Advertisement
MIRROR FOCUS

ನಾಡಹಬ್ಬ ನವರಾತ್ರಿ ಆರಂಭ…

Share
ಬ್ಬಗಳು ನಮ್ಮ ಜೀವನದ ಓಗಕ್ಕೆ ಅಮೃತವಿದ್ದಂತೆ. ನಿತ್ಯದ ಕೆಲಸಗಳ ಜಂಜಾಟಗಳಿಗೆ ಒಂದು ಬದಲಾವಣೆ ಈ ಹಬ್ಬಗಳು. ಅದರಲ್ಲಿಯೂ ನವರಾತ್ರಿಯೆಂದರೆ ನಾಡಹಬ್ಬ. ಶಾಲಾ ಮಕ್ಕಳಿಗೆ ವಾರ್ಷಿಕೋತ್ಸವದ ಸಡಗರದಂತೆ. ನಿರಂತರ ಒಂಬತ್ತು ದಿನಗಳ ಗೌಜಿ ಸಂಭ್ರಮ. ನವ ಎಂದರೆ ಒಂಬತ್ತು. ಹೆಸರಿನಂತೆ‌ ಒಂಬತ್ತು ದಿನಗಳ ಆಚರಣೆ. ಪ್ರತಿಯೊಂದು ದಿನವೂ ವಿಶೇಷವೇ. ಪ್ರಕೃತಿಯೆಂದರೆ‌ ಮಾತೆ. ನಮ್ಮನ್ನು ಪೊರೆಯುವಾಕೆ. ಕಷ್ಟಕ್ಕೆ ದನಿಯಾಗುವಾಕೆ. ಆಕೆಯ ವಿವಿಧ ರೂಪಗಳ ಆರಾಧನೆಯೇ ಈ ನವರಾತ್ರಿಯ ಆಚರಣೆ.

ದೇವಸ್ಥಾನಗಳಲ್ಲಿ ಹಲವು ಆಚರಣೆಗಳೊಂದಿಗೆ, ಸಾಂಪ್ರದಾಯಿಕವಾಗಿ ದೇವಿಯ ಆರಾಧನೆ ಮಾಡಲಾಗುತ್ತದೆ. ಕೆಲವೊಂದು ಮನೆಗಳಲ್ಲೂ ಒಂಬತ್ತು ದಿನಗಳ ಪೂಜೆ ಹಾಗೂ ವಿಜಯದಶಮಿಯನ್ನು ಸಂಭ್ರಮದಿಂದ ಆಚರಿಸಿಕೊಂಡು ಬಂದವರಿದ್ದಾರೆ. ಮನೆಯ ಹಿರಿಯರು ಅನುಸರಿಸಿದ ಪದ್ಧತಿ ಗಳನ್ನು ಮುಂದುವರಿಸುವ ಗುರುತರವಾದ ಜವಾಬ್ದಾರಿ ಕಿರಿಯರ ಮೇಲಿರುತ್ತದೆ. ತಲತಲಾಂತರಗಳಿಂದ ಪರಿಪಾಲಿಸಿಕೊಂಡು ಬಂದ ಹಬ್ಬ ಹರಿದಿನಗಳನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಕರ್ತವ್ಯ ವಾಗಿದೆ.

ನವರಾತ್ರಿಯ ಆಚರಣೆ ಮಾಡುವಾಗ ನಿಷ್ಠೆ, ಉಪವಾಸ ವ್ರತಗಳೊಂದಿಗೆ ಶ್ರದ್ಧೆಯನ್ನೂ ಅಗತ್ಯವಾಗಿ ಪಾಲಿಸಬೇಕಾಗುತ್ತದೆ.
ನವರಾತ್ರಿ ಹಬ್ಬದ ಸಮಯದಲ್ಲಿ ದೇವಿಯ ಶಕ್ತಿ ಸಾವಿರ ಪಟ್ಟು ಹೆಚ್ಚಿರುವುದರಿಂದ ಆರಾಧನೆಗೇ ಮಹತ್ವ. ಅರ್ಚನೆ, ಪೂಜೆ, ಪರಾಯಣ, ಭಜನೆಗಳನ್ನು ಭಕ್ತಿಯಿಂದ ಮಾಡುವುದರಿಂದ ದೇವರ ಪ್ರೀತಿಗೆ ಪಾತ್ರರಾಗುವುದರಲ್ಲಿ ಸಂಶಯವಿಲ್ಲ. ನಮ್ಮ ಅಭೀಷ್ಠಗಳೇನೇ ಇದ್ದರು ದೇವರು ಈಡೇರಿಸದೆ ಬಿಡರು. ಸಂಪೂರ್ಣ ಶರಣಾಗತಿಯೇ ದೇವರನ್ನು ಒಲಿಸಿಕೊಳ್ಳಲಿರುವ ಏಕೈಕ ಮಾರ್ಗ. ನವರಾತ್ರಿಯ ಸುಸಂದರ್ಭದಲ್ಲಿ ದೇವರ ಆರಾಧನೆಯಲ್ಲಿ ಪಾಲ್ಗೊಳ್ಳೋಣ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

22 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

22 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

22 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

23 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago