Advertisement
ಸುದ್ದಿಗಳು

ನವರಾತ್ರಿ ಎಂದರೆ ಮನರಂಜನೆಯಲ್ಲ, ಅದು ದೇವಿಯ ಆರಾಧನೆ – ರಾಘವೇಶ್ವರ ಶ್ರೀ

Share

ನವರಾತ್ರಿ ಎಂದರೆ ಅದು ಮನರಂಜನೆಗಾಗಿ ಇರುವ ಪರ್ವವಲ್ಲ ಬದಲಾಗಿ ದೇವಿಯ ಆರಾಧನೆ ಕಾಲ ಎಂದು ಶ್ರೀರಾಮಚಂದ್ರಾಪುರಮಠದ  ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು.

ಸಾಗರದ ಶ್ರೀ ರಾಘವೇಶ್ವರ ಭವನದ ಶ್ರೀಮನ್ನಗರ ವೇದಿಕೆಯಲ್ಲಿ ಏರ್ಪಡಿಸಿರುವ ನವರಾತ್ರ ನಮಸ್ಯಾದ ಆರನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ಆಶೀರ್ವಚನ ನೀಡಿದರು. ಲೋಕ ಕಲ್ಯಾಣ ಕಾರ್ಯದಲ್ಲಿ ತಾಯಿ ಮಗ್ನವಾಗಿರುವಾಗ ಆಕೆಯ ಪರಿವಾರ ಆಕೆಗೆ ಯಾವ ರೀತಿಯ ಸಹಕಾರ ನೀಡಿದರು ಮತ್ತು ಆ ಎಲ್ಲ ದೇವಿಯರು ಯಾರು ಎನ್ನುವ ಹೆಸರನ್ನು ತಿಳಿದರೆ, ಅವರ ನಾಮ ಜಪಿಸಿದರೆ ಅದಕ್ಕಿಂತ ಪುಣ್ಯ ಬೇರೆ ಯಾವುದಿಲ್ಲ ಎಂದ ಅವರು ಅಂತಹ ಪುಣ್ಯ ಸಂಪಾದನೆಯನ್ನು ಮಾಡಿಕೊಳ್ಳುವುದಕ್ಕಾಗಿಯೇ ನವರಾತ್ರಿ ಎನ್ನುವುದು ಶ್ರೇಷ್ಟವಾದ ಕಾಲ ಹಾಗಾಗಿ ಇದು ಪೂರ್ಣ ದೇವಿಯ ಆರಾಧನೆಯ ಸಮಯವೇ ಹೊರತು ಮನರಂಜನೆಯ ಸಮಯವಲ್ಲ ಎಂದರು.

ಆಧುನಿಕ ಪದ್ಧತಿ ವೈಜ್ಞಾನಿಕವೂ ಅಲ್ಲ ಖಗೋಳದ ಬೆಂಬಲವೂ ಇಲ್ಲ. ಜನವರಿ ,ಫೆಬ್ರವರಿ, ಒಂದು ಎರಡು ದಿನಾಂಕದ ಆಧುನಿಕ ಪದ್ದತಿಗೆ ವೈಜ್ಞಾನಿಕ ಅರ್ಥವೂ ಇಲ್ಲ, ಖಗೋಳದ ಬೆಂಬಲವೂ ಇಲ್ಲ. ಆದರೆ ತಿಥಿ, ಮಾಸಗಳಿಗೆ ಪ್ರಕೃತಿ ಸಹಜತೆ ಕಂಡು ಬರಿದೆ. ಉದಾಹರಣೆ ಹುಣ್ಣಿಮೆ ಎನ್ನುವ ತಿಥಿಗೆ ಆಕಾಶ ತೋರಿದರೆ ಅಲ್ಲಿ ಗೋಚರವಾಗಲಿದೆ ಇದು ಪ್ರತಿ ತಿಥಿಗೂ ಹಾಗೆ ಆಯಾ ಮಾಸಗಳಲ್ಲಿ ಪ್ರಕೃತಿಯ ಬದಲಾವಣೆಗಳನ್ನು ತಿಳಿಸುವ ವೈಜ್ಞಾನಿಕ ನಿಜವಿದೆ ಎಂದ ಅವರು ಈ ಪ್ರತಿ ತಿಥಿ ನಕ್ಷತ್ರಗಳಲ್ಲಿ ದೈವಿ ಸ್ವರೂಪ ಇದೆ ಅದನ್ನು ನಿತ್ಯ ಗಮನಿಸಿದರೆ ಪೂರ್ವಜರು ತಿಳಿಸಿರುವ ವಿಧಾನದ ಸತ್ಯ ಅರಿವಾಗಲಿದೆ ಎಂದ ಅವರು ಅಂತಹ ಪ್ರಕೃತಿ ಸಹಜತೆಯ ವಿಧಾನವನ್ನು ಬಿಟ್ಟು ವೈಜ್ಞಾನಿಕವಲ್ಲದ ಮೌಡ್ಯವನ್ನು ಅನುಸರಿಸುತ್ತಿರುವುದು ಬೇಸರದ ಸಂಗತಿ ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಇದಕ್ಕೂ ಮುನ್ನ ನವರಾತ್ರ ನಮಸ್ಯಾ ಸಮಿತಿಯಿಂದ ಕೊಡ ಮಾಡಿದ ಸಮಾಜ ಗೌರವವನ್ನು ಗುಡಿಗಾರ ಸಮಾಜ, ಮಡಿವಾಳ ಸಮಾಜ, ಹಸಲರ ಸಮಾಜ, ವೀರಶೈವ ಸಮಾಜ, ಬಲಿಜ ಸಮಾಜ, ಬಾಹುಸಾರ ಕ್ಷತ್ರಿಯ ಸಮಾಜ, ಹಾಗೂ ಉಪ್ಪಾರ ಸಮಾಜಕ್ಕೆ ಕೊಡಲಾಯಿತು. ಆಯಾ ಸಮಾಜದ ಪರವಾಗಿ ಅಧ್ಯಕ್ಷರಾದ ಅಣ್ಣಪ್ಪ ಗುಡಿಗಾರ, ಕೊಟ್ರಪ್ಪ, ಮಲ್ಲೇಶಪ್ಪ, ಕೆ.ವಿ. ಪ್ರವೀಣ್, ಸತೀಶ, ರವಿ ಮಹೇಂದ್ರಕರ್, ಮಲ್ಲೇಶಪ್ಪ ಗೌರವ ಸ್ವೀಕರಿಸಿದರು.
ನವರಾತ್ರ ನಮಸ್ಯಾ ಸಮಿತಿಯ ಪ್ರಧಾನ ಸಂಚಾಲಕ ಮುರಳಿ ಗೀಜಗಾರು, ಅಧ್ಯಕ್ಷ ಗುರುಮೂರ್ತಿ ಹೆಗಡೆ ಕಲ್ಸೆಮನೆ, ಶ್ರೀಮಠದ ವಿತ್ತಾಧ್ಯಕ್ಷ ಜಿ.ಎಲ್. ಗಣೇಶ್, ಮಾಧ್ಯಮ ಶ್ರೀಸಂಯೋಜಕ ಸಂದೇಶ ತಲಕಾಲಕೊಪ್ಪ, ಹವ್ಯಕ ಮಂಡಲದ ಪ್ರಮುಖರಾದ ಗಣಪತಿ ಬೇದೂರು, ವಿ.ಜಿ. ಹೆಗಡೆ, ಕೆ.ಆರ್. ಗೋಪಾಲ, ತೀರ್ಥಹಳ್ಳಿ ಮಠದ ಸಮಿತಿ ಅಧ್ಯಕ್ಷ ಕಾರ್ತಿಕ್, ಮಹಾಮಂಡಲದ ಪ್ರಧಾನ ರಮೇಶ್ ಹೆಗಡೆ ಗುಂಡೂಮನೆ, ಶ್ರೀನಾಥ ಸಾರಂಗ, ಎಂ.ಜಿ. ರಾಮಚಂದ್ರ, ಗೌತಮ ಮತ್ತಿತರರು ಇದ್ದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

9 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

21 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

23 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

1 day ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 days ago