MIRROR FOCUS

ನಾಡಹಬ್ಬ ನವರಾತ್ರಿ ಆರಂಭ…

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಬ್ಬಗಳು ನಮ್ಮ ಜೀವನದ ಓಗಕ್ಕೆ ಅಮೃತವಿದ್ದಂತೆ. ನಿತ್ಯದ ಕೆಲಸಗಳ ಜಂಜಾಟಗಳಿಗೆ ಒಂದು ಬದಲಾವಣೆ ಈ ಹಬ್ಬಗಳು. ಅದರಲ್ಲಿಯೂ ನವರಾತ್ರಿಯೆಂದರೆ ನಾಡಹಬ್ಬ. ಶಾಲಾ ಮಕ್ಕಳಿಗೆ ವಾರ್ಷಿಕೋತ್ಸವದ ಸಡಗರದಂತೆ. ನಿರಂತರ ಒಂಬತ್ತು ದಿನಗಳ ಗೌಜಿ ಸಂಭ್ರಮ. ನವ ಎಂದರೆ ಒಂಬತ್ತು. ಹೆಸರಿನಂತೆ‌ ಒಂಬತ್ತು ದಿನಗಳ ಆಚರಣೆ. ಪ್ರತಿಯೊಂದು ದಿನವೂ ವಿಶೇಷವೇ. ಪ್ರಕೃತಿಯೆಂದರೆ‌ ಮಾತೆ. ನಮ್ಮನ್ನು ಪೊರೆಯುವಾಕೆ. ಕಷ್ಟಕ್ಕೆ ದನಿಯಾಗುವಾಕೆ. ಆಕೆಯ ವಿವಿಧ ರೂಪಗಳ ಆರಾಧನೆಯೇ ಈ ನವರಾತ್ರಿಯ ಆಚರಣೆ.
Advertisement
Advertisement

ದೇವಸ್ಥಾನಗಳಲ್ಲಿ ಹಲವು ಆಚರಣೆಗಳೊಂದಿಗೆ, ಸಾಂಪ್ರದಾಯಿಕವಾಗಿ ದೇವಿಯ ಆರಾಧನೆ ಮಾಡಲಾಗುತ್ತದೆ. ಕೆಲವೊಂದು ಮನೆಗಳಲ್ಲೂ ಒಂಬತ್ತು ದಿನಗಳ ಪೂಜೆ ಹಾಗೂ ವಿಜಯದಶಮಿಯನ್ನು ಸಂಭ್ರಮದಿಂದ ಆಚರಿಸಿಕೊಂಡು ಬಂದವರಿದ್ದಾರೆ. ಮನೆಯ ಹಿರಿಯರು ಅನುಸರಿಸಿದ ಪದ್ಧತಿ ಗಳನ್ನು ಮುಂದುವರಿಸುವ ಗುರುತರವಾದ ಜವಾಬ್ದಾರಿ ಕಿರಿಯರ ಮೇಲಿರುತ್ತದೆ. ತಲತಲಾಂತರಗಳಿಂದ ಪರಿಪಾಲಿಸಿಕೊಂಡು ಬಂದ ಹಬ್ಬ ಹರಿದಿನಗಳನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಕರ್ತವ್ಯ ವಾಗಿದೆ.

ನವರಾತ್ರಿಯ ಆಚರಣೆ ಮಾಡುವಾಗ ನಿಷ್ಠೆ, ಉಪವಾಸ ವ್ರತಗಳೊಂದಿಗೆ ಶ್ರದ್ಧೆಯನ್ನೂ ಅಗತ್ಯವಾಗಿ ಪಾಲಿಸಬೇಕಾಗುತ್ತದೆ.
ನವರಾತ್ರಿ ಹಬ್ಬದ ಸಮಯದಲ್ಲಿ ದೇವಿಯ ಶಕ್ತಿ ಸಾವಿರ ಪಟ್ಟು ಹೆಚ್ಚಿರುವುದರಿಂದ ಆರಾಧನೆಗೇ ಮಹತ್ವ. ಅರ್ಚನೆ, ಪೂಜೆ, ಪರಾಯಣ, ಭಜನೆಗಳನ್ನು ಭಕ್ತಿಯಿಂದ ಮಾಡುವುದರಿಂದ ದೇವರ ಪ್ರೀತಿಗೆ ಪಾತ್ರರಾಗುವುದರಲ್ಲಿ ಸಂಶಯವಿಲ್ಲ. ನಮ್ಮ ಅಭೀಷ್ಠಗಳೇನೇ ಇದ್ದರು ದೇವರು ಈಡೇರಿಸದೆ ಬಿಡರು. ಸಂಪೂರ್ಣ ಶರಣಾಗತಿಯೇ ದೇವರನ್ನು ಒಲಿಸಿಕೊಳ್ಳಲಿರುವ ಏಕೈಕ ಮಾರ್ಗ. ನವರಾತ್ರಿಯ ಸುಸಂದರ್ಭದಲ್ಲಿ ದೇವರ ಆರಾಧನೆಯಲ್ಲಿ ಪಾಲ್ಗೊಳ್ಳೋಣ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ವಾಯುಭಾರ ಕುಸಿತ ರಾಜ್ಯದಲ್ಲಿ ಮುಂದುವರಿದ ಮಳೆ | ಹಲವೆಡೆ ಪ್ರವಾಹ ಭೀತಿ

ವಾಯುಭಾರ ಕುಸಿತದಿಂದಾಗಿ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಳೆದ ಎರಡು…

9 minutes ago

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್

ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…

11 hours ago

ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ

ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು  ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ…

11 hours ago

ಗದಗದಲ್ಲಿ  ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿ ಬೆಂಬಲ ಬೆಲೆ ನಿಗದಿ

2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ…

11 hours ago

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |

ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…

15 hours ago