Advertisement
MIRROR FOCUS

ನಾಡಹಬ್ಬ ನವರಾತ್ರಿ ಆರಂಭ…

Share
ಬ್ಬಗಳು ನಮ್ಮ ಜೀವನದ ಓಗಕ್ಕೆ ಅಮೃತವಿದ್ದಂತೆ. ನಿತ್ಯದ ಕೆಲಸಗಳ ಜಂಜಾಟಗಳಿಗೆ ಒಂದು ಬದಲಾವಣೆ ಈ ಹಬ್ಬಗಳು. ಅದರಲ್ಲಿಯೂ ನವರಾತ್ರಿಯೆಂದರೆ ನಾಡಹಬ್ಬ. ಶಾಲಾ ಮಕ್ಕಳಿಗೆ ವಾರ್ಷಿಕೋತ್ಸವದ ಸಡಗರದಂತೆ. ನಿರಂತರ ಒಂಬತ್ತು ದಿನಗಳ ಗೌಜಿ ಸಂಭ್ರಮ. ನವ ಎಂದರೆ ಒಂಬತ್ತು. ಹೆಸರಿನಂತೆ‌ ಒಂಬತ್ತು ದಿನಗಳ ಆಚರಣೆ. ಪ್ರತಿಯೊಂದು ದಿನವೂ ವಿಶೇಷವೇ. ಪ್ರಕೃತಿಯೆಂದರೆ‌ ಮಾತೆ. ನಮ್ಮನ್ನು ಪೊರೆಯುವಾಕೆ. ಕಷ್ಟಕ್ಕೆ ದನಿಯಾಗುವಾಕೆ. ಆಕೆಯ ವಿವಿಧ ರೂಪಗಳ ಆರಾಧನೆಯೇ ಈ ನವರಾತ್ರಿಯ ಆಚರಣೆ.

ದೇವಸ್ಥಾನಗಳಲ್ಲಿ ಹಲವು ಆಚರಣೆಗಳೊಂದಿಗೆ, ಸಾಂಪ್ರದಾಯಿಕವಾಗಿ ದೇವಿಯ ಆರಾಧನೆ ಮಾಡಲಾಗುತ್ತದೆ. ಕೆಲವೊಂದು ಮನೆಗಳಲ್ಲೂ ಒಂಬತ್ತು ದಿನಗಳ ಪೂಜೆ ಹಾಗೂ ವಿಜಯದಶಮಿಯನ್ನು ಸಂಭ್ರಮದಿಂದ ಆಚರಿಸಿಕೊಂಡು ಬಂದವರಿದ್ದಾರೆ. ಮನೆಯ ಹಿರಿಯರು ಅನುಸರಿಸಿದ ಪದ್ಧತಿ ಗಳನ್ನು ಮುಂದುವರಿಸುವ ಗುರುತರವಾದ ಜವಾಬ್ದಾರಿ ಕಿರಿಯರ ಮೇಲಿರುತ್ತದೆ. ತಲತಲಾಂತರಗಳಿಂದ ಪರಿಪಾಲಿಸಿಕೊಂಡು ಬಂದ ಹಬ್ಬ ಹರಿದಿನಗಳನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಕರ್ತವ್ಯ ವಾಗಿದೆ.

ನವರಾತ್ರಿಯ ಆಚರಣೆ ಮಾಡುವಾಗ ನಿಷ್ಠೆ, ಉಪವಾಸ ವ್ರತಗಳೊಂದಿಗೆ ಶ್ರದ್ಧೆಯನ್ನೂ ಅಗತ್ಯವಾಗಿ ಪಾಲಿಸಬೇಕಾಗುತ್ತದೆ.
ನವರಾತ್ರಿ ಹಬ್ಬದ ಸಮಯದಲ್ಲಿ ದೇವಿಯ ಶಕ್ತಿ ಸಾವಿರ ಪಟ್ಟು ಹೆಚ್ಚಿರುವುದರಿಂದ ಆರಾಧನೆಗೇ ಮಹತ್ವ. ಅರ್ಚನೆ, ಪೂಜೆ, ಪರಾಯಣ, ಭಜನೆಗಳನ್ನು ಭಕ್ತಿಯಿಂದ ಮಾಡುವುದರಿಂದ ದೇವರ ಪ್ರೀತಿಗೆ ಪಾತ್ರರಾಗುವುದರಲ್ಲಿ ಸಂಶಯವಿಲ್ಲ. ನಮ್ಮ ಅಭೀಷ್ಠಗಳೇನೇ ಇದ್ದರು ದೇವರು ಈಡೇರಿಸದೆ ಬಿಡರು. ಸಂಪೂರ್ಣ ಶರಣಾಗತಿಯೇ ದೇವರನ್ನು ಒಲಿಸಿಕೊಳ್ಳಲಿರುವ ಏಕೈಕ ಮಾರ್ಗ. ನವರಾತ್ರಿಯ ಸುಸಂದರ್ಭದಲ್ಲಿ ದೇವರ ಆರಾಧನೆಯಲ್ಲಿ ಪಾಲ್ಗೊಳ್ಳೋಣ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

20 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

21 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

21 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago