಕುಳಿತು ತಮ್ಮ ಪ್ರತಿಭೆಯನ್ನು ಓರೆಗೆ ಹಚ್ಚುವ ವಾರ್ಷಿಕೋತ್ಸವ ಮುಗಿದ ಅನುಭವ ಭಕ್ತರಿಗೆ.

ಈ ಬಾರಿಯ ನವರಾತ್ರಿ ನನಗೆ 25 ವರ್ಷಗಳ ಹಿಂದಿನ ಆಚರಣೆಯನ್ನು ನೆನಪಿಸಿತು. ಆ ದಿನಗಳಲ್ಲಿ ನಮ್ಮ ಊರಿನ ದೇವಾಲಯದಲ್ಲಿ ‌ ನವರಾತ್ರಿ ಹಬ್ಬದ ಆಚರಣೆ ಪ್ರತೀ ವರ್ಷ ನಡೆಯುತ್ತಿತ್ತು. ಒಂಬತ್ತು ದಿನಗಳ ಕಾಲ ನಡೆಯುತ್ತಿದ್ದ ಆಚರಣೆಯಲ್ಲಿ ಇಡೀ ಗ್ರಾಮದವರು ಮನೆಯ ಹಬ್ಬವೆಂಬಂತೆ ಭಾಗವಹಿಸುತ್ತಿದ್ದರು. ಅಲ್ಲಿ ಪೂಜೆ ನಡೆಯುವಾಗ ‌ ದಿನಕ್ಕೊಂದು ತಂಡದವರು ಭಜನೆ ಮಾಡುತ್ತಿದ್ದರು. ಅವರೊಂದಿಗೆಲ್ಲರೂ ದನಿ ಸೇರಿಸುತ್ತಿದ್ದರು. ದೇವರ ಪ್ರಸಾದವಾಗಿ‌ ಅವಲಕ್ಕಿ, ಗಟ್ಟಿ ಪಾಯಸ, ಕ್ಷೀರ ಮೊದಲಾದವುಗಳನ್ನು ವಿತರಿಸುತ್ತಿದ್ದರು. ವಿಜಯದಶಮಿಯಂದು ನಡೆಯುತ್ತಿದ್ದ ಅನ್ನ ಸಂತರ್ಪಣೆಯಲ್ಲಿ ಎಲ್ಲರೂ ಪಾಲ್ಗೊಳ್ಳುತ್ತಿದ್ದ ನೆನಪುಗಳು ಇಂದು ನಿನ್ನೆಯಂತಿದೆ. ಈ ಬಾರಿ ಕೊರೊನಾದಿಂದಾಗಿ ನವರಾತ್ರಿ ಆಡಂಬರ ರಹಿತವಾಗಿ ನಡೆದಿದೆ. ಯಾವುದೇ ಲೋಪವಿಲ್ಲದೆ, ಆಚರಣೆಗೆ ಭಂಗವಿಲ್ಲದೆ ದೇವಿಯ ಆರಾಧನೆ ನಡೆದಿದೆ. ಗೌಜಿ , ಗದ್ಧಲಗಳಿಗೆ ಕೊರೊನಾ ಬ್ರೇಕ್ ಹಾಕಿದೆ.

ಮುಂದಿನ ದಿನಗಳಲ್ಲಿ ಕೊರೊನಾ ಸಹಿತ ಇತರ ಕಂಟಕಗಳ ನಿವಾರಣೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾ ಎಲ್ಲೆಡೆ ನವರಾತ್ರಿಯನ್ನು ಭಕ್ತರು ಸಂಪನ್ನಗೊಳಿಸಿದರು.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

10 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

17 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

20 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago