ರಾಜ್ಯ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರಿದ  ನಕ್ಸಲ್ ಕೂಂಬಿಂಗ್ ಕಾರ್ಯಚರಣೆ | ನಕ್ಸಲರಿಗೆ ಶರಣಾಗುವಂತೆ ಸರ್ಕಾರ ಸೂಚನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ಕೂಂಬಿಂಗ್ ಕಾರ್ಯಚರಣೆ ಮುಂದುವರೆಸಲಾಗಿದೆ. ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ, ಕೆರೆಕಟ್ಟೆ. ಸುತ್ತಿನಗುಡ್ಡ ಹಾಗು ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಜಿಲ್ಲೆಯ ಗಡಿಯಂಚಿನ ಚೆಕ್ ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ,  ಶಿವಮೊಗ್ಗ ಜಿಲ್ಲೆಗಳ ಅರಣ್ಯ ವ್ಯಾಪ್ತಿಗಳಲ್ಲಿ ನಕ್ಸಲರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಕಳೆದ ವಾರ ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್ ಬಳಿಕ ಸುಮಾರು 3 ಮಂದಿ ನಕ್ಸಲರು ಅರಣ್ಯದಲ್ಲಿ ತಪ್ಪಿಸಿಕೊಂಡಿದ್ದಾರೆ. ಮುಂಡಗಾರು ಲತಾ, ಜಯಣ್ಣ, ವನಜಾಕ್ಷಿ ತಂಡ ಕಾಡಿನಲ್ಲಿ ಇರುವ ಅನುಮಾನವಿದ್ದು ಕೂಂಬಿಂಗ್ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ನಕ್ಸಲರಿಗೆ ಶರಣಾಗುವಂತೆ ಸರ್ಕಾರ ಸೂಚನೆ : ನಕ್ಸಲ್ ನಾಯಕ ವಿಕ್ರಂ ಗೌಡನ ಹತ್ಯೆ ಬಳಿಕ  ಆತನ ಸಹಚರರಿಗೆ ಸಮಾಜದ ಮುಖ್ಯವಾಹಿನಿಗೆ ಬರಲು ಶರಣಾಗಲು ಸರ್ಕಾರ ಅವಕಾಶ ನೀಡಿದೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್ ನಕ್ಸಲರು ತಮ್ಮ ನಿಲುವು ಬದಲಿಸುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ. ಶರಣಾಗುವ ನಕ್ಸಲರಿಗೆ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ತಿಳಿಸಿದ್ದಾರೆ.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ

ಭಾರತದ ರಾಸಾಯನಿಕ ವಲಯವು  ಒಟ್ಟು ದೇಶೀಯ ಉತ್ಪನ್ನ ಕೊಡುಗೆಯಲ್ಲಿ ಗಮನಾರ್ಹ ಪಾತ್ರ ವಹಿಸುತ್ತಿದೆ.…

49 minutes ago

ಬುಧ ಮತ್ತು ಶನಿ ಕಾಟದಿಂದ ಈ ರಾಶಿಯವರು ಸ್ವಲ್ಪ ಜೋಪಾನವಾಗಿರಬೇಕು

ರಾಯರ ಪರಮಭಕ್ತರದ ಜ್ಯೋತಿಷಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ 9535156490

1 hour ago

ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ

ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ  ಜಮ್ಮು ಮತ್ತು ಕಾಶ್ಮೀರದ…

9 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಉತ್ತರಕನ್ನಡ, ಕೊಡಗಿನಲ್ಲಿ ಸಮಸ್ಯೆ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…

9 hours ago

ಕೇರಳದಲ್ಲಿ 1 ಲಕ್ಷ ಹೆಕ್ಟೇರ್‌ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಇಲ್ಲ..!

ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್‌ ಪ್ರದೇಶದ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಸ್ಥಗಿತವಾಗಿದೆ. 

17 hours ago