Advertisement
ಸುದ್ದಿಗಳು

ನವರಾತ್ರಿ ಸಂಭ್ರಮಕ್ಕೆ ತೆರೆ

Share

ಸರಣಿ ಹಬ್ಬಗಳಲ್ಲಿ ಬಹುದಿನಗಳ ಸಂಭ್ರಮವಿರುವ ನವರಾತ್ರಿ ಮುಗಿದಿದೆ. ವಾರಗಳ ಕಾಲ ದೇವಿಯ ಆರಾಧನೆಯಲ್ಲಿ ತೊಡಗಿಸಿಕೊಂಡ ಭಕ್ತರ ಮನದಲ್ಲಿ ತೃಪ್ತಿಯ ಭಾವನೆ.

ಹಲವು ರೀತಿಯಲ್ಲಿ ಅರ್ಚಿಸಿ , ಪೂಜಿಸಿ, ಅಲಂಕರಿಸಿ ಎಲ್ಲಾ ರೀತಿಯಲ್ಲೂ ತಮ್ಮನ್ನು ಸಮರ್ಪಿಸಿಕೊಂಡ ಭಕ್ತರಿಗೆ ಏನೋ ಖಾಲಿಯಾದ ಅನುಭವ. ಶಾಲಾ ಮಕ್ಕಳಿಗೆ ವರ್ಷವಿಡೀ ಕಾದು ಕುಳಿತು ತಮ್ಮ ಪ್ರತಿಭೆಯನ್ನು ಓರೆಗೆ ಹಚ್ಚುವ ವಾರ್ಷಿಕೋತ್ಸವ ಮುಗಿದ ಅನುಭವ ಭಕ್ತರಿಗೆ.

ಈ ಬಾರಿಯ ನವರಾತ್ರಿ ನನಗೆ 25 ವರ್ಷಗಳ ಹಿಂದಿನ ಆಚರಣೆಯನ್ನು ನೆನಪಿಸಿತು. ಆ ದಿನಗಳಲ್ಲಿ ನಮ್ಮ ಊರಿನ ದೇವಾಲಯದಲ್ಲಿ ‌ ನವರಾತ್ರಿ ಹಬ್ಬದ ಆಚರಣೆ ಪ್ರತೀ ವರ್ಷ ನಡೆಯುತ್ತಿತ್ತು. ಒಂಬತ್ತು ದಿನಗಳ ಕಾಲ ನಡೆಯುತ್ತಿದ್ದ ಆಚರಣೆಯಲ್ಲಿ ಇಡೀ ಗ್ರಾಮದವರು ಮನೆಯ ಹಬ್ಬವೆಂಬಂತೆ ಭಾಗವಹಿಸುತ್ತಿದ್ದರು. ಅಲ್ಲಿ ಪೂಜೆ ನಡೆಯುವಾಗ ‌ ದಿನಕ್ಕೊಂದು ತಂಡದವರು ಭಜನೆ ಮಾಡುತ್ತಿದ್ದರು. ಅವರೊಂದಿಗೆಲ್ಲರೂ ದನಿ ಸೇರಿಸುತ್ತಿದ್ದರು. ದೇವರ ಪ್ರಸಾದವಾಗಿ‌ ಅವಲಕ್ಕಿ, ಗಟ್ಟಿ ಪಾಯಸ, ಕ್ಷೀರ ಮೊದಲಾದವುಗಳನ್ನು ವಿತರಿಸುತ್ತಿದ್ದರು. ವಿಜಯದಶಮಿಯಂದು ನಡೆಯುತ್ತಿದ್ದ ಅನ್ನ ಸಂತರ್ಪಣೆಯಲ್ಲಿ ಎಲ್ಲರೂ ಪಾಲ್ಗೊಳ್ಳುತ್ತಿದ್ದ ನೆನಪುಗಳು ಇಂದು ನಿನ್ನೆಯಂತಿದೆ. ಈ ಬಾರಿ ಕೊರೊನಾದಿಂದಾಗಿ ನವರಾತ್ರಿ ಆಡಂಬರ ರಹಿತವಾಗಿ ನಡೆದಿದೆ. ಯಾವುದೇ ಲೋಪವಿಲ್ಲದೆ, ಆಚರಣೆಗೆ ಭಂಗವಿಲ್ಲದೆ ದೇವಿಯ ಆರಾಧನೆ ನಡೆದಿದೆ. ಗೌಜಿ , ಗದ್ಧಲಗಳಿಗೆ ಕೊರೊನಾ ಬ್ರೇಕ್ ಹಾಕಿದೆ.

ಮುಂದಿನ ದಿನಗಳಲ್ಲಿ ಕೊರೊನಾ ಸಹಿತ ಇತರ ಕಂಟಕಗಳ ನಿವಾರಣೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾ ಎಲ್ಲೆಡೆ ನವರಾತ್ರಿಯನ್ನು ಭಕ್ತರು ಸಂಪನ್ನಗೊಳಿಸಿದರು.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 hour ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

9 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

10 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

20 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago