Advertisement
ವಿಶೇಷ ವರದಿಗಳು

ಪಂಜದಲ್ಲಿ ನವರಾತ್ರಿ ವಿಶೇಷ | ದೇವಸ್ಥಾನದಲ್ಲಿ ಕಲಾಸೇವೆ | ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಅವಕಾಶ

Share

ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ  ನವರಾತ್ರಿ ಉತ್ಸವ ಆರಂಭಗೊಂಡಿದೆ. ಉತ್ಸವದ ಪ್ರತೀ ದಿನ ಕಲಾಸೇವೆ ನಡೆಯುತ್ತಿದೆ. ಈ ಮೂಲಕ ಗ್ರಾಮೀಣ ಭಾಗದ ಕಲಾವಿದರಿಗೆ ಅವಕಾಶದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಸೇವೆಯನ್ನೂ ಕೈಗೊಳ್ಳಲಾಗುತ್ತಿದೆ.

ಅನೇಕ ವರ್ಷಗಳಿಂದಲೂ  ದೇವಸ್ಥಾನಗಳಲ್ಲಿ ಕಲಾ ಸೇವೆ ನಡೆಯುತ್ತಿತ್ತು. ಅನೇಕ ದೇವಸ್ಥಾನಗಳು ಕಲೆಗಳನ್ನು ಬೆಳೆಸುವ ಹಾಗೂ ಧಾರ್ಮಿಕ ಆಚರಣೆಗಳನ್ನು ಬೆಳೆಸುವ ಕೇಂದ್ರಗಳೂ ಆಗಿತ್ತು. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಿ ದೇವರಿಗೆ ಸೇವೆಯನ್ನು ನೀಡುವುದು ಹಾಗೂ ಈ ಮೂಲಕ ಸ್ಥಳೀಯ ಕಲಾಪ್ರಕಾರಗಳನ್ನು ಬೆಳೆಸುವುದು ಇದರ ಹಿಂದಿನ ಉದ್ದೇಶವೂ ಇತ್ತು. ದಸರಾದ ಮೂಲಕವೂ ಅಂತಹದ್ದೇ ಪ್ರಯತ್ನ ನಡೆಯುತ್ತಿದೆ.

ಇದೇ ಮಾದರಿಯಲ್ಲಿ ಗ್ರಾಮೀಣ ಭಾಗದಲ್ಲೂ ಸೇವೆಗಳು ನಡೆಯುತ್ತಿದೆ. ಸುಳ್ಯದ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ  ನವರಾತ್ರಿ ಉತ್ಸವದ ವೇಳೆ ಇಂತಹದ್ದೇ  ಪ್ರಯತ್ನ ನಡೆಯುತ್ತಿದೆ. ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಸೇವೆ ಹಾಗೂ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ವೇದಘೋಷ, ವೇಣುವಾದನ, ಯಕ್ಷಸೇವೆ, ಭರತನಾಟ್ಯ, ಭಜನೆ,ಭಕ್ತಿ ಸಂಗೀತ,ಪುರಾಣ ವಾಚನ ಕಲಾ ಸೇವೆ  ಸೇರಿದಂತೆ ವಿವಿಧ ಕಲಾಪ್ರಾಕಾರಗಳು ನಡೆಯಲಿದೆ.

ಶುಕ್ರವಾರ ರಾಮಚಂದ್ರ ಕಲ್ಮಡ್ಕ ಮತ್ತು ತಂಡದವರಿಂದ ವೇಣುವಾದನ ಕಲಾಸೇವೆ ನಡೆಯಿತು. ಶಂಕರನಾರಾಯಣ ಭಜನಾ ಮಂಡಳಿ ಹೆಬ್ಬರುಹಿತ್ಲು ಕೂತ್ಕುಂಜ ಇವರಿಂದ ಭಜನಾ ಮಂಡಳಿಯಿಂದ ಭಜನಾ ಸಂಕೀರ್ತನೆ.ವೆಂಕಟೇಶ್ ಭಟ್ ದೇವಸ್ಯ , ಗಗನ್ ಪಂಜ ಅವರಿಂದ ಚೆಂಡೆ, ತೇಜಸ್ ಪುತ್ರ ಅವರಿಂದ ಚಕ್ರತಾಳ ಕಲಾ ಸೇವೆ ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

2 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

12 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

13 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

13 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

19 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

21 hours ago