Advertisement
ಸುದ್ದಿಗಳು

ನವರಾತ್ರಿ ಎಂದರೆ ಮನರಂಜನೆಯಲ್ಲ, ಅದು ದೇವಿಯ ಆರಾಧನೆ – ರಾಘವೇಶ್ವರ ಶ್ರೀ

Share

ನವರಾತ್ರಿ ಎಂದರೆ ಅದು ಮನರಂಜನೆಗಾಗಿ ಇರುವ ಪರ್ವವಲ್ಲ ಬದಲಾಗಿ ದೇವಿಯ ಆರಾಧನೆ ಕಾಲ ಎಂದು ಶ್ರೀರಾಮಚಂದ್ರಾಪುರಮಠದ  ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಸಾಗರದ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ ಆರನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ಆಶೀರ್ವಚನ ನೀಡಿದರು. ಲೋಕ ಕಲ್ಯಾಣ ಕಾರ್ಯದಲ್ಲಿ ತಾಯಿ ಮಗ್ನವಾಗಿರುವಾಗ ಆಕೆಯ ಪರಿವಾರ ಆಕೆಗೆ ಯಾವ ರೀತಿಯ ಸಹಕಾರ ನೀಡಿದರು ಮತ್ತು ಆ ಎಲ್ಲ ದೇವಿಯರು ಯಾರು ಎನ್ನುವ ಹೆಸರನ್ನು ತಿಳಿದರೆ, ಅವರ ನಾಮ ಜಪಿಸಿದರೆ ಅದಕ್ಕಿಂತ ಪುಣ್ಯ ಬೇರೆ ಯಾವುದಿಲ್ಲ ಎಂದ ಅವರು ಅಂತಹ ಪುಣ್ಯ ಸಂಪಾದನೆಯನ್ನು ಮಾಡಿಕೊಳ್ಳುವುದಕ್ಕಾಗಿಯೇ ನವರಾತ್ರಿ ಎನ್ನುವುದು ಶ್ರೇಷ್ಟವಾದ ಕಾಲ ಹಾಗಾಗಿ ಇದು ಪೂರ್ಣ ದೇವಿಯ ಆರಾಧನೆಯ ಸಮಯವೇ ಹೊರತು ಮನರಂಜನೆಯ ಸಮಯವಲ್ಲ ಎಂದರು.

ಆಧುನಿಕ ಪದ್ಧತಿ ವೈಜ್ಞಾನಿಕವೂ ಅಲ್ಲ ಖಗೋಳದ ಬೆಂಬಲವೂ ಇಲ್ಲ. ಜನವರಿ ,ಫೆಬ್ರವರಿ, ಒಂದು ಎರಡು ದಿನಾಂಕದ ಆಧುನಿಕ ಪದ್ದತಿಗೆ ವೈಜ್ಞಾನಿಕ ಅರ್ಥವೂ ಇಲ್ಲ, ಖಗೋಳದ ಬೆಂಬಲವೂ ಇಲ್ಲ. ಆದರೆ ತಿಥಿ, ಮಾಸಗಳಿಗೆ ಪ್ರಕೃತಿ ಸಹಜತೆ ಕಂಡು ಬರಿದೆ. ಉದಾಹರಣೆ ಹುಣ್ಣಿಮೆ ಎನ್ನುವ ತಿಥಿಗೆ ಆಕಾಶ ತೋರಿದರೆ ಅಲ್ಲಿ ಗೋಚರವಾಗಲಿದೆ ಇದು ಪ್ರತಿ ತಿಥಿಗೂ ಹಾಗೆ ಆಯಾ ಮಾಸಗಳಲ್ಲಿ ಪ್ರಕೃತಿಯ ಬದಲಾವಣೆಗಳನ್ನು ತಿಳಿಸುವ ವೈಜ್ಞಾನಿಕ ನಿಜವಿದೆ ಎಂದ ಅವರು ಈ ಪ್ರತಿ ತಿಥಿ ನಕ್ಷತ್ರಗಳಲ್ಲಿ ದೈವಿ ಸ್ವರೂಪ ಇದೆ ಅದನ್ನು ನಿತ್ಯ ಗಮನಿಸಿದರೆ ಪೂರ್ವಜರು ತಿಳಿಸಿರುವ ವಿಧಾನದ ಸತ್ಯ ಅರಿವಾಗಲಿದೆ ಎಂದ ಅವರು ಅಂತಹ ಪ್ರಕೃತಿ ಸಹಜತೆಯ ವಿಧಾನವನ್ನು ಬಿಟ್ಟು ವೈಜ್ಞಾನಿಕವಲ್ಲದ ಮೌಡ್ಯವನ್ನು ಅನುಸರಿಸುತ್ತಿರುವುದು ಬೇಸರದ ಸಂಗತಿ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಇದಕ್ಕೂ ಮುನ್ನ ನವರಾತ್ರ ನಮಸ್ಯಾ ಸಮಿತಿಯಿಂದ ಕೊಡ ಮಾಡಿದ ಸಮಾಜ ಗೌರವವನ್ನು ಗುಡಿಗಾರ ಸಮಾಜ, ಮಡಿವಾಳ ಸಮಾಜ, ಹಸಲರ ಸಮಾಜ, ವೀರಶೈವ ಸಮಾಜ, ಬಲಿಜ ಸಮಾಜ, ಬಾಹುಸಾರ ಕ್ಷತ್ರಿಯ ಸಮಾಜ, ಹಾಗೂ ಉಪ್ಪಾರ ಸಮಾಜಕ್ಕೆ ಕೊಡಲಾಯಿತು. ಆಯಾ ಸಮಾಜದ ಪರವಾಗಿ ಅಧ್ಯಕ್ಷರಾದ ಅಣ್ಣಪ್ಪ ಗುಡಿಗಾರ, ಕೊಟ್ರಪ್ಪ, ಮಲ್ಲೇಶಪ್ಪ, ಕೆ.ವಿ. ಪ್ರವೀಣ್, ಸತೀಶ, ರವಿ ಮಹೇಂದ್ರಕರ್, ಮಲ್ಲೇಶಪ್ಪ ಗೌರವ ಸ್ವೀಕರಿಸಿದರು.
ನವರಾತ್ರ ನಮಸ್ಯಾ ಸಮಿತಿಯ ಪ್ರಧಾನ ಸಂಚಾಲಕ ಮುರಳಿ ಗೀಜಗಾರು, ಅಧ್ಯಕ್ಷ ಗುರುಮೂರ್ತಿ ಹೆಗಡೆ ಕಲ್ಸೆಮನೆ, ಶ್ರೀಮಠದ ವಿತ್ತಾಧ್ಯಕ್ಷ ಜಿ.ಎಲ್. ಗಣೇಶ್, ಮಾಧ್ಯಮ ಶ್ರೀಸಂಯೋಜಕ ಸಂದೇಶ ತಲಕಾಲಕೊಪ್ಪ, ಹವ್ಯಕ ಮಂಡಲದ ಪ್ರಮುಖರಾದ ಗಣಪತಿ ಬೇದೂರು, ವಿ.ಜಿ. ಹೆಗಡೆ, ಕೆ.ಆರ್. ಗೋಪಾಲ, ತೀರ್ಥಹಳ್ಳಿ ಮಠದ ಸಮಿತಿ ಅಧ್ಯಕ್ಷ ಕಾರ್ತಿಕ್, ಮಹಾಮಂಡಲದ ಪ್ರಧಾನ ರಮೇಶ್ ಹೆಗಡೆ ಗುಂಡೂಮನೆ, ಶ್ರೀನಾಥ ಸಾರಂಗ, ಎಂ.ಜಿ. ರಾಮಚಂದ್ರ, ಗೌತಮ ಮತ್ತಿತರರು ಇದ್ದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

12 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

12 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

12 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

20 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

1 day ago