Advertisement
ವಿಶೇಷ ವರದಿಗಳು

ಪಂಜದಲ್ಲಿ ನವರಾತ್ರಿ ವಿಶೇಷ | ದೇವಸ್ಥಾನದಲ್ಲಿ ಕಲಾಸೇವೆ | ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಅವಕಾಶ

Share

ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ  ನವರಾತ್ರಿ ಉತ್ಸವ ಆರಂಭಗೊಂಡಿದೆ. ಉತ್ಸವದ ಪ್ರತೀ ದಿನ ಕಲಾಸೇವೆ ನಡೆಯುತ್ತಿದೆ. ಈ ಮೂಲಕ ಗ್ರಾಮೀಣ ಭಾಗದ ಕಲಾವಿದರಿಗೆ ಅವಕಾಶದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಸೇವೆಯನ್ನೂ ಕೈಗೊಳ್ಳಲಾಗುತ್ತಿದೆ.

ಅನೇಕ ವರ್ಷಗಳಿಂದಲೂ  ದೇವಸ್ಥಾನಗಳಲ್ಲಿ ಕಲಾ ಸೇವೆ ನಡೆಯುತ್ತಿತ್ತು. ಅನೇಕ ದೇವಸ್ಥಾನಗಳು ಕಲೆಗಳನ್ನು ಬೆಳೆಸುವ ಹಾಗೂ ಧಾರ್ಮಿಕ ಆಚರಣೆಗಳನ್ನು ಬೆಳೆಸುವ ಕೇಂದ್ರಗಳೂ ಆಗಿತ್ತು. ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಿ ದೇವರಿಗೆ ಸೇವೆಯನ್ನು ನೀಡುವುದು ಹಾಗೂ ಈ ಮೂಲಕ ಸ್ಥಳೀಯ ಕಲಾಪ್ರಕಾರಗಳನ್ನು ಬೆಳೆಸುವುದು ಇದರ ಹಿಂದಿನ ಉದ್ದೇಶವೂ ಇತ್ತು. ದಸರಾದ ಮೂಲಕವೂ ಅಂತಹದ್ದೇ ಪ್ರಯತ್ನ ನಡೆಯುತ್ತಿದೆ.

ಇದೇ ಮಾದರಿಯಲ್ಲಿ ಗ್ರಾಮೀಣ ಭಾಗದಲ್ಲೂ ಸೇವೆಗಳು ನಡೆಯುತ್ತಿದೆ. ಸುಳ್ಯದ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ  ನವರಾತ್ರಿ ಉತ್ಸವದ ವೇಳೆ ಇಂತಹದ್ದೇ  ಪ್ರಯತ್ನ ನಡೆಯುತ್ತಿದೆ. ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಸೇವೆ ಹಾಗೂ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ವೇದಘೋಷ, ವೇಣುವಾದನ, ಯಕ್ಷಸೇವೆ, ಭರತನಾಟ್ಯ, ಭಜನೆ,ಭಕ್ತಿ ಸಂಗೀತ,ಪುರಾಣ ವಾಚನ ಕಲಾ ಸೇವೆ  ಸೇರಿದಂತೆ ವಿವಿಧ ಕಲಾಪ್ರಾಕಾರಗಳು ನಡೆಯಲಿದೆ.

ಶುಕ್ರವಾರ ರಾಮಚಂದ್ರ ಕಲ್ಮಡ್ಕ ಮತ್ತು ತಂಡದವರಿಂದ ವೇಣುವಾದನ ಕಲಾಸೇವೆ ನಡೆಯಿತು. ಶಂಕರನಾರಾಯಣ ಭಜನಾ ಮಂಡಳಿ ಹೆಬ್ಬರುಹಿತ್ಲು ಕೂತ್ಕುಂಜ ಇವರಿಂದ ಭಜನಾ ಮಂಡಳಿಯಿಂದ ಭಜನಾ ಸಂಕೀರ್ತನೆ.ವೆಂಕಟೇಶ್ ಭಟ್ ದೇವಸ್ಯ , ಗಗನ್ ಪಂಜ ಅವರಿಂದ ಚೆಂಡೆ, ತೇಜಸ್ ಪುತ್ರ ಅವರಿಂದ ಚಕ್ರತಾಳ ಕಲಾ ಸೇವೆ ನಡೆಯಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

8 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

13 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

13 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

24 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago