Advertisement
ಅಂಕಣ

ನವರಾತ್ರಿ ಸಂಭ್ರಮಕ್ಕೆ ತೆರೆ | ದೇವಿಯ ಆರಾಧನೆಯಿಂದ ನೆಮ್ಮದಿ ಕಂಡ ಭಕ್ತರು |

Share

ಸರಣಿ ಹಬ್ಬಗಳಲ್ಲಿ ಬಹುದಿನಗಳ ಸಂಭ್ರಮವಿರುವ ನವರಾತ್ರಿ ಮುಗಿದಿದೆ. ವಾರಗಳ ಕಾಲ ದೇವಿಯ ಆರಾಧನೆಯಲ್ಲಿ ತೊಡಗಿಸಿಕೊಂಡ ಭಕ್ತರ ಮನದಲ್ಲಿ ತೃಪ್ತಿಯ ಭಾವನೆ.

Advertisement
Advertisement

ಹಲವು ರೀತಿಯಲ್ಲಿ ಅರ್ಚಿಸಿ , ಪೂಜಿಸಿ, ಅಲಂಕರಿಸಿ ಎಲ್ಲಾ ರೀತಿಯಲ್ಲೂ ತಮ್ಮನ್ನು ಸಮರ್ಪಿಸಿ ಕೊಂಡ ಭಕ್ತರಿಗೆ ಏನೋ ಖಾಲಿಯಾದ ಅನುಭವ. ಶಾಲಾ ಮಕ್ಕಳಿಗೆ ವರ್ಷವಿಡೀ ಕಾದು ಕುಳಿತು ತಮ್ಮ ಪ್ರತಿಭೆಯನ್ನು ಓರೆಗೆ ಹಚ್ಚುವ ವಾರ್ಷಿಕೋತ್ಸವ ಮುಗಿದ ಅನುಭವ ಭಕ್ತರಿಗೆ.

Advertisement

ಈ ಬಾರಿಯ ನವರಾತ್ರಿ ನನಗೆ 25 ವರ್ಷಗಳ ಹಿಂದಿನ ಆಚರಣೆಯನ್ನು ನೆನಪಿಸಿತು. ಆ ದಿನಗಳಲ್ಲಿ ನಮ್ಮ ಊರಿನ ದೇವಾಲಯದಲ್ಲಿ ‌ ನವರಾತ್ರಿ ಹಬ್ಬದ ಆಚರಣೆ ಪ್ರತೀ ವರ್ಷ ನಡೆಯುತ್ತಿತ್ತು. ಒಂಬತ್ತು ದಿನಗಳ ಕಾಲ ನಡೆಯುತ್ತಿದ್ದ ಆಚರಣೆಯಲ್ಲಿ ಇಡೀ ಗ್ರಾಮದವರು ಮನೆಯ ಹಬ್ಬವೆಂಬಂತೆ ಭಾಗವಹಿಸುತ್ತಿದ್ದರು. ಅಲ್ಲಿ ಪೂಜೆ ನಡೆಯುವಾಗ ‌ ದಿನಕ್ಕೊಂದು ತಂಡದವರು ಭಜನೆ ಮಾಡುತ್ತಿದ್ದರು. ಅವರೊಂದಿಗೆಲ್ಲರೂ ದನಿ ಸೇರಿಸುತ್ತಿದ್ದರು. ದೇವರ ಪ್ರಸಾದವಾಗಿ‌ ಅವಲಕ್ಕಿ, ಗಟ್ಟಿ ಪಾಯಸ, ಕ್ಷೀರ ಮೊದಲಾದವುಗಳನ್ನು ವಿತರಿಸುತ್ತಿದ್ದರು.

ವಿಜಯದಶಮಿಯಂದು ನಡೆಯುತ್ತಿದ್ದ ಅನ್ನ ಸಂತರ್ಪಣೆಯಲ್ಲಿ ಎಲ್ಲರೂ ಪಾಲ್ಗೊಳ್ಳುತ್ತಿದ್ದ ನೆನಪುಗಳು ಇಂದು ನಿನ್ನೆಯಂತಿದೆ. ಈ ಬಾರಿ ಎಂದಿನಂತೆ ನವರಾತ್ರಿ ಗೌಜಿಯಾಗಿಯೇ ನಡೆದಿದೆ. ಯಾವುದೇ ಲೋಪವಿಲ್ಲದೆ, ಆಚರಣೆಗೆ ಭಂಗವಿಲ್ಲದೆ ದೇವಿಯ ಆರಾಧನೆ ನಡೆದಿದೆ. ನಮ್ಮ ವಾಹನಗಳಿಗೆ, ಯಂತ್ರೋಪಕರಣಗಳಿಗೆ ಪೂಜೆ ಮಾಡಿ ಮುಂದಿನ ವರ್ಷವಿಡೀ ಸಾಂಗವಾಗಿ ಕಾರ್ಯನಿರ್ವಹಿಸುವಲ್ಲಿ ಸಹಕಾರ ನೀಡುವಂತೆ ಪಾರ್ಥಿಸಿದ್ದಾಯಿತು.

Advertisement

ಮುಂದಿನ ದಿನಗಳಲ್ಲಿ ಕೊರೊನಾ ಸಹಿತ ಇತರ ಕಂಟಕಗಳ ನಿವಾರಣೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾ ಎಲ್ಲೆಡೆ ವಿಜಯದಶಮಿಯ ಆಚರಣೆಯೊಂದಿಗೆ ನವರಾತ್ರಿಯನ್ನು ಭಕ್ತರು ಸಂಪನ್ನಗೊಳಿಸಿದರು.

# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

7 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

7 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

7 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

7 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

8 hours ago