Advertisement
ವಿಶೇಷ ವರದಿಗಳು

ಪಂಜದಲ್ಲಿ ನವರಾತ್ರಿ ವಿಶೇಷ | ದೇವಸ್ಥಾನದಲ್ಲಿ ಕಲಾಸೇವೆ | ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಅವಕಾಶ

Share

ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ  ನವರಾತ್ರಿ ಉತ್ಸವ ಆರಂಭಗೊಂಡಿದೆ. ಉತ್ಸವದ ಪ್ರತೀ ದಿನ ಕಲಾಸೇವೆ ನಡೆಯುತ್ತಿದೆ. ಈ ಮೂಲಕ ಗ್ರಾಮೀಣ ಭಾಗದ ಕಲಾವಿದರಿಗೆ ಅವಕಾಶದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಸೇವೆಯನ್ನೂ ಕೈಗೊಳ್ಳಲಾಗುತ್ತಿದೆ.

ಅನೇಕ ವರ್ಷಗಳಿಂದಲೂ  ದೇವಸ್ಥಾನಗಳಲ್ಲಿ ಕಲಾ ಸೇವೆ ನಡೆಯುತ್ತಿತ್ತು. ಅನೇಕ ದೇವಸ್ಥಾನಗಳು ಕಲೆಗಳನ್ನು ಬೆಳೆಸುವ ಹಾಗೂ ಧಾರ್ಮಿಕ ಆಚರಣೆಗಳನ್ನು ಬೆಳೆಸುವ ಕೇಂದ್ರಗಳೂ ಆಗಿತ್ತು. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಿ ದೇವರಿಗೆ ಸೇವೆಯನ್ನು ನೀಡುವುದು ಹಾಗೂ ಈ ಮೂಲಕ ಸ್ಥಳೀಯ ಕಲಾಪ್ರಕಾರಗಳನ್ನು ಬೆಳೆಸುವುದು ಇದರ ಹಿಂದಿನ ಉದ್ದೇಶವೂ ಇತ್ತು. ದಸರಾದ ಮೂಲಕವೂ ಅಂತಹದ್ದೇ ಪ್ರಯತ್ನ ನಡೆಯುತ್ತಿದೆ.

ಇದೇ ಮಾದರಿಯಲ್ಲಿ ಗ್ರಾಮೀಣ ಭಾಗದಲ್ಲೂ ಸೇವೆಗಳು ನಡೆಯುತ್ತಿದೆ. ಸುಳ್ಯದ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ  ನವರಾತ್ರಿ ಉತ್ಸವದ ವೇಳೆ ಇಂತಹದ್ದೇ  ಪ್ರಯತ್ನ ನಡೆಯುತ್ತಿದೆ. ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಸೇವೆ ಹಾಗೂ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ವೇದಘೋಷ, ವೇಣುವಾದನ, ಯಕ್ಷಸೇವೆ, ಭರತನಾಟ್ಯ, ಭಜನೆ,ಭಕ್ತಿ ಸಂಗೀತ,ಪುರಾಣ ವಾಚನ ಕಲಾ ಸೇವೆ  ಸೇರಿದಂತೆ ವಿವಿಧ ಕಲಾಪ್ರಾಕಾರಗಳು ನಡೆಯಲಿದೆ.

ಶುಕ್ರವಾರ ರಾಮಚಂದ್ರ ಕಲ್ಮಡ್ಕ ಮತ್ತು ತಂಡದವರಿಂದ ವೇಣುವಾದನ ಕಲಾಸೇವೆ ನಡೆಯಿತು. ಶಂಕರನಾರಾಯಣ ಭಜನಾ ಮಂಡಳಿ ಹೆಬ್ಬರುಹಿತ್ಲು ಕೂತ್ಕುಂಜ ಇವರಿಂದ ಭಜನಾ ಮಂಡಳಿಯಿಂದ ಭಜನಾ ಸಂಕೀರ್ತನೆ.ವೆಂಕಟೇಶ್ ಭಟ್ ದೇವಸ್ಯ , ಗಗನ್ ಪಂಜ ಅವರಿಂದ ಚೆಂಡೆ, ತೇಜಸ್ ಪುತ್ರ ಅವರಿಂದ ಚಕ್ರತಾಳ ಕಲಾ ಸೇವೆ ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

8 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

17 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

17 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

17 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

17 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago