Advertisement
MIRROR FOCUS

ನಾಡಹಬ್ಬ ನವರಾತ್ರಿ ಆರಂಭ…

Share
ಬ್ಬಗಳು ನಮ್ಮ ಜೀವನದ ಓಗಕ್ಕೆ ಅಮೃತವಿದ್ದಂತೆ. ನಿತ್ಯದ ಕೆಲಸಗಳ ಜಂಜಾಟಗಳಿಗೆ ಒಂದು ಬದಲಾವಣೆ ಈ ಹಬ್ಬಗಳು. ಅದರಲ್ಲಿಯೂ ನವರಾತ್ರಿಯೆಂದರೆ ನಾಡಹಬ್ಬ. ಶಾಲಾ ಮಕ್ಕಳಿಗೆ ವಾರ್ಷಿಕೋತ್ಸವದ ಸಡಗರದಂತೆ. ನಿರಂತರ ಒಂಬತ್ತು ದಿನಗಳ ಗೌಜಿ ಸಂಭ್ರಮ. ನವ ಎಂದರೆ ಒಂಬತ್ತು. ಹೆಸರಿನಂತೆ‌ ಒಂಬತ್ತು ದಿನಗಳ ಆಚರಣೆ. ಪ್ರತಿಯೊಂದು ದಿನವೂ ವಿಶೇಷವೇ. ಪ್ರಕೃತಿಯೆಂದರೆ‌ ಮಾತೆ. ನಮ್ಮನ್ನು ಪೊರೆಯುವಾಕೆ. ಕಷ್ಟಕ್ಕೆ ದನಿಯಾಗುವಾಕೆ. ಆಕೆಯ ವಿವಿಧ ರೂಪಗಳ ಆರಾಧನೆಯೇ ಈ ನವರಾತ್ರಿಯ ಆಚರಣೆ.

ದೇವಸ್ಥಾನಗಳಲ್ಲಿ ಹಲವು ಆಚರಣೆಗಳೊಂದಿಗೆ, ಸಾಂಪ್ರದಾಯಿಕವಾಗಿ ದೇವಿಯ ಆರಾಧನೆ ಮಾಡಲಾಗುತ್ತದೆ. ಕೆಲವೊಂದು ಮನೆಗಳಲ್ಲೂ ಒಂಬತ್ತು ದಿನಗಳ ಪೂಜೆ ಹಾಗೂ ವಿಜಯದಶಮಿಯನ್ನು ಸಂಭ್ರಮದಿಂದ ಆಚರಿಸಿಕೊಂಡು ಬಂದವರಿದ್ದಾರೆ. ಮನೆಯ ಹಿರಿಯರು ಅನುಸರಿಸಿದ ಪದ್ಧತಿ ಗಳನ್ನು ಮುಂದುವರಿಸುವ ಗುರುತರವಾದ ಜವಾಬ್ದಾರಿ ಕಿರಿಯರ ಮೇಲಿರುತ್ತದೆ. ತಲತಲಾಂತರಗಳಿಂದ ಪರಿಪಾಲಿಸಿಕೊಂಡು ಬಂದ ಹಬ್ಬ ಹರಿದಿನಗಳನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಕರ್ತವ್ಯ ವಾಗಿದೆ.

ನವರಾತ್ರಿಯ ಆಚರಣೆ ಮಾಡುವಾಗ ನಿಷ್ಠೆ, ಉಪವಾಸ ವ್ರತಗಳೊಂದಿಗೆ ಶ್ರದ್ಧೆಯನ್ನೂ ಅಗತ್ಯವಾಗಿ ಪಾಲಿಸಬೇಕಾಗುತ್ತದೆ.
ನವರಾತ್ರಿ ಹಬ್ಬದ ಸಮಯದಲ್ಲಿ ದೇವಿಯ ಶಕ್ತಿ ಸಾವಿರ ಪಟ್ಟು ಹೆಚ್ಚಿರುವುದರಿಂದ ಆರಾಧನೆಗೇ ಮಹತ್ವ. ಅರ್ಚನೆ, ಪೂಜೆ, ಪರಾಯಣ, ಭಜನೆಗಳನ್ನು ಭಕ್ತಿಯಿಂದ ಮಾಡುವುದರಿಂದ ದೇವರ ಪ್ರೀತಿಗೆ ಪಾತ್ರರಾಗುವುದರಲ್ಲಿ ಸಂಶಯವಿಲ್ಲ. ನಮ್ಮ ಅಭೀಷ್ಠಗಳೇನೇ ಇದ್ದರು ದೇವರು ಈಡೇರಿಸದೆ ಬಿಡರು. ಸಂಪೂರ್ಣ ಶರಣಾಗತಿಯೇ ದೇವರನ್ನು ಒಲಿಸಿಕೊಳ್ಳಲಿರುವ ಏಕೈಕ ಮಾರ್ಗ. ನವರಾತ್ರಿಯ ಸುಸಂದರ್ಭದಲ್ಲಿ ದೇವರ ಆರಾಧನೆಯಲ್ಲಿ ಪಾಲ್ಗೊಳ್ಳೋಣ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

3 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

4 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

19 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago