Advertisement
ಸುದ್ದಿಗಳು

ಕೆಡುವ ಕಾಲ ಬಂದಾಗ ಹಿತೋಪದೇಶ ಸಹಿಸುವುದಿಲ್ಲ : ರಾಘವೇಶ್ವರ ಶ್ರೀ

Share

ಹಿರಿಯರು ಜಾಗರೂಕರಾಗಿ ಮುನ್ನಡೆಯಬೇಕು. ಅವರನ್ನು ಅನುಸರಿಸುವವರು ಇರುತ್ತಾರೆ. ಆದರೆ ಮೋಹ ಮಸುಕಿದಾಗ ತಿದ್ದಿ ಹೇಳಿದವರು ಬೇಡವಾಗುತ್ತಾರೆ. ಕೆಡುವ ಕಾಲ ಬಂದಾಗ ಹಿತೋಪದೇಶ ಸಹಿಸುವುದಿಲ್ಲ. ಶಿವನ ಆವಗಣನೆ, ಗುರುವಿಗೆ ಅವಮಾನ ಮಾಡುವವನು ಪುಣ್ಯ ಕಾರ್ಯ ನಿಲ್ಲಿಸಿ, ಪಾಪ ಕರ್ಮಗಳಿಗೆ ಅಂಟಿಕೊಳ್ಳುತ್ತಾನೆ ಎಂದು ರಾಮಚಂದ್ರಾಪುರ ಮಠದ  ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ನುಡಿದರು.

ಮಾಣಿ ಪೆರಾಜೆಯ ಶ್ರೀರಾಮಚಂದ್ರಾಪುರ ಮಠದಲ್ಲಿ ನವರಾತ್ರ ನಮಸ್ಯಾ ಅಂಗವಾಗಿ ‘ಶ್ರೀ ಲಲಿತೋಪಾಖ್ಯಾನ’ ಪ್ರವಚನ ಮಾಲಿಕೆಯ ಆರನೇ ದಿನದ ಪ್ರವಚನವನ್ನು ಶ್ರೀಗಳು ಅನುಗ್ರಹಿಸಿದರು.

ಒಳ್ಳೆಯವರು ಯಾವಾಗಲೂ, ಎಲ್ಲರಿಗೂ ಒಳ್ಳೆಯವರಾಗಿರಲು ಅಸಾಧ್ಯ. ಕೆಟ್ಟವರೂ ಹಾಗೆ. ಎಲ್ಲ ಸಂದರ್ಭಗಳಲ್ಲೂ ಕೆಟ್ಟವರಾಗಿರುವುದಿಲ್ಲ. ಕೆಟ್ಟವರಲ್ಲೂ ಒಳ್ಳೆಯಗುಣಗಳಿರುತ್ತವೆ. ರಾಕ್ಷಸರು ಪೂಜೆ, ಹವನ, ಜಪ ತಪ ಸತ್ಕರ್ಮಗಳನ್ನು ಮಾಡುತ್ತಾರೆ. ರಾವಣನೂ ಇಂತಹ ಸತ್ಕರ್ಮಗಳನ್ನು ಮಾಡುತ್ತಿದ್ದ. ಮುಂಜಾನೆ ಅವನು ಎದ್ದೇಳುವಾಗ ವೇದಘೋಷಗಳು ನಡೆಯುತ್ತಿದ್ದವಂತೆ. ಹಾಗೆ ಭಂಡಾಸುರನೂ ಒಳ್ಳೆಯವನಾಗಿಯೂ ದೇವತೆಗಳನ್ನು ಪೀಡಿಸುತ್ತ ಅನ್ಯಾಯಗಳನ್ನು ಎಸಗುತ್ತಿದ್ದ. ರಾಕ್ಷಸರಲ್ಲಿ ಪುಣ್ಯವೂ ಪಾಪವೂ ಪರ್ವತದಷ್ಟು ಇರುತ್ತದೆ ಎಂದು ಅವರು ವಿಶ್ಲೇಷಿಸಿದರು.

ಭಂಡಾಸುರ 60000 ವರ್ಷಗಳ ಕಾಲ ಪಾಪಕಾರ್ಯಗಳನ್ನು ಮಾಡುತ್ತ ದೇವತೆಗಳಿಗೆ ಅನ್ಯಾಯ ಮಾಡುತ್ತ, ದೋಷ, ಪಾಪ ತುಂಬಿಸಿಕೊಳ್ಳುತ್ತಿದ್ದ. ಇನ್ನು ಭಂಡಾಸುರನ ಅವಸಾನ ಲೋಕಕ್ಕೆ ಅನಿವಾರ್ಯ ಎಂಬ ಸ್ಥಿತಿಗೆ ತಲುಪಿಯಾಗಿದೆ. ಅದಕ್ಕಾಗಿ ದೇವರು ಮೋಹಿನಿಯ ಮೋಹಕ ರೂಪದಲ್ಲಿ ಕಂಡು ಭಂಡಾಸುರನು ದಾರಿತಪ್ಪುವಂತೆ ಪ್ರೇರೇಪಿಸುತ್ತಾಳೆ. ಆತ ತನ್ನ ಬಳಗವನ್ನು ಕೂಡಿಕೊಂಡು ಮೋಹಿನಿ ಮತ್ತು ಅಪ್ಸರೆಯರನ್ನೊಳಗೊಂಡ ಬಳಗವನ್ನು ಸೇರುವಂತೆ ಮತ್ತು ಮಾಯಾಮೋಹವೆಂಬ ದೊಡ್ಡ ಹೊಂಡದಲ್ಲಿ ಬೀಳುವಂತೆ ಮಾಡುತ್ತಾರೆ. ನಿತ್ಯ ವಿಧಿಗಳನ್ನು, ಶುಭಕರ್ಮಗಳನ್ನು ಭಗವದುಪಾಸನೆಯನ್ನು ಮರೆತುಬಿಡುವಂತೆ ಮಾಡುತ್ತಾಳೆ. ಭಂಡಾಸುರ ಗುರುಭಕ್ತಿ, ಶಿವಭಕ್ತಿ, ಸತ್ಕರ್ಮಗಳಿಂದ ವಿಮುಕ್ತಿಯಾಗುವಂತೆ ದೂರೀಕರಿಸುವಂತೆ ಮಾಡಲು ವಿಷ್ಣು ಮೋಹಿನಿಯಾಕಾರವನ್ನು ತಳೆದು, ಭಂಡಾಸುರನೂ ಅವನ ಅನುಯಾಯಿಗಳೂ ದಾರಿ ತಪ್ಪುವಂತೆ ಮಾಡುವಲ್ಲಿ ಯಶಸ್ವಿಯಾಗುತ್ತಾರೆ ಎಂದು ಹೇಳಿದರು.

ಹೀಗಿದ್ದೂ ಭಂಡಾಸುರ ಮತ್ತೂ 800 ವರ್ಷಗಳ ಕಾಲ ಆಡಳಿತ ನಡೆಸುತ್ತಾನೆ. ಆತನ ಕೆಟ್ಟ ಕಾಲ ಸನ್ನಿಹಿತವಾಗುತ್ತದೆ. ತ್ರಿಪುರಸುಂದರಿ ಲೋಕಕಲ್ಯಾಣಕ್ಕಾಗಿ ದುಷ್ಟನ ಅಂತ್ಯಗೊಳಿಸಲು ಕ್ಷಣಗಣನೆ ಮಾಡುತ್ತಿದ್ದಾಳೆ ಎಂದು ಇಂದಿನ ಕಥಾಭಾಗವನ್ನು ಮಂಗಲಗೊಳಿಸಿದರು.

ಉಂಡೆಮನೆ ವಿಶ್ವೇಶ್ವರ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಮಾಣಿಮಠ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್, ಕೋಶಾಧಿಕಾರಿ ಮೈಕೆ ಗಣೇಶ ಭಟ್, ಹವ್ಯಕ ಮಹಾಮಂಡಲ ಗೌರವ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ಭಾಸ್ಕರ ಹೆಗಡೆ, ಹವ್ಯಕ ಮಹಾಮಂಡಲ ಮಾಜಿ ಅಧ್ಯಕ್ಷ ಆರ್.ಎಸ್.ಹೆಗಡೆ, ಪ್ರಾಂತ ಕಾರ್ಯದರ್ಶಿ ವೇಣುಗೋಪಾಲ್ ಕೆದ್ಲ, ಮಾಣಿ ವಲಯದ ಅಧ್ಯಕ್ಷ ಶ್ರೀಷ ಬಡೆಕ್ಕಿಲ, ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಮಾತೃವಿಭಾಗದ ಪ್ರಮುಖರಾದ ವೀಣಾ ಗೋಪಾಲಕೃಷ್ಣ ಪುಳು, ದ.ಕ.ಜಿ.ಪಂ.ಮಾಜಿ ಅಧ್ಯಕ್ಷೆ ಶೈಲಜಾ ಕೆ.ಟಿ.ಭಟ್, ಉಪ್ಪಿನಂಗಡಿ ಮಂಡಲ ಅಧ್ಯಕ್ಷ ಈಶ್ವರ ಪ್ರಸನ್ನ ಪೆರ್ನೆಕೋಡಿ, ಮಂಗಳೂರು ಮಂಡಲ ಉಪಾಧ್ಯಕ್ಷ ರಾಜಶೇಖರ ಕಾಕುಂಜೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

4 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

14 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

15 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

15 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

21 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

23 hours ago