ಸುದ್ದಿಗಳು

ವಿಘ್ನಗಳನ್ನು ಧೈರ್ಯದಿಂದ ಎದುರಿಸಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ: ರಾಘವೇಶ್ವರ ಶ್ರೀ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪೆಟ್ಟುಗಳು ನಮ್ಮನ್ನು ಗಟ್ಟಿಗೊಳಿಸುತ್ತವೆ. ವಿಘ್ನಗಳು ಬದುಕಿನ ಅವಿಭಾಜ್ಯ ಅಂಗ. ಇದನ್ನು ಧೈರ್ಯದಿಂದ ಎದುರಿಸಿದವನು ಬದುಕಿನಲ್ಲಿ ಯಶಸ್ವಿಯಾಗುತ್ತಾನೆ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

Advertisement
Advertisement

ಮಾಣಿ ಪೆರಾಜೆಯ ಶ್ರೀರಾಮಚಂದ್ರಾಪುರ ಮಠದಲ್ಲಿ ನವರಾತ್ರ ನಮಸ್ಯಾ ಅಂಗವಾಗಿ ‘ಶ್ರೀ ಲಲಿತೋಪಾಖ್ಯಾನ’ ಪ್ರವಚನ ಮಾಲಿಕೆಯ ಎಂಟನೇ ದಿನದ ಪ್ರವಚನವನ್ನು ಶ್ರೀಗಳು ಅನುಗ್ರಹಿಸಿದರು.

ವಿಘ್ನಕ್ಕೆ ಭಯಪಟ್ಟು ಕಾರ್ಯದಿಂದ ವಿಮುಖನಾಗುವವನು ಬದುಕಿನಲ್ಲಿ ಸೋಲುತ್ತಾನೆ. ವಿಘ್ನಗಳು ಬಂದರೂ ತಮ್ಮ ಕಾರ್ಯಸಾಧನೆ ಮಾಡುವವರು ಉತ್ತಮರು; ಇದಕ್ಕೆ ಹೆದರಿ ಪಲಾಯನ ಮಾಡುವವರು ಸೋಲುತ್ತಾರೆ. ಒಂದು ಶ್ರೇಯಸ್ಸು ಪ್ರಾಪ್ತವಾಗಲು ಅರ್ಹತೆಯ ಪರೀಕ್ಷೆ ಆಗುತ್ತದೆ. ವಿಘ್ನಗಳು ನಮ್ಮನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ ಎಂದು ವಿಶ್ಲೇಷಿಸಿದರು.

ಬಂಡಾಸುರ ತನ್ನ ದೈತ್ಯ ಸೇನೆಯೊಂದಿಗೆ ದೇವತೆಗಳು ತಪಸ್ಸು ಮಾಡುವ ಜಾಗಕ್ಕೆ ಬರುತ್ತಾನೆ. ದೇವಿದರ್ಶನದ ಬದಲು ಅಸುರದರ್ಶನವಾದಾಗ ತಪಸ್ಸು ಬಿಟ್ಟು ದೇವತೆಗಳು ಓಡಿಹೋದರು. ಆಪತ್ತಿನಿಂದ ಆಗುವ ಅನಾಹುತಕ್ಕಿಂತ ಆಪತ್ತಿನ ಭೀತಿಯಿಂದ ಆಗುವ ಅನಾಹುತ ಹೆಚ್ಚು, ದೇವತೆಗಳ ರಕ್ಷಣೆಗೆ ಲಲಿತೆ ಭದ್ರಕೋಟೆ ಒದಗಿಸುತ್ತಾಳೆ. ಅದನ್ನು ಬಂಡಾಸುರ ಧ್ವಂಸಗೊಳಿಸಿದಂತೆಲ್ಲ ಹೊಸ ಕೋಟೆ ನಿರ್ಮಾಣವಾಗುವುದರಿಂದ ಹತಾಶಗೊಂಡ ಬಂಡಾಸುರ ಶೋಣಿತನಗರಿಗೆ ವಾಪಸ್ಸಾದ. ದೇವರು ತಮ್ಮನ್ನು ರಕ್ಷಣೆ ಮಾಡುತ್ತಿದ್ದರೂ ಅದರ ಅರಿವು ದೇವತೆಗಳಿಗೆ ಇರಲಿಲ್ಲ ಎಂದು ಬಣ್ಣಿಸಿದರು.

ನಂಬಿದ ತಾಯಿ ನಮ್ಮನ್ನು ಕಾಪಾಡುತ್ತಾಳೆ ಎಂಬ ನಂಬಿಕೆ, ಶ್ರದ್ಧೆ ಬೇಕು. ಅದರಂತೆ ದೇವೇಂದ್ರ ಮಾತ್ರ ವ್ರತದಿಂದ ಮೇಲೇಳಲಿಲ್ಲ. ಬದಲಾಗಿ ಎದ್ದು ಓಡುತ್ತಿರುವವರಿಗೆ ಸಂದೇಶವನ್ನು ನೀಡುತ್ತಾನೆ. ಯುದ್ಧದಿಂದ ಅಸುರರನ್ನು ಗೆಲ್ಲಲು ಸಾಧ್ಯವಿಲ್ಲ. ಆದರೆ ಉಪಾಸನೆಯಿಂದ ಗೆಲ್ಲಬಹುದು ಎಂದು ಪ್ರೇರಣೆ ನೀಡುತ್ತಾನೆ. ಇಡೀ ತಂಡಕ್ಕೆ ಪ್ರೇರಣೆ ನೀಡುವುದು ನಾಯಕತ್ವದ ಗುಣ ಎಂದು ಹೇಳಿದರು.

Advertisement

ಯೋಜನದ ಅಗ್ನಿಕುಂಡವನ್ನು ರಚಿಸಿ, ಮಹಾಮಾಂಸವನ್ನೇ ಹೋಮದ್ರವ್ಯವಾಗಿ ನೀಡಿ ಶ್ರೀಚಕ್ರ ಹವನ ಮಾಡೋಣ. ಬಂಡಾಸುರನಿಂದ ಸಾಯುವ ಬದಲು ನಮ್ಮನ್ನು ಯಜ್ಞಕುಂಡಕ್ಕೆ ಸಮರ್ಪಿಸಿಕೊಳ್ಳೋಣ. ಬ್ರಹ್ಮಭಾವ ಹೊಂದಿ ಮುಕ್ತಿ ಪಡೆಯೋಣ ಎಂದು ಹುರಿದುಂಬಿಸುತ್ತಾನೆ. ಸಮರ್ಪಣೆಯಲ್ಲಿ ಎರಡು ವಿಧ. ನಮ್ಮದನ್ನು ಸಮರ್ಪಿಸುವುದು ಒಂದಾದರೆ ನಮ್ಮನ್ನೇ ಸಮರ್ಪಿಸಿಕೊಳ್ಳುವುದು ಇನ್ನೊಂದು. ಇದ ಆತ್ಮ ನಿವೇದನೆ. ಆತ್ಮನಿವೇದನೆ ಎನ್ನುವುದು ಒಂಬತ್ತು ಬಗೆಯ ಭಕ್ತಿಗಳಲ್ಲಿ ಸರ್ವಶ್ರೇಷ್ಠ ಎನಿಸಿದ ಪರಾಕಾಷ್ಠೆ ಎಂದು ವಿವರಿಸಿದರು.

ದೇವತೆಗಳ ದೇಹಭಾಗಗಳು ಇನ್ನು ಆಹುತಿ ನೀಡಲು ಇಲ್ಲ ಎಂಬ ಪರಿಸ್ಥಿತಿ ಬಂದಾಗ ಕೋಟಿಸೂರ್ಯನ ಪ್ರಭೆ ಯಜ್ಞಕುಂಡದ ಮಧ್ಯದಿಂದ ಆವೀರ್ಭವಿಸಿತು. ಕೋಟಿಚಂದ್ರರ ತಂಪು ಇತ್ತು. ಆಕಾರವಿಲ್ಲದ ಬೆಳಕಿನ ಮಧ್ಯದಲ್ಲಿ ಚಕ್ರಾಕಾರದಲ್ಲಿ ಲಲಿತೋದ್ಭವವಾಯಿತು. ಚಕ್ರಮಧ್ಯದಲ್ಲಿ ಪರಾಶಕ್ತಿಯ ಉದಯವಾಯಿತು. ಅರುಣ ವರ್ಣದ, ದಾಳಿಂಬೆ ಬಣ್ಣದ ಸೀರೆಯಿಂದ ಅಲಂಕೃತವಾಗಿ ಸರ್ವಾಭರಣ ಭೂಷಿತೆಯಾದ ಅಂಬೆಗೆ ಬ್ರಹ್ಮ, ವಿಷ್ಣು, ಶಿವಶಕ್ತಿಗಳು ಆಕೆಯಲ್ಲಿದ್ದವು ಎಂದರು.

ಚತುರ್ಭುಜಳಾದ ದೇವಿ ಶಂಖ, ಚಕ್ರದ ಜತೆಗೆ ಕಬ್ಬಿನ ಬಿಲ್ಲು, ಪಂಚಬಾಣಗಳಿಂದ ಕಂಗೊಳಿಸುತ್ತಿದ್ದಳು. ಆಗ ಮನಸ್ಸು ಮತ್ತು ದೇಹದ ಗಾಯಗಳು ಮಾಗಿದವು. ದೇವತೆಗಳು ಮತ್ತಷ್ಟು ದೃಢರಾಗಿ, ವಜ್ರಕಾಯರಾದರು. ದೇವರಿಗೆ ನಾವು ಭಕ್ತಿಯಿಂದ ಸಮರ್ಪಣೆ ಮಾಡಿದರೆ, ದೇವರು ನೂರು ಪಟ್ಟು ಫಲ ನೀಡುತ್ತಾನೆ ಎಂದು ವಿವರಿಸಿದರು.

ದೇವತೆಗಳು ಬಗೆಬಗೆಯಾಗಿ ದೇವಿಯನ್ನು ಸ್ತುತಿಸುತ್ತಾರೆ. ಆಗ ಇಂದ್ರನ ಕಡೆಗೆ ನೋಟ ಬೀರಿ ವರ ಕೇಳುವಂತೆ ಆಜ್ಞಾಪಿಸಿದಳು ಎಂದು ಕಥಾಭಾಗವನ್ನು ಮುಕ್ತಾಯಗೊಳಿಸಿದರು.

Advertisement

ವಿಶ್ವೇಶ್ವರ ಭಟ್ ಉಂಡೆಮನೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುತ್ತಿಲ ಪರಿವಾರದ ನೇತಾರ ಅರುಣ್ ಕುಮಾರ್ ಪುತ್ತಿಲ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಬಿಜೆಪಿ ಮುಖಂಡ ಸತೀಶ್ ಕುಂಪಲ, ಮಾಣಿಮಠ ಸಮಿತಿ ಅಧ್ಯಕ್ಷ ಹಾರಕೆರೆ ನಾರಾಯಣ ಭಟ್, ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಮಿತ್ತೂರು, ಪ್ರಾಂತ ಕಾರ್ಯದರ್ಶಿ ವೇಣುಗೋಪಾಲ್ ಕೆದ್ಲ, ಮಂಗಳೂರು ಮಂಡಲ ಅಧ್ಯಕ್ಷ ಪ್ರಸನ್ನ ಪೆರ್ನೆಕೋಡಿ, ಕಾರ್ಯದರ್ಶಿ ಮಹೇಶ್ ಕುದುಪುಲ, ವಿದ್ಯಾಸಾರಥಿ ಯುಎಸ್‍ಜಿ ಭಟ್, ಕೆ.ಟಿ.ಶೈಲಜಾ ಭಟ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

8 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

9 hours ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

9 hours ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

9 hours ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

17 hours ago