ವಿಶೇಷ ವರದಿಗಳು

ಪಂಜದಲ್ಲಿ ನವರಾತ್ರಿ ವಿಶೇಷ | ದೇವಸ್ಥಾನದಲ್ಲಿ ಕಲಾಸೇವೆ | ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಅವಕಾಶ

Share

ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ  ನವರಾತ್ರಿ ಉತ್ಸವ ಆರಂಭಗೊಂಡಿದೆ. ಉತ್ಸವದ ಪ್ರತೀ ದಿನ ಕಲಾಸೇವೆ ನಡೆಯುತ್ತಿದೆ. ಈ ಮೂಲಕ ಗ್ರಾಮೀಣ ಭಾಗದ ಕಲಾವಿದರಿಗೆ ಅವಕಾಶದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಸೇವೆಯನ್ನೂ ಕೈಗೊಳ್ಳಲಾಗುತ್ತಿದೆ.

Advertisement

ಅನೇಕ ವರ್ಷಗಳಿಂದಲೂ  ದೇವಸ್ಥಾನಗಳಲ್ಲಿ ಕಲಾ ಸೇವೆ ನಡೆಯುತ್ತಿತ್ತು. ಅನೇಕ ದೇವಸ್ಥಾನಗಳು ಕಲೆಗಳನ್ನು ಬೆಳೆಸುವ ಹಾಗೂ ಧಾರ್ಮಿಕ ಆಚರಣೆಗಳನ್ನು ಬೆಳೆಸುವ ಕೇಂದ್ರಗಳೂ ಆಗಿತ್ತು. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಿ ದೇವರಿಗೆ ಸೇವೆಯನ್ನು ನೀಡುವುದು ಹಾಗೂ ಈ ಮೂಲಕ ಸ್ಥಳೀಯ ಕಲಾಪ್ರಕಾರಗಳನ್ನು ಬೆಳೆಸುವುದು ಇದರ ಹಿಂದಿನ ಉದ್ದೇಶವೂ ಇತ್ತು. ದಸರಾದ ಮೂಲಕವೂ ಅಂತಹದ್ದೇ ಪ್ರಯತ್ನ ನಡೆಯುತ್ತಿದೆ.

ಇದೇ ಮಾದರಿಯಲ್ಲಿ ಗ್ರಾಮೀಣ ಭಾಗದಲ್ಲೂ ಸೇವೆಗಳು ನಡೆಯುತ್ತಿದೆ. ಸುಳ್ಯದ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ  ನವರಾತ್ರಿ ಉತ್ಸವದ ವೇಳೆ ಇಂತಹದ್ದೇ  ಪ್ರಯತ್ನ ನಡೆಯುತ್ತಿದೆ. ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಸೇವೆ ಹಾಗೂ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ವೇದಘೋಷ, ವೇಣುವಾದನ, ಯಕ್ಷಸೇವೆ, ಭರತನಾಟ್ಯ, ಭಜನೆ,ಭಕ್ತಿ ಸಂಗೀತ,ಪುರಾಣ ವಾಚನ ಕಲಾ ಸೇವೆ  ಸೇರಿದಂತೆ ವಿವಿಧ ಕಲಾಪ್ರಾಕಾರಗಳು ನಡೆಯಲಿದೆ.

Advertisement

ಶುಕ್ರವಾರ ರಾಮಚಂದ್ರ ಕಲ್ಮಡ್ಕ ಮತ್ತು ತಂಡದವರಿಂದ ವೇಣುವಾದನ ಕಲಾಸೇವೆ ನಡೆಯಿತು. ಶಂಕರನಾರಾಯಣ ಭಜನಾ ಮಂಡಳಿ ಹೆಬ್ಬರುಹಿತ್ಲು ಕೂತ್ಕುಂಜ ಇವರಿಂದ ಭಜನಾ ಮಂಡಳಿಯಿಂದ ಭಜನಾ ಸಂಕೀರ್ತನೆ.ವೆಂಕಟೇಶ್ ಭಟ್ ದೇವಸ್ಯ , ಗಗನ್ ಪಂಜ ಅವರಿಂದ ಚೆಂಡೆ, ತೇಜಸ್ ಪುತ್ರ ಅವರಿಂದ ಚಕ್ರತಾಳ ಕಲಾ ಸೇವೆ ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ರಾಮಬಾಣದ ಇರಿತ

ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…

4 hours ago

ವಾಸ್ತು ಶಾಸ್ತ್ರದ ಮೂಲಕ ನಿಮ್ಮ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಸುವ 5 ಟಿಪ್ಸ್

ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…

4 hours ago

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

14 hours ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

14 hours ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

14 hours ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

14 hours ago