MIRROR FOCUS

ನಾಡಹಬ್ಬ ನವರಾತ್ರಿ ಆರಂಭ…

Share
ಬ್ಬಗಳು ನಮ್ಮ ಜೀವನದ ಓಗಕ್ಕೆ ಅಮೃತವಿದ್ದಂತೆ. ನಿತ್ಯದ ಕೆಲಸಗಳ ಜಂಜಾಟಗಳಿಗೆ ಒಂದು ಬದಲಾವಣೆ ಈ ಹಬ್ಬಗಳು. ಅದರಲ್ಲಿಯೂ ನವರಾತ್ರಿಯೆಂದರೆ ನಾಡಹಬ್ಬ. ಶಾಲಾ ಮಕ್ಕಳಿಗೆ ವಾರ್ಷಿಕೋತ್ಸವದ ಸಡಗರದಂತೆ. ನಿರಂತರ ಒಂಬತ್ತು ದಿನಗಳ ಗೌಜಿ ಸಂಭ್ರಮ. ನವ ಎಂದರೆ ಒಂಬತ್ತು. ಹೆಸರಿನಂತೆ‌ ಒಂಬತ್ತು ದಿನಗಳ ಆಚರಣೆ. ಪ್ರತಿಯೊಂದು ದಿನವೂ ವಿಶೇಷವೇ. ಪ್ರಕೃತಿಯೆಂದರೆ‌ ಮಾತೆ. ನಮ್ಮನ್ನು ಪೊರೆಯುವಾಕೆ. ಕಷ್ಟಕ್ಕೆ ದನಿಯಾಗುವಾಕೆ. ಆಕೆಯ ವಿವಿಧ ರೂಪಗಳ ಆರಾಧನೆಯೇ ಈ ನವರಾತ್ರಿಯ ಆಚರಣೆ.
Advertisement

ದೇವಸ್ಥಾನಗಳಲ್ಲಿ ಹಲವು ಆಚರಣೆಗಳೊಂದಿಗೆ, ಸಾಂಪ್ರದಾಯಿಕವಾಗಿ ದೇವಿಯ ಆರಾಧನೆ ಮಾಡಲಾಗುತ್ತದೆ. ಕೆಲವೊಂದು ಮನೆಗಳಲ್ಲೂ ಒಂಬತ್ತು ದಿನಗಳ ಪೂಜೆ ಹಾಗೂ ವಿಜಯದಶಮಿಯನ್ನು ಸಂಭ್ರಮದಿಂದ ಆಚರಿಸಿಕೊಂಡು ಬಂದವರಿದ್ದಾರೆ. ಮನೆಯ ಹಿರಿಯರು ಅನುಸರಿಸಿದ ಪದ್ಧತಿ ಗಳನ್ನು ಮುಂದುವರಿಸುವ ಗುರುತರವಾದ ಜವಾಬ್ದಾರಿ ಕಿರಿಯರ ಮೇಲಿರುತ್ತದೆ. ತಲತಲಾಂತರಗಳಿಂದ ಪರಿಪಾಲಿಸಿಕೊಂಡು ಬಂದ ಹಬ್ಬ ಹರಿದಿನಗಳನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಕರ್ತವ್ಯ ವಾಗಿದೆ.

ನವರಾತ್ರಿಯ ಆಚರಣೆ ಮಾಡುವಾಗ ನಿಷ್ಠೆ, ಉಪವಾಸ ವ್ರತಗಳೊಂದಿಗೆ ಶ್ರದ್ಧೆಯನ್ನೂ ಅಗತ್ಯವಾಗಿ ಪಾಲಿಸಬೇಕಾಗುತ್ತದೆ.
ನವರಾತ್ರಿ ಹಬ್ಬದ ಸಮಯದಲ್ಲಿ ದೇವಿಯ ಶಕ್ತಿ ಸಾವಿರ ಪಟ್ಟು ಹೆಚ್ಚಿರುವುದರಿಂದ ಆರಾಧನೆಗೇ ಮಹತ್ವ. ಅರ್ಚನೆ, ಪೂಜೆ, ಪರಾಯಣ, ಭಜನೆಗಳನ್ನು ಭಕ್ತಿಯಿಂದ ಮಾಡುವುದರಿಂದ ದೇವರ ಪ್ರೀತಿಗೆ ಪಾತ್ರರಾಗುವುದರಲ್ಲಿ ಸಂಶಯವಿಲ್ಲ. ನಮ್ಮ ಅಭೀಷ್ಠಗಳೇನೇ ಇದ್ದರು ದೇವರು ಈಡೇರಿಸದೆ ಬಿಡರು. ಸಂಪೂರ್ಣ ಶರಣಾಗತಿಯೇ ದೇವರನ್ನು ಒಲಿಸಿಕೊಳ್ಳಲಿರುವ ಏಕೈಕ ಮಾರ್ಗ. ನವರಾತ್ರಿಯ ಸುಸಂದರ್ಭದಲ್ಲಿ ದೇವರ ಆರಾಧನೆಯಲ್ಲಿ ಪಾಲ್ಗೊಳ್ಳೋಣ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

8 hours ago

ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ

ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…

8 hours ago

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

15 hours ago

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

20 hours ago

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

21 hours ago

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…

22 hours ago