Advertisement
ಸುದ್ದಿಗಳು

ಅಸುರ ಸಂಹಾರಕ್ಕೆ ತ್ರಿಪುರಸುಂದರಿಗೆ ಮೋಹವೇ ಅಸ್ತ್ರ – ರಾಘವೇಶ್ವರ ಶ್ರೀ

Share

ಧರ್ಮರಕ್ಷಣೆಗೆ ವೀರ ರಸ, ಭೀಬತ್ಸ ರಸಗಳೇ ಪ್ರಧಾನವಲ್ಲ; ಶೃಂಗಾರರಸದ ಮೂಲಕವೂ ಧರ್ಮರಕ್ಷಣೆ ಮಾಡಬಹುದು ಎಂಬ ತತ್ವವನ್ನು ಜಗನ್ಮಾತೆ ತ್ರಿಪುರಸುಂದರಿ ಲೋಕಕ್ಕೆ ದರ್ಶನ ಮಾಡಿಸಿಕೊಟ್ಟಿದ್ದಾಳೆ. ಜಗನ್ಮಾತೆ ಜಗನ್ಮೋಹಿನಿ ರೂಪದಿಂದ ದುಷ್ಟ ಶಕ್ತಿಗಳ ಸಂಹಾರ ಮಾಡಿ ಧರ್ಮರಕ್ಷಣೆ ಮಾಡಿದ ಅದ್ಭುತ ಕಥಾನಕ ಶ್ರೀ ಲಲಿತೋಪಾಖ್ಯಾನ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಹೇಳಿದರು. 

Advertisement
Advertisement

ಮಾಣಿ ಪೆರಾಜೆಯ ಶ್ರೀರಾಮಚಂದ್ರಾಪುರ ಮಠದಲ್ಲಿ ನವರಾತ್ರ ನಮಸ್ಯಾ ಅಂಗವಾಗಿ ‘ಶ್ರೀ ಲಲಿತೋಪಾಖ್ಯಾನ’ ಪ್ರವಚನ ಮಾಲಿಕೆಯ ಮೂರನೇ ದಿನದ ಪ್ರವಚನವನ್ನು ಶ್ರೀಗಳು ಅನುಗ್ರಹಿಸಿದರು.

Advertisement

ದೇವಿಯ ಮೊದಲ ರೂಪ ಪ್ರಕೃತಿಯಾದರೆ, ಎರಡನೇ ರೂಪ ವಿಷ್ಣುವಿನ ಮೂಲಕ ಐಕ್ಯಮತ್ಯ ಸಾಧಿಸಿದ ಮೋಹಿನಿ ಎರಡನೇ ರೂಪ ಎಂಬ ಉಲ್ಲೇಖ ಲಲಿತೋಪಾಖ್ಯಾನದಲ್ಲಿದೆ. ಪರಮ ವೈರಾಗ್ಯ ಮೂರ್ತಿಯಾದ ಸಾಕ್ಷಾತ್ ಶಿವ ಕೂಡಾ ಮೋಹಿನಿ ರೂಪಕ್ಕೆ ಮಾರುಹೋಗುತ್ತಾನೆ. ಹರಿ-ಹರ ತತ್ವಗಳ ದಿವ್ಯ, ಅಲೌಕಿಕ ಸಂಯೋಗದಿಂದ ಮಹಾಶಕ್ತಿ ಮಹಾಶಾಸ್ತನ ಆವೀರ್ಭಾವವಾಯಿತು ಎಂದು ಬಣ್ಣಿಸಿದರು.

ಕೆಂಪು ದಾಸವಾಳದ ಮೈಬಣ್ಣ, ಕೆಂಪು ಬಣ್ಣದ ಮಾಲೆ, ಅದೇ ಬಣ್ಣದ ಸೀರೆ ಹೀಗೆ ಅರುಣವರ್ಣ ಇಡೀ ಮಾತೆಯನ್ನು ಆವರಿಸಿತ್ತು. ಮೋಹಿನಿ ಸ್ವರೂಪಳಾದ ಮಾತೆಗೆ ಮೋಹವೇ ಅಸ್ತ್ರ. ಇಡೀ ಜಗತ್ತನ್ನೇ ಮೋಹಗೊಳಿಸುವಂಥ ಮಾಂತ್ರಿಕಶಕ್ತಿ ಮಾತೆಯದ್ದು. ಮೋಹ ಎನ್ನುವುದು ಷಡ್ವೈರಿಗಳಲ್ಲಿ ಒಂದು. ಮೋಹಪಾಷದಲ್ಲಿ ಜನ ವಿವೇಕ ಕಳೆದುಕೊಳ್ಳುತ್ತಾರೆ. ಸರಿ- ತಪ್ಪು ಯಾವುದು ಎಂಬ ಚಿಂತನೆ ಇರುವುದಿಲ್ಲ ಎಂದು ವಿಶ್ಲೇಷಿಸಿದರು.

Advertisement

ಮೋಹ ಎನ್ನುವುದು ನಮ್ಮೊಳಗಿನ ಶತ್ರು. ರಾವಣನ ಸಾವಿಗೆ ರಾಮ ನಿಮಿತ್ತ ಮಾತ್ರ; ಆತನನ್ನು ನಿಜವಾಗಿ ಸಾಯಿಸಿರುವುದು ಆತನ ಮೋಹ. ಆದರೆ ಮೋಹಿನಿ ವಾಸ್ತವವಾಗಿ ಮಾತೆಯ ಸ್ವರೂಪ. ಅದನ್ನು ಕೆಟ್ಟದ್ದು ಎನ್ನಲಾಗದು. ದೇವಸೃಷ್ಟಿಯಲ್ಲಿ ಕೆಟ್ಟದ್ದು ಇರಲು ಸಾಧ್ಯವೇ ಇಲ್ಲ. ವಾಸ್ತವವಾಗಿ ಕೆಟ್ಟದ್ದು ಇರುವುದು ನಮ್ಮ ಮನಸ್ಸಿನಲ್ಲಿ ಎಂದು ಪ್ರತಿಪಾದಿಸಿದರು.
ಬೆಂಕಿ, ಆಯುಧ, ಹೀಗೆ ಪ್ರತಿಯೊಂದನ್ನೂ ಒಳ್ಳೆಯದು ಹಾಗೂ ಕೆಟ್ಟದ್ದು ಎರಡಕ್ಕೂ ಬಳಸಲು ಸಾಧ್ಯ. ಆದ್ದರಿಂದ ಮೋಹ ಕೂಡಾ ಕೆಟ್ಟದ್ದು ಎನ್ನಲು ಸಾಧ್ಯವಿಲ್ಲ. ಮೋಹದಿಂದ ಒಳಿತು ಆಗಿರುವ ನಿದರ್ಶನಗಳೂ ಇವೆ ಎಂದು ಉದಾಹರಣೆ ಸಹಿತ ವಿವರಿಸಿದರು.

ಮೋಹ ಎನ್ನುವುದು ನಮ್ಮನ್ನು ಪರಸ್ಪರ ಬಂಧಿಸಿದೆ. ಇದಕ್ಕೂ ಜೀವನದಲ್ಲಿ ಒಂದು ಪ್ರಮುಖ ಪಾತ್ರ ಇದೆ. ಮೋಹವನ್ನು ಸರ್ವಥಾ ತ್ಯಾಜ್ಯ ಎನ್ನಲು ಸಾಧ್ಯವಿಲ್ಲ. ದೇವ-ದಾನವರಂಥ ಬದ್ಧ ವೈರಿಗಳು ಕೂಡಾ ಸಮುದ್ರ ಮಥನಕ್ಕೆ ಒಂದಾಗುವಂತೆ ಶ್ರೀಮನ್ನಾರಾಯಣ ಮಾಡಿರುವುದು ಈ ಮೋಹದಿಂದ ಎಂಬ ಉದಾಹರಣೆ ನೀಡಿದರು.

Advertisement

ಒಳಿತು ಶಾಶ್ವತವಾಗಬೇಕು. ಕೆಡುಕು ಶಾಶ್ವತವಾಗಬಾರದು ಎಂಬ ಕಾರಣಕ್ಕೆ ಲೋಕದ ಏಕೈಕ ರಕ್ಷಕನಾದ ಶ್ರೀಮನ್ನಾರಾಯಣ, ದೇವತೆಗಳಿಗೆ ಅಮೃತ ಸಿಗುವಂತೆ ಮಾಡುತ್ತಾನೆ. ಇದಕ್ಕಾಗಿ ಲಲಿತಾ ತ್ರಿಪುರಸುಂದರಿಯನ್ನು, ರಾಜರಾಜೇಶ್ವರಿಯನ್ನು ಅಂತರಂಗದಲ್ಲಿ ಆರಾಧಿಸುತ್ತಾನೆ. ಆಗ ಐಕ್ಯರೂಪಳಾದ ಲಲಿತಾ ತ್ರಿಪುರಸುಂದರಿ ಲೋಕಕಲ್ಯಾಣಕ್ಕೆ ಆವೀರ್ಭವಿಸುತ್ತಾಳೆ ಎಂದರು.

Advertisement

ಮೋಹದ ಮೂಲ ಮಹಾಮಾಯೆ, ಆದಿಶಕ್ತಿ. ಆಕೆ ವಿಷ್ಣುವಿನ ಐಕ್ಯರೂಪಿಣಿ ಎನ್ನುವ ಸ್ಪಷ್ಟ ಉಲ್ಲೇಖ ಲಲಿತೋಪಾಖ್ಯಾನದಲ್ಲಿದೆ. ಅಗಸ್ತ್ಯರು ಕಾಮಾಕ್ಷಿಯ ದರ್ಶನ ಮಾಡಿದಾಗ, ಅದು ಹರಿಯ ತಪಸ್ಸು ಮಾಡಿದಂತೆ ಆಯಿತು. ಆಗ ಆವೀರ್ಭವಿಸಿದ್ದು ಹಯಗ್ರೀವ. ಹಯಗ್ರೀವ ಮುನಿ ಶ್ರೀವಿದ್ಯೆಯನ್ನು ಕರುಣಿಸಿದ ಎಂದು ಬಣ್ಣಿಸಿದರು.

ಶಿವನ ಅರ್ಧಭಾಗ ವಿಷ್ಣು ಎನ್ನುವುದನ್ನು ಎಲ್ಲ ಶಾಸ್ತ್ರಗಳು ಹೇಳುತ್ತವೆ. ಸರ್ವಜ್ಞತ್ವ, ಈಶ್ವರತ್ವ ಎರಡರ ಸಂಯೋಗವೇ ಹರಿಹರ ರೂಪ. ಒಂದೇ ದೇಹದ ಸಹಸ್ರ ಚಕ್ರಗಳಲ್ಲಿ ಎಡ-ಬಲಗಳೆಂಬ ಎರಡು ಭಾಗಗಳೇ ಶಿವ- ವಿಷ್ಣು. ಮೋಹಿನಿ ರೂಪ ಕೂಡಾ ಇದಕ್ಕೆ ಇನ್ನೊಂದು ನಿದರ್ಶನ. ಮೋಹಿನಿ ಹರಿ-ಹರ ಶಕ್ತಿಗಳ ಅದ್ವೈತರೂಪ. ಆದರೆ ಶೈವರು ಮತ್ತು ವೈಷ್ಣವರ ನಡುವೆ ಸಮನ್ವಯ ಇಲ್ಲದಿರುವುದು ವಿಪರ್ಯಾಸ ಎಂದರು.

Advertisement

ರೂಪ ನೂರಾರು; ಆದರೆ ತತ್ವ ಒಂದೇ ಎಂಬ ಭಾವ ನಮ್ಮದಾಗಬೇಕು. ದೇವಭಾವ ಒಂದೇ. ರೂಪ ಮಾತ್ರ ಬೇರೆ ಎನ್ನುವುದು ವಾಸ್ತವ. ಸರ್ವ ಸಮ್ಮೋಹಿನಿ ರೂಪವನ್ನು ಮೋಹಿನಿ ತಳೆಯುತ್ತಾಳೆ. ಆಕೆಯನ್ನು ನೋಡಿದ ಎಲ್ಲರೂ ಆ ರೂಪದಲ್ಲೇ ಆಕೆಯ ವಶವಾಗಿರುತ್ತಾರೆ.

ಧರ್ಮರಕ್ಷಣೆಯ ಕಾರ್ಯ ವೀರ ರಸದ ಮೂಲಕ, ಭೀಬತ್ಸರಸದ ಮೂಲಕ ಆಗುವುದಿದೆ. ಆದರೆ ಲಲಿತೋಪಾಖ್ಯಾನದಲ್ಲಿ ಶೃಂಗಾರರೂಪವನ್ನು ಲಲಿತಾ ತ್ರಿಪುರಸುಂದರಿ ತಾಳುತ್ತಾಳೆ. ಸೃಷ್ಟಿಯ ಎಲ್ಲ ಅಲಂಕಾರಗಳಿಂದ ಭೂಷಿತಳಾದ ಶ್ರೀಮಾತೆ ಯುದ್ಧಭೂಮಿಗೆ ಬಂದು ಅನ್ಯಾಯದ ವಿರುದ್ಧ ಮೋಹಾಸ್ತ್ರದಿಂದ ಹೋರಾಡಿದಳು. ಸುಕೋಮಲ ರೂಪದ ಮೋಹಿನಿಯ ಆಗಮನವಾಗುತ್ತಿದ್ದಂತೆ ದೇವದಾನವರ ಯುದ್ಧ ನಿಂತಿತು ಎಂದು ಹೇಳಿದರು.

Advertisement

ರಾಕ್ಷಸರತ್ತ ತಿರುಗಿ ಮುಗುಳು ನಗೆ ಬೀರುತ್ತಿದ್ದಂತೆ ಇಡೀ ರಾಕ್ಷಸರು ಆಕೆಯ ವಶವಾಗುತ್ತಾರೆ. ಮೋಹದ ಪ್ರಭಾವ ಅಂಥದ್ದು. ಶಕ್ತಿಶಾಲಿ ಅಸ್ತ್ರ ಅದು. ಜಗದಂಬೆ, ತ್ರಿಪುರಸುಂದರಿಯ ವಶವಾದ ರಾಕ್ಷಸರು ಅಮೃತಕಶಲವನ್ನು ಮೋಹಿನಿಗೆ ತಂದೊಪ್ಪಿಸುತ್ತಾರೆ. ಜಗನ್ಮಾತೆಯ ಆದೇಶದಂತೆ ರಾಕ್ಷಸರು ಮತ್ತು ದೇವತೆಗಳು ಎರಡು ಪಂಕ್ತಿಗಳಾಗಿ ಕುಳಿತು ಅಮೃತ ಸ್ವಾದಕ್ಕೆ ಮುಂದಾಗುತ್ತಾರೆ. ಮೋಹದ ಮಾಯೆಯಿಂದಾಗಿ ಅಮೃತವನ್ನು ದೇವತೆಗಳಿಗೆ ಬಡಿಸಿದಾಗಲೂ, ರಾಕ್ಷಸರು ಸುಮ್ಮನಿರುತ್ತಾರೆ. ಆಕೆಯ ಕೈಗಳ ಝಣ ಝಣ ಸದ್ದಿನಿಂದಲೇ ರಾಕ್ಷಸರು ಮೋಹಪರವಶರಾಗುತ್ತಾರೆ. ದೃಶಂತಿ ಎಂಬ ಒಬ್ಬ ಮಾತ್ರ ದೇವತೆಗಳ ರೂಪದಲ್ಲಿ ದೇವರ ಸಾಲಿನಲ್ಲಿ ಕುಳಿತುಕೊಳ್ಳುತ್ತಾನೆ. ಇತರ ಯಾವ ರಾಕ್ಷಸರಿಗೂ ಅಮೃತ ಲಭಿಸಬಾರದು ಎನ್ನುವ ಸ್ವಾರ್ಥ ಆತನಲ್ಲಿರುತ್ತದೆ. ಆತ ಅಮೃತವನ್ನು ಸವಿಯಲು ಮುಂದಾಗುತ್ತಿದ್ದಂತೆಯೇ ಅದೇ ಸೌಟಿನಿಂದಲೇ ಆತನ ಶಿರಚ್ಛೇದ ಮಾಡುತ್ತಾಳೆ. ಅಮೃತ ಆತನ ಶಿರಸ್ಸಿನ ಭಾಗ ತಲುಪಿದ್ದರಿಂದ ಆತ ರಾಹುವಾಗಿ, ಗ್ರಹವಾಗಿ ಮಾರ್ಪಡುತ್ತಾನೆ ಎಂದು ಬಣ್ಣಿಸಿದರು.ದೊಡ್ಡ ಕೆಡುಕು ಸಮಾಜಕ್ಕೆ ಎದುರಾದಾಗ ಅದನ್ನು ಬಗೆಹರಿಸುವ ಮಹಾನ್ ಅವತಾರದ ಉದಯವಾಗುತ್ತದೆ. ಕೆಡುಕು ಕೆಡುಕಲ್ಲ; ಇದು ದೊಡ್ಡ ಒಳಿತಿನ ಮುನ್ಸೂಚನೆ ಎಂದರು.

ಬಂಡಾಸುರನಿಗೆ ದೈತ್ಯರನ್ನು ಸೃಷ್ಟಿ ಮಾಡುವ ಶಕ್ತಿ ಇತ್ತು. ಆತನ ಇಬ್ಬರು ತಮ್ಮ ಹಾಗೂ ಒಬ್ಬಾಕೆ ತಂಗಿಯನ್ನು ಸೃಷ್ಟಿ ಮಾಡಿ ಲೋಕಕಂಟಕನಾಗುತ್ತಾನೆ. ದೇವತೆಗಳು ಭೀತಿಯಿಂದ ಅಡಗಿ ಕುಳಿತುಕೊಳ್ಳುವಂತಾಗುತ್ತದೆ. ಆತನ ಕ್ರೌರ್ಯ ಮುಗಿಲು ಮುಟ್ಟಿದ್ದಾಗ ಅಗ್ನಿಕುಂಡದಿಂದ ತ್ರಿಪುರ ಸುಂದರಿ ಮೇಲೆದ್ದು ಬಂದಳು ಎಂದು ಕಥಾ ಭಾಗವನ್ನು ಮುಕ್ತಾಯಗೊಳಿಸಿದರು.

Advertisement

ಉಂಡೆಮನೆ ವಿಶ್ವೇಶ್ವರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಮಠದ ವಿತ್ತಾಧಿಕಾರಿ ಜೆ.ಎಲ್.ಗಣೇಶ್, ಮಾಣಿಮಠ ಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್, ಮಂಗಳೂರಿನ ಉದ್ಯಮಿ ನೆಡ್ಲೆ ರಾಮ ಭಟ್ ದಂಪತಿ, ಪ್ರಧಾನ ಕಾರ್ಯದರ್ಶಿ ಉದಯಶಂಕರ ಮಿತ್ತೂರು, ವಿದ್ಯಾರ್ಥಿ ಪ್ರಧಾನರಾದ ಈಶ್ವರ ಪ್ರಸಾದ್ ಕನ್ಯಾನ, ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಮಾತೃವಿಭಾಗದ ಪ್ರಮುಖರಾದ ವೀಣಾ ಗೋಪಾಲಕೃಷ್ಣ ಪುಳು, ಉಪ್ಪಿನಂಗಡಿ ಮಂಡಲ ಅಧ್ಯಕ್ಷ ಈಶ್ವರ ಪ್ರಸನ್ನ ಪೆರ್ನೆಕೋಡಿ, ಕಾರ್ಯದರ್ಶಿ ಮಹೇಶ್ ಕುದುಪುಲ ಮತ್ತಿತರರು ಉಪಸ್ಥಿತರಿದ್ದರು.

'Sri Lalitopakhyana' Pravachana series as part of Navratra Namasya at Sri Ramachandrapur Mutt of Mani Peraje.
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ

ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…

14 hours ago

ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ

ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…

15 hours ago

ಇಂದು ಅಂತಾರಾಷ್ಟ್ರೀಯ ಕುಟುಂಬ ದಿನ : ಅಂದಿನ ಕೂಡು ಕುಟುಂಬ ಇಂದಿನ ವಿಭಕ್ತ ಕುಟುಂಬ

ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…

15 hours ago

ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…

15 hours ago

ಗ್ರಾಹಕನಿಗೆ ಶಾಕ್‌ ಕೊಟ್ಟ ವಿದ್ಯುತ್‌ ಇಲಾಖೆ : ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್ ಕಂಡು ವ್ಯಕ್ತಿ ಕಂಗಾಲು

ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್‌ ಉಚಿತ(Free Current). ಇಂಥ…

18 hours ago

ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?

ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…

23 hours ago