Advertisement
MIRROR FOCUS

ನಾಡಹಬ್ಬ ನವರಾತ್ರಿ ಆರಂಭ…

Share
ಬ್ಬಗಳು ನಮ್ಮ ಜೀವನದ ಓಗಕ್ಕೆ ಅಮೃತವಿದ್ದಂತೆ. ನಿತ್ಯದ ಕೆಲಸಗಳ ಜಂಜಾಟಗಳಿಗೆ ಒಂದು ಬದಲಾವಣೆ ಈ ಹಬ್ಬಗಳು. ಅದರಲ್ಲಿಯೂ ನವರಾತ್ರಿಯೆಂದರೆ ನಾಡಹಬ್ಬ. ಶಾಲಾ ಮಕ್ಕಳಿಗೆ ವಾರ್ಷಿಕೋತ್ಸವದ ಸಡಗರದಂತೆ. ನಿರಂತರ ಒಂಬತ್ತು ದಿನಗಳ ಗೌಜಿ ಸಂಭ್ರಮ. ನವ ಎಂದರೆ ಒಂಬತ್ತು. ಹೆಸರಿನಂತೆ‌ ಒಂಬತ್ತು ದಿನಗಳ ಆಚರಣೆ. ಪ್ರತಿಯೊಂದು ದಿನವೂ ವಿಶೇಷವೇ. ಪ್ರಕೃತಿಯೆಂದರೆ‌ ಮಾತೆ. ನಮ್ಮನ್ನು ಪೊರೆಯುವಾಕೆ. ಕಷ್ಟಕ್ಕೆ ದನಿಯಾಗುವಾಕೆ. ಆಕೆಯ ವಿವಿಧ ರೂಪಗಳ ಆರಾಧನೆಯೇ ಈ ನವರಾತ್ರಿಯ ಆಚರಣೆ.

ದೇವಸ್ಥಾನಗಳಲ್ಲಿ ಹಲವು ಆಚರಣೆಗಳೊಂದಿಗೆ, ಸಾಂಪ್ರದಾಯಿಕವಾಗಿ ದೇವಿಯ ಆರಾಧನೆ ಮಾಡಲಾಗುತ್ತದೆ. ಕೆಲವೊಂದು ಮನೆಗಳಲ್ಲೂ ಒಂಬತ್ತು ದಿನಗಳ ಪೂಜೆ ಹಾಗೂ ವಿಜಯದಶಮಿಯನ್ನು ಸಂಭ್ರಮದಿಂದ ಆಚರಿಸಿಕೊಂಡು ಬಂದವರಿದ್ದಾರೆ. ಮನೆಯ ಹಿರಿಯರು ಅನುಸರಿಸಿದ ಪದ್ಧತಿ ಗಳನ್ನು ಮುಂದುವರಿಸುವ ಗುರುತರವಾದ ಜವಾಬ್ದಾರಿ ಕಿರಿಯರ ಮೇಲಿರುತ್ತದೆ. ತಲತಲಾಂತರಗಳಿಂದ ಪರಿಪಾಲಿಸಿಕೊಂಡು ಬಂದ ಹಬ್ಬ ಹರಿದಿನಗಳನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಕರ್ತವ್ಯ ವಾಗಿದೆ.

ನವರಾತ್ರಿಯ ಆಚರಣೆ ಮಾಡುವಾಗ ನಿಷ್ಠೆ, ಉಪವಾಸ ವ್ರತಗಳೊಂದಿಗೆ ಶ್ರದ್ಧೆಯನ್ನೂ ಅಗತ್ಯವಾಗಿ ಪಾಲಿಸಬೇಕಾಗುತ್ತದೆ.
ನವರಾತ್ರಿ ಹಬ್ಬದ ಸಮಯದಲ್ಲಿ ದೇವಿಯ ಶಕ್ತಿ ಸಾವಿರ ಪಟ್ಟು ಹೆಚ್ಚಿರುವುದರಿಂದ ಆರಾಧನೆಗೇ ಮಹತ್ವ. ಅರ್ಚನೆ, ಪೂಜೆ, ಪರಾಯಣ, ಭಜನೆಗಳನ್ನು ಭಕ್ತಿಯಿಂದ ಮಾಡುವುದರಿಂದ ದೇವರ ಪ್ರೀತಿಗೆ ಪಾತ್ರರಾಗುವುದರಲ್ಲಿ ಸಂಶಯವಿಲ್ಲ. ನಮ್ಮ ಅಭೀಷ್ಠಗಳೇನೇ ಇದ್ದರು ದೇವರು ಈಡೇರಿಸದೆ ಬಿಡರು. ಸಂಪೂರ್ಣ ಶರಣಾಗತಿಯೇ ದೇವರನ್ನು ಒಲಿಸಿಕೊಳ್ಳಲಿರುವ ಏಕೈಕ ಮಾರ್ಗ. ನವರಾತ್ರಿಯ ಸುಸಂದರ್ಭದಲ್ಲಿ ದೇವರ ಆರಾಧನೆಯಲ್ಲಿ ಪಾಲ್ಗೊಳ್ಳೋಣ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

2 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

4 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

16 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

16 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

24 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago