Advertisement
MIRROR FOCUS

ನಾಡಹಬ್ಬ ನವರಾತ್ರಿ ಆರಂಭ…

Share
ಬ್ಬಗಳು ನಮ್ಮ ಜೀವನದ ಓಗಕ್ಕೆ ಅಮೃತವಿದ್ದಂತೆ. ನಿತ್ಯದ ಕೆಲಸಗಳ ಜಂಜಾಟಗಳಿಗೆ ಒಂದು ಬದಲಾವಣೆ ಈ ಹಬ್ಬಗಳು. ಅದರಲ್ಲಿಯೂ ನವರಾತ್ರಿಯೆಂದರೆ ನಾಡಹಬ್ಬ. ಶಾಲಾ ಮಕ್ಕಳಿಗೆ ವಾರ್ಷಿಕೋತ್ಸವದ ಸಡಗರದಂತೆ. ನಿರಂತರ ಒಂಬತ್ತು ದಿನಗಳ ಗೌಜಿ ಸಂಭ್ರಮ. ನವ ಎಂದರೆ ಒಂಬತ್ತು. ಹೆಸರಿನಂತೆ‌ ಒಂಬತ್ತು ದಿನಗಳ ಆಚರಣೆ. ಪ್ರತಿಯೊಂದು ದಿನವೂ ವಿಶೇಷವೇ. ಪ್ರಕೃತಿಯೆಂದರೆ‌ ಮಾತೆ. ನಮ್ಮನ್ನು ಪೊರೆಯುವಾಕೆ. ಕಷ್ಟಕ್ಕೆ ದನಿಯಾಗುವಾಕೆ. ಆಕೆಯ ವಿವಿಧ ರೂಪಗಳ ಆರಾಧನೆಯೇ ಈ ನವರಾತ್ರಿಯ ಆಚರಣೆ.

ದೇವಸ್ಥಾನಗಳಲ್ಲಿ ಹಲವು ಆಚರಣೆಗಳೊಂದಿಗೆ, ಸಾಂಪ್ರದಾಯಿಕವಾಗಿ ದೇವಿಯ ಆರಾಧನೆ ಮಾಡಲಾಗುತ್ತದೆ. ಕೆಲವೊಂದು ಮನೆಗಳಲ್ಲೂ ಒಂಬತ್ತು ದಿನಗಳ ಪೂಜೆ ಹಾಗೂ ವಿಜಯದಶಮಿಯನ್ನು ಸಂಭ್ರಮದಿಂದ ಆಚರಿಸಿಕೊಂಡು ಬಂದವರಿದ್ದಾರೆ. ಮನೆಯ ಹಿರಿಯರು ಅನುಸರಿಸಿದ ಪದ್ಧತಿ ಗಳನ್ನು ಮುಂದುವರಿಸುವ ಗುರುತರವಾದ ಜವಾಬ್ದಾರಿ ಕಿರಿಯರ ಮೇಲಿರುತ್ತದೆ. ತಲತಲಾಂತರಗಳಿಂದ ಪರಿಪಾಲಿಸಿಕೊಂಡು ಬಂದ ಹಬ್ಬ ಹರಿದಿನಗಳನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಕರ್ತವ್ಯ ವಾಗಿದೆ.

ನವರಾತ್ರಿಯ ಆಚರಣೆ ಮಾಡುವಾಗ ನಿಷ್ಠೆ, ಉಪವಾಸ ವ್ರತಗಳೊಂದಿಗೆ ಶ್ರದ್ಧೆಯನ್ನೂ ಅಗತ್ಯವಾಗಿ ಪಾಲಿಸಬೇಕಾಗುತ್ತದೆ.
ನವರಾತ್ರಿ ಹಬ್ಬದ ಸಮಯದಲ್ಲಿ ದೇವಿಯ ಶಕ್ತಿ ಸಾವಿರ ಪಟ್ಟು ಹೆಚ್ಚಿರುವುದರಿಂದ ಆರಾಧನೆಗೇ ಮಹತ್ವ. ಅರ್ಚನೆ, ಪೂಜೆ, ಪರಾಯಣ, ಭಜನೆಗಳನ್ನು ಭಕ್ತಿಯಿಂದ ಮಾಡುವುದರಿಂದ ದೇವರ ಪ್ರೀತಿಗೆ ಪಾತ್ರರಾಗುವುದರಲ್ಲಿ ಸಂಶಯವಿಲ್ಲ. ನಮ್ಮ ಅಭೀಷ್ಠಗಳೇನೇ ಇದ್ದರು ದೇವರು ಈಡೇರಿಸದೆ ಬಿಡರು. ಸಂಪೂರ್ಣ ಶರಣಾಗತಿಯೇ ದೇವರನ್ನು ಒಲಿಸಿಕೊಳ್ಳಲಿರುವ ಏಕೈಕ ಮಾರ್ಗ. ನವರಾತ್ರಿಯ ಸುಸಂದರ್ಭದಲ್ಲಿ ದೇವರ ಆರಾಧನೆಯಲ್ಲಿ ಪಾಲ್ಗೊಳ್ಳೋಣ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

1 hour ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

5 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

5 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

14 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

15 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

21 hours ago