ಮನದಲ್ಲಿ ಮಡುಗಟ್ಟಿದ್ದ
ಭಾವಗಳ ಕೆದಕಿ,ಬರೆಯಲು
ಪ್ರೇರೇಪಿಸಿತು ,ಪುಸ್ತಕದ ನಡುವಲ್ಲಿ
ಬೆಚ್ಚಗೆ ಮಲಗಿದ್ದ ನವಿಲುಗರಿ
ಬದುಕಿನ ಪುಸ್ತಕದಲ್ಲಿ
ನೆನಪುಗಳ ಪುಟ ಹೊರಳಿಸಿ
ಮತ್ತೆ ಅವತಾರವೆತ್ತಿ ನಲಿಯಿತು
ಜೋಪಾನವಾಗಿ ಬಚ್ಚಿಟ್ಟ ನವಿಲುಗರಿ
ಬಣ್ಣ ಬಣ್ಣದ ಭಾವಕ್ಕೆ
ಅನುಭಾವ ತುಂಬಿ,ಅನುರಾಗದ
ಅನುಬಂಧಕ್ಕೆ ಅನುಮೋದಿಸಿತು
ಮತ್ತೆ ಕಣ್ಣೆದುರು ಸಿಕ್ಕ ನವಿಲುಗರಿ
ಒಲವಿನ ಗೂಡು ಕಟ್ಟಿ
ಚೆಲುವಿನ ಚುಕ್ಕಿ ಇಟ್ಟು
ಪ್ರೇಮದ ರಂಗೋಲಿ ಬರೆಯಲು
ಪ್ರೇರೆಪಿಸಿತ್ತು ಮುಚ್ಚಿಟ್ಟ ನವಿಲುಗರಿ
# ಅಪೂರ್ವ ಚೇತನ್ ಪೆರಂದೋಡಿ
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…