Advertisement
ಅನುಕ್ರಮ

ನವರಾತ್ರಿ ಸಂಭ್ರಮಕ್ಕೆ ತೆರೆ | ದೇವಿಯ ಆರಾಧನೆಯಿಂದ ನೆಮ್ಮದಿ ಕಂಡ ಭಕ್ತರು |

Share

ಸರಣಿ ಹಬ್ಬಗಳಲ್ಲಿ ಬಹುದಿನಗಳ ಸಂಭ್ರಮವಿರುವ ನವರಾತ್ರಿ ಮುಗಿದಿದೆ. ವಾರಗಳ ಕಾಲ ದೇವಿಯ ಆರಾಧನೆಯಲ್ಲಿ ತೊಡಗಿಸಿಕೊಂಡ ಭಕ್ತರ ಮನದಲ್ಲಿ ತೃಪ್ತಿಯ ಭಾವನೆ.

ಹಲವು ರೀತಿಯಲ್ಲಿ ಅರ್ಚಿಸಿ , ಪೂಜಿಸಿ, ಅಲಂಕರಿಸಿ ಎಲ್ಲಾ ರೀತಿಯಲ್ಲೂ ತಮ್ಮನ್ನು ಸಮರ್ಪಿಸಿ ಕೊಂಡ ಭಕ್ತರಿಗೆ ಏನೋ ಖಾಲಿಯಾದ ಅನುಭವ. ಶಾಲಾ ಮಕ್ಕಳಿಗೆ ವರ್ಷವಿಡೀ ಕಾದು ಕುಳಿತು ತಮ್ಮ ಪ್ರತಿಭೆಯನ್ನು ಓರೆಗೆ ಹಚ್ಚುವ ವಾರ್ಷಿಕೋತ್ಸವ ಮುಗಿದ ಅನುಭವ ಭಕ್ತರಿಗೆ.

ಈ ಬಾರಿಯ ನವರಾತ್ರಿ ನನಗೆ 25 ವರ್ಷಗಳ ಹಿಂದಿನ ಆಚರಣೆಯನ್ನು ನೆನಪಿಸಿತು. ಆ ದಿನಗಳಲ್ಲಿ ನಮ್ಮ ಊರಿನ ದೇವಾಲಯದಲ್ಲಿ ‌ ನವರಾತ್ರಿ ಹಬ್ಬದ ಆಚರಣೆ ಪ್ರತೀ ವರ್ಷ ನಡೆಯುತ್ತಿತ್ತು. ಒಂಬತ್ತು ದಿನಗಳ ಕಾಲ ನಡೆಯುತ್ತಿದ್ದ ಆಚರಣೆಯಲ್ಲಿ ಇಡೀ ಗ್ರಾಮದವರು ಮನೆಯ ಹಬ್ಬವೆಂಬಂತೆ ಭಾಗವಹಿಸುತ್ತಿದ್ದರು. ಅಲ್ಲಿ ಪೂಜೆ ನಡೆಯುವಾಗ ‌ ದಿನಕ್ಕೊಂದು ತಂಡದವರು ಭಜನೆ ಮಾಡುತ್ತಿದ್ದರು. ಅವರೊಂದಿಗೆಲ್ಲರೂ ದನಿ ಸೇರಿಸುತ್ತಿದ್ದರು. ದೇವರ ಪ್ರಸಾದವಾಗಿ‌ ಅವಲಕ್ಕಿ, ಗಟ್ಟಿ ಪಾಯಸ, ಕ್ಷೀರ ಮೊದಲಾದವುಗಳನ್ನು ವಿತರಿಸುತ್ತಿದ್ದರು.

ವಿಜಯದಶಮಿಯಂದು ನಡೆಯುತ್ತಿದ್ದ ಅನ್ನ ಸಂತರ್ಪಣೆಯಲ್ಲಿ ಎಲ್ಲರೂ ಪಾಲ್ಗೊಳ್ಳುತ್ತಿದ್ದ ನೆನಪುಗಳು ಇಂದು ನಿನ್ನೆಯಂತಿದೆ. ಈ ಬಾರಿ ಎಂದಿನಂತೆ ನವರಾತ್ರಿ ಗೌಜಿಯಾಗಿಯೇ ನಡೆದಿದೆ. ಯಾವುದೇ ಲೋಪವಿಲ್ಲದೆ, ಆಚರಣೆಗೆ ಭಂಗವಿಲ್ಲದೆ ದೇವಿಯ ಆರಾಧನೆ ನಡೆದಿದೆ. ನಮ್ಮ ವಾಹನಗಳಿಗೆ, ಯಂತ್ರೋಪಕರಣಗಳಿಗೆ ಪೂಜೆ ಮಾಡಿ ಮುಂದಿನ ವರ್ಷವಿಡೀ ಸಾಂಗವಾಗಿ ಕಾರ್ಯನಿರ್ವಹಿಸುವಲ್ಲಿ ಸಹಕಾರ ನೀಡುವಂತೆ ಪಾರ್ಥಿಸಿದ್ದಾಯಿತು.

ಮುಂದಿನ ದಿನಗಳಲ್ಲಿ ಕೊರೊನಾ ಸಹಿತ ಇತರ ಕಂಟಕಗಳ ನಿವಾರಣೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾ ಎಲ್ಲೆಡೆ ವಿಜಯದಶಮಿಯ ಆಚರಣೆಯೊಂದಿಗೆ ನವರಾತ್ರಿಯನ್ನು ಭಕ್ತರು ಸಂಪನ್ನಗೊಳಿಸಿದರು.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

2 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

2 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

9 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

10 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago