ಮನದಲ್ಲಿ ಮಡುಗಟ್ಟಿದ್ದ
ಭಾವಗಳ ಕೆದಕಿ,ಬರೆಯಲು
ಪ್ರೇರೇಪಿಸಿತು ,ಪುಸ್ತಕದ ನಡುವಲ್ಲಿ
ಬೆಚ್ಚಗೆ ಮಲಗಿದ್ದ ನವಿಲುಗರಿ
ಬದುಕಿನ ಪುಸ್ತಕದಲ್ಲಿ
ನೆನಪುಗಳ ಪುಟ ಹೊರಳಿಸಿ
ಮತ್ತೆ ಅವತಾರವೆತ್ತಿ ನಲಿಯಿತು
ಜೋಪಾನವಾಗಿ ಬಚ್ಚಿಟ್ಟ ನವಿಲುಗರಿ
ಬಣ್ಣ ಬಣ್ಣದ ಭಾವಕ್ಕೆ
ಅನುಭಾವ ತುಂಬಿ,ಅನುರಾಗದ
ಅನುಬಂಧಕ್ಕೆ ಅನುಮೋದಿಸಿತು
ಮತ್ತೆ ಕಣ್ಣೆದುರು ಸಿಕ್ಕ ನವಿಲುಗರಿ
ಒಲವಿನ ಗೂಡು ಕಟ್ಟಿ
ಚೆಲುವಿನ ಚುಕ್ಕಿ ಇಟ್ಟು
ಪ್ರೇಮದ ರಂಗೋಲಿ ಬರೆಯಲು
ಪ್ರೇರೆಪಿಸಿತ್ತು ಮುಚ್ಚಿಟ್ಟ ನವಿಲುಗರಿ
# ಅಪೂರ್ವ ಚೇತನ್ ಪೆರಂದೋಡಿ
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…