Advertisement
MIRROR FOCUS

ನಾಡಹಬ್ಬ ನವರಾತ್ರಿ ಆರಂಭ…

Share
ಬ್ಬಗಳು ನಮ್ಮ ಜೀವನದ ಓಗಕ್ಕೆ ಅಮೃತವಿದ್ದಂತೆ. ನಿತ್ಯದ ಕೆಲಸಗಳ ಜಂಜಾಟಗಳಿಗೆ ಒಂದು ಬದಲಾವಣೆ ಈ ಹಬ್ಬಗಳು. ಅದರಲ್ಲಿಯೂ ನವರಾತ್ರಿಯೆಂದರೆ ನಾಡಹಬ್ಬ. ಶಾಲಾ ಮಕ್ಕಳಿಗೆ ವಾರ್ಷಿಕೋತ್ಸವದ ಸಡಗರದಂತೆ. ನಿರಂತರ ಒಂಬತ್ತು ದಿನಗಳ ಗೌಜಿ ಸಂಭ್ರಮ. ನವ ಎಂದರೆ ಒಂಬತ್ತು. ಹೆಸರಿನಂತೆ‌ ಒಂಬತ್ತು ದಿನಗಳ ಆಚರಣೆ. ಪ್ರತಿಯೊಂದು ದಿನವೂ ವಿಶೇಷವೇ. ಪ್ರಕೃತಿಯೆಂದರೆ‌ ಮಾತೆ. ನಮ್ಮನ್ನು ಪೊರೆಯುವಾಕೆ. ಕಷ್ಟಕ್ಕೆ ದನಿಯಾಗುವಾಕೆ. ಆಕೆಯ ವಿವಿಧ ರೂಪಗಳ ಆರಾಧನೆಯೇ ಈ ನವರಾತ್ರಿಯ ಆಚರಣೆ.

ದೇವಸ್ಥಾನಗಳಲ್ಲಿ ಹಲವು ಆಚರಣೆಗಳೊಂದಿಗೆ, ಸಾಂಪ್ರದಾಯಿಕವಾಗಿ ದೇವಿಯ ಆರಾಧನೆ ಮಾಡಲಾಗುತ್ತದೆ. ಕೆಲವೊಂದು ಮನೆಗಳಲ್ಲೂ ಒಂಬತ್ತು ದಿನಗಳ ಪೂಜೆ ಹಾಗೂ ವಿಜಯದಶಮಿಯನ್ನು ಸಂಭ್ರಮದಿಂದ ಆಚರಿಸಿಕೊಂಡು ಬಂದವರಿದ್ದಾರೆ. ಮನೆಯ ಹಿರಿಯರು ಅನುಸರಿಸಿದ ಪದ್ಧತಿ ಗಳನ್ನು ಮುಂದುವರಿಸುವ ಗುರುತರವಾದ ಜವಾಬ್ದಾರಿ ಕಿರಿಯರ ಮೇಲಿರುತ್ತದೆ. ತಲತಲಾಂತರಗಳಿಂದ ಪರಿಪಾಲಿಸಿಕೊಂಡು ಬಂದ ಹಬ್ಬ ಹರಿದಿನಗಳನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಕರ್ತವ್ಯ ವಾಗಿದೆ.

ನವರಾತ್ರಿಯ ಆಚರಣೆ ಮಾಡುವಾಗ ನಿಷ್ಠೆ, ಉಪವಾಸ ವ್ರತಗಳೊಂದಿಗೆ ಶ್ರದ್ಧೆಯನ್ನೂ ಅಗತ್ಯವಾಗಿ ಪಾಲಿಸಬೇಕಾಗುತ್ತದೆ.
ನವರಾತ್ರಿ ಹಬ್ಬದ ಸಮಯದಲ್ಲಿ ದೇವಿಯ ಶಕ್ತಿ ಸಾವಿರ ಪಟ್ಟು ಹೆಚ್ಚಿರುವುದರಿಂದ ಆರಾಧನೆಗೇ ಮಹತ್ವ. ಅರ್ಚನೆ, ಪೂಜೆ, ಪರಾಯಣ, ಭಜನೆಗಳನ್ನು ಭಕ್ತಿಯಿಂದ ಮಾಡುವುದರಿಂದ ದೇವರ ಪ್ರೀತಿಗೆ ಪಾತ್ರರಾಗುವುದರಲ್ಲಿ ಸಂಶಯವಿಲ್ಲ. ನಮ್ಮ ಅಭೀಷ್ಠಗಳೇನೇ ಇದ್ದರು ದೇವರು ಈಡೇರಿಸದೆ ಬಿಡರು. ಸಂಪೂರ್ಣ ಶರಣಾಗತಿಯೇ ದೇವರನ್ನು ಒಲಿಸಿಕೊಳ್ಳಲಿರುವ ಏಕೈಕ ಮಾರ್ಗ. ನವರಾತ್ರಿಯ ಸುಸಂದರ್ಭದಲ್ಲಿ ದೇವರ ಆರಾಧನೆಯಲ್ಲಿ ಪಾಲ್ಗೊಳ್ಳೋಣ.

ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

7 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

15 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago