ಚಿಕ್ಕಮಗಳೂರಿನ ಜಿಲ್ಲೆಯ ಕೊಪ್ಪ, ಜಯಪುರ, ಶೃಂಗೇರಿ, ಕುದುರೆಮುಖ ವ್ಯಾಪ್ತಿಯಲ್ಲಿ ನಕ್ಸಲ್ ನಿಗ್ರಹ ಪಡೆ ಹಾಗು ಪೊಲೀಸ್ ಇಲಾಖೆ ವತಿಯಿಂದ ಕಾರ್ಯಾಚರಣೆ ತೀವ್ರಗೊಂಡಿದೆ. ಕೊಪ್ಪ ತಾಲೂಕಿನ ಕಡೆಗುಂದಿ ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಇತ್ತೀಚೆಗೆ ಲತಾ ಹಾಗೂ ಜಯಣ್ಣ ಎಂಬ ನಾಲ್ವರು ನಕ್ಸಲರ ತಂಡ ಭೇಟಿ ನೀಡಿದ್ದು, ಈ ಬಗ್ಗೆ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕ್ಸಲರು ಭೇಟಿ ನೀಡಿ ಹೋದ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆಯ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಹಾಗು ಹಿರಿಯ ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಹೂಡಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗ್ರಾಮಗಳ ಸುತ್ತ ಮುತ್ತ ಭದ್ರತೆ ಹೆಚಿಸಲಾಗಿದ್ದು ಸೂಕ್ಷ್ಮ ಸ್ಥಳಗಳಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಿ ವಾಹನ ತಪಾಸಣೆ ಮಾಡಲಾಗುತ್ತಿದೆ.
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…