Advertisement
ವಿಶೇಷ ವರದಿಗಳು

ಪಂಜದಲ್ಲಿ ನವರಾತ್ರಿ ವಿಶೇಷ | ದೇವಸ್ಥಾನದಲ್ಲಿ ಕಲಾಸೇವೆ | ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಅವಕಾಶ

Share

ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ  ನವರಾತ್ರಿ ಉತ್ಸವ ಆರಂಭಗೊಂಡಿದೆ. ಉತ್ಸವದ ಪ್ರತೀ ದಿನ ಕಲಾಸೇವೆ ನಡೆಯುತ್ತಿದೆ. ಈ ಮೂಲಕ ಗ್ರಾಮೀಣ ಭಾಗದ ಕಲಾವಿದರಿಗೆ ಅವಕಾಶದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಸೇವೆಯನ್ನೂ ಕೈಗೊಳ್ಳಲಾಗುತ್ತಿದೆ.

ಅನೇಕ ವರ್ಷಗಳಿಂದಲೂ  ದೇವಸ್ಥಾನಗಳಲ್ಲಿ ಕಲಾ ಸೇವೆ ನಡೆಯುತ್ತಿತ್ತು. ಅನೇಕ ದೇವಸ್ಥಾನಗಳು ಕಲೆಗಳನ್ನು ಬೆಳೆಸುವ ಹಾಗೂ ಧಾರ್ಮಿಕ ಆಚರಣೆಗಳನ್ನು ಬೆಳೆಸುವ ಕೇಂದ್ರಗಳೂ ಆಗಿತ್ತು. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಿ ದೇವರಿಗೆ ಸೇವೆಯನ್ನು ನೀಡುವುದು ಹಾಗೂ ಈ ಮೂಲಕ ಸ್ಥಳೀಯ ಕಲಾಪ್ರಕಾರಗಳನ್ನು ಬೆಳೆಸುವುದು ಇದರ ಹಿಂದಿನ ಉದ್ದೇಶವೂ ಇತ್ತು. ದಸರಾದ ಮೂಲಕವೂ ಅಂತಹದ್ದೇ ಪ್ರಯತ್ನ ನಡೆಯುತ್ತಿದೆ.

ಇದೇ ಮಾದರಿಯಲ್ಲಿ ಗ್ರಾಮೀಣ ಭಾಗದಲ್ಲೂ ಸೇವೆಗಳು ನಡೆಯುತ್ತಿದೆ. ಸುಳ್ಯದ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ  ನವರಾತ್ರಿ ಉತ್ಸವದ ವೇಳೆ ಇಂತಹದ್ದೇ  ಪ್ರಯತ್ನ ನಡೆಯುತ್ತಿದೆ. ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಸೇವೆ ಹಾಗೂ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ವೇದಘೋಷ, ವೇಣುವಾದನ, ಯಕ್ಷಸೇವೆ, ಭರತನಾಟ್ಯ, ಭಜನೆ,ಭಕ್ತಿ ಸಂಗೀತ,ಪುರಾಣ ವಾಚನ ಕಲಾ ಸೇವೆ  ಸೇರಿದಂತೆ ವಿವಿಧ ಕಲಾಪ್ರಾಕಾರಗಳು ನಡೆಯಲಿದೆ.

ಶುಕ್ರವಾರ ರಾಮಚಂದ್ರ ಕಲ್ಮಡ್ಕ ಮತ್ತು ತಂಡದವರಿಂದ ವೇಣುವಾದನ ಕಲಾಸೇವೆ ನಡೆಯಿತು. ಶಂಕರನಾರಾಯಣ ಭಜನಾ ಮಂಡಳಿ ಹೆಬ್ಬರುಹಿತ್ಲು ಕೂತ್ಕುಂಜ ಇವರಿಂದ ಭಜನಾ ಮಂಡಳಿಯಿಂದ ಭಜನಾ ಸಂಕೀರ್ತನೆ.ವೆಂಕಟೇಶ್ ಭಟ್ ದೇವಸ್ಯ , ಗಗನ್ ಪಂಜ ಅವರಿಂದ ಚೆಂಡೆ, ತೇಜಸ್ ಪುತ್ರ ಅವರಿಂದ ಚಕ್ರತಾಳ ಕಲಾ ಸೇವೆ ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

3 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

4 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

4 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

9 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago