ಚಿಕ್ಕಮಗಳೂರಿನ ಜಿಲ್ಲೆಯ ಕೊಪ್ಪ, ಜಯಪುರ, ಶೃಂಗೇರಿ, ಕುದುರೆಮುಖ ವ್ಯಾಪ್ತಿಯಲ್ಲಿ ನಕ್ಸಲ್ ನಿಗ್ರಹ ಪಡೆ ಹಾಗು ಪೊಲೀಸ್ ಇಲಾಖೆ ವತಿಯಿಂದ ಕಾರ್ಯಾಚರಣೆ ತೀವ್ರಗೊಂಡಿದೆ. ಕೊಪ್ಪ ತಾಲೂಕಿನ ಕಡೆಗುಂದಿ ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಇತ್ತೀಚೆಗೆ ಲತಾ ಹಾಗೂ ಜಯಣ್ಣ ಎಂಬ ನಾಲ್ವರು ನಕ್ಸಲರ ತಂಡ ಭೇಟಿ ನೀಡಿದ್ದು, ಈ ಬಗ್ಗೆ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕ್ಸಲರು ಭೇಟಿ ನೀಡಿ ಹೋದ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆಯ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಹಾಗು ಹಿರಿಯ ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಹೂಡಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗ್ರಾಮಗಳ ಸುತ್ತ ಮುತ್ತ ಭದ್ರತೆ ಹೆಚಿಸಲಾಗಿದ್ದು ಸೂಕ್ಷ್ಮ ಸ್ಥಳಗಳಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಿ ವಾಹನ ತಪಾಸಣೆ ಮಾಡಲಾಗುತ್ತಿದೆ.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…