MIRROR FOCUS

ನಾಡಹಬ್ಬ ನವರಾತ್ರಿ ಆರಂಭ…

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಬ್ಬಗಳು ನಮ್ಮ ಜೀವನದ ಓಗಕ್ಕೆ ಅಮೃತವಿದ್ದಂತೆ. ನಿತ್ಯದ ಕೆಲಸಗಳ ಜಂಜಾಟಗಳಿಗೆ ಒಂದು ಬದಲಾವಣೆ ಈ ಹಬ್ಬಗಳು. ಅದರಲ್ಲಿಯೂ ನವರಾತ್ರಿಯೆಂದರೆ ನಾಡಹಬ್ಬ. ಶಾಲಾ ಮಕ್ಕಳಿಗೆ ವಾರ್ಷಿಕೋತ್ಸವದ ಸಡಗರದಂತೆ. ನಿರಂತರ ಒಂಬತ್ತು ದಿನಗಳ ಗೌಜಿ ಸಂಭ್ರಮ. ನವ ಎಂದರೆ ಒಂಬತ್ತು. ಹೆಸರಿನಂತೆ‌ ಒಂಬತ್ತು ದಿನಗಳ ಆಚರಣೆ. ಪ್ರತಿಯೊಂದು ದಿನವೂ ವಿಶೇಷವೇ. ಪ್ರಕೃತಿಯೆಂದರೆ‌ ಮಾತೆ. ನಮ್ಮನ್ನು ಪೊರೆಯುವಾಕೆ. ಕಷ್ಟಕ್ಕೆ ದನಿಯಾಗುವಾಕೆ. ಆಕೆಯ ವಿವಿಧ ರೂಪಗಳ ಆರಾಧನೆಯೇ ಈ ನವರಾತ್ರಿಯ ಆಚರಣೆ.
Advertisement
Advertisement

ದೇವಸ್ಥಾನಗಳಲ್ಲಿ ಹಲವು ಆಚರಣೆಗಳೊಂದಿಗೆ, ಸಾಂಪ್ರದಾಯಿಕವಾಗಿ ದೇವಿಯ ಆರಾಧನೆ ಮಾಡಲಾಗುತ್ತದೆ. ಕೆಲವೊಂದು ಮನೆಗಳಲ್ಲೂ ಒಂಬತ್ತು ದಿನಗಳ ಪೂಜೆ ಹಾಗೂ ವಿಜಯದಶಮಿಯನ್ನು ಸಂಭ್ರಮದಿಂದ ಆಚರಿಸಿಕೊಂಡು ಬಂದವರಿದ್ದಾರೆ. ಮನೆಯ ಹಿರಿಯರು ಅನುಸರಿಸಿದ ಪದ್ಧತಿ ಗಳನ್ನು ಮುಂದುವರಿಸುವ ಗುರುತರವಾದ ಜವಾಬ್ದಾರಿ ಕಿರಿಯರ ಮೇಲಿರುತ್ತದೆ. ತಲತಲಾಂತರಗಳಿಂದ ಪರಿಪಾಲಿಸಿಕೊಂಡು ಬಂದ ಹಬ್ಬ ಹರಿದಿನಗಳನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಕರ್ತವ್ಯ ವಾಗಿದೆ.

ನವರಾತ್ರಿಯ ಆಚರಣೆ ಮಾಡುವಾಗ ನಿಷ್ಠೆ, ಉಪವಾಸ ವ್ರತಗಳೊಂದಿಗೆ ಶ್ರದ್ಧೆಯನ್ನೂ ಅಗತ್ಯವಾಗಿ ಪಾಲಿಸಬೇಕಾಗುತ್ತದೆ.
ನವರಾತ್ರಿ ಹಬ್ಬದ ಸಮಯದಲ್ಲಿ ದೇವಿಯ ಶಕ್ತಿ ಸಾವಿರ ಪಟ್ಟು ಹೆಚ್ಚಿರುವುದರಿಂದ ಆರಾಧನೆಗೇ ಮಹತ್ವ. ಅರ್ಚನೆ, ಪೂಜೆ, ಪರಾಯಣ, ಭಜನೆಗಳನ್ನು ಭಕ್ತಿಯಿಂದ ಮಾಡುವುದರಿಂದ ದೇವರ ಪ್ರೀತಿಗೆ ಪಾತ್ರರಾಗುವುದರಲ್ಲಿ ಸಂಶಯವಿಲ್ಲ. ನಮ್ಮ ಅಭೀಷ್ಠಗಳೇನೇ ಇದ್ದರು ದೇವರು ಈಡೇರಿಸದೆ ಬಿಡರು. ಸಂಪೂರ್ಣ ಶರಣಾಗತಿಯೇ ದೇವರನ್ನು ಒಲಿಸಿಕೊಳ್ಳಲಿರುವ ಏಕೈಕ ಮಾರ್ಗ. ನವರಾತ್ರಿಯ ಸುಸಂದರ್ಭದಲ್ಲಿ ದೇವರ ಆರಾಧನೆಯಲ್ಲಿ ಪಾಲ್ಗೊಳ್ಳೋಣ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

8 hours ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

8 hours ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

8 hours ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

9 hours ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

9 hours ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

9 hours ago