ಪಂಜದಲ್ಲಿ ನವರಾತ್ರಿ ವಿಶೇಷ | ದೇವಸ್ಥಾನದಲ್ಲಿ ಕಲಾಸೇವೆ | ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಅವಕಾಶ

October 21, 2023
6:32 PM
ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಿ ದೇವರಿಗೆ ಸೇವೆಯನ್ನು ನೀಡುವುದು ಹಾಗೂ ಈ ಮೂಲಕ ಸ್ಥಳೀಯ ಕಲಾಪ್ರಕಾರಗಳನ್ನು ಬೆಳೆಸುವುದು ದಸರಾದ ಸಂದರ್ಭ ನಡೆಯುತ್ತಿತ್ತು. ಇದೀಗ ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲೂ ಅಂತಹ ಪ್ರಯತ್ನ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ  ನವರಾತ್ರಿ ಉತ್ಸವ ಆರಂಭಗೊಂಡಿದೆ. ಉತ್ಸವದ ಪ್ರತೀ ದಿನ ಕಲಾಸೇವೆ ನಡೆಯುತ್ತಿದೆ. ಈ ಮೂಲಕ ಗ್ರಾಮೀಣ ಭಾಗದ ಕಲಾವಿದರಿಗೆ ಅವಕಾಶದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಸೇವೆಯನ್ನೂ ಕೈಗೊಳ್ಳಲಾಗುತ್ತಿದೆ.

ಅನೇಕ ವರ್ಷಗಳಿಂದಲೂ  ದೇವಸ್ಥಾನಗಳಲ್ಲಿ ಕಲಾ ಸೇವೆ ನಡೆಯುತ್ತಿತ್ತು. ಅನೇಕ ದೇವಸ್ಥಾನಗಳು ಕಲೆಗಳನ್ನು ಬೆಳೆಸುವ ಹಾಗೂ ಧಾರ್ಮಿಕ ಆಚರಣೆಗಳನ್ನು ಬೆಳೆಸುವ ಕೇಂದ್ರಗಳೂ ಆಗಿತ್ತು. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಿ ದೇವರಿಗೆ ಸೇವೆಯನ್ನು ನೀಡುವುದು ಹಾಗೂ ಈ ಮೂಲಕ ಸ್ಥಳೀಯ ಕಲಾಪ್ರಕಾರಗಳನ್ನು ಬೆಳೆಸುವುದು ಇದರ ಹಿಂದಿನ ಉದ್ದೇಶವೂ ಇತ್ತು. ದಸರಾದ ಮೂಲಕವೂ ಅಂತಹದ್ದೇ ಪ್ರಯತ್ನ ನಡೆಯುತ್ತಿದೆ.

ಇದೇ ಮಾದರಿಯಲ್ಲಿ ಗ್ರಾಮೀಣ ಭಾಗದಲ್ಲೂ ಸೇವೆಗಳು ನಡೆಯುತ್ತಿದೆ. ಸುಳ್ಯದ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ  ನವರಾತ್ರಿ ಉತ್ಸವದ ವೇಳೆ ಇಂತಹದ್ದೇ  ಪ್ರಯತ್ನ ನಡೆಯುತ್ತಿದೆ. ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಸೇವೆ ಹಾಗೂ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ವೇದಘೋಷ, ವೇಣುವಾದನ, ಯಕ್ಷಸೇವೆ, ಭರತನಾಟ್ಯ, ಭಜನೆ,ಭಕ್ತಿ ಸಂಗೀತ,ಪುರಾಣ ವಾಚನ ಕಲಾ ಸೇವೆ  ಸೇರಿದಂತೆ ವಿವಿಧ ಕಲಾಪ್ರಾಕಾರಗಳು ನಡೆಯಲಿದೆ.

ಶುಕ್ರವಾರ ರಾಮಚಂದ್ರ ಕಲ್ಮಡ್ಕ ಮತ್ತು ತಂಡದವರಿಂದ ವೇಣುವಾದನ ಕಲಾಸೇವೆ ನಡೆಯಿತು. ಶಂಕರನಾರಾಯಣ ಭಜನಾ ಮಂಡಳಿ ಹೆಬ್ಬರುಹಿತ್ಲು ಕೂತ್ಕುಂಜ ಇವರಿಂದ ಭಜನಾ ಮಂಡಳಿಯಿಂದ ಭಜನಾ ಸಂಕೀರ್ತನೆ.ವೆಂಕಟೇಶ್ ಭಟ್ ದೇವಸ್ಯ , ಗಗನ್ ಪಂಜ ಅವರಿಂದ ಚೆಂಡೆ, ತೇಜಸ್ ಪುತ್ರ ಅವರಿಂದ ಚಕ್ರತಾಳ ಕಲಾ ಸೇವೆ ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ
ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ
April 27, 2026
9:23 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror