Advertisement
ರಾಜ್ಯ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರಿದ  ನಕ್ಸಲ್ ಕೂಂಬಿಂಗ್ ಕಾರ್ಯಚರಣೆ | ನಕ್ಸಲರಿಗೆ ಶರಣಾಗುವಂತೆ ಸರ್ಕಾರ ಸೂಚನೆ |

Share

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ಕೂಂಬಿಂಗ್ ಕಾರ್ಯಚರಣೆ ಮುಂದುವರೆಸಲಾಗಿದೆ. ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ, ಕೆರೆಕಟ್ಟೆ. ಸುತ್ತಿನಗುಡ್ಡ ಹಾಗು ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಜಿಲ್ಲೆಯ ಗಡಿಯಂಚಿನ ಚೆಕ್ ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ,  ಶಿವಮೊಗ್ಗ ಜಿಲ್ಲೆಗಳ ಅರಣ್ಯ ವ್ಯಾಪ್ತಿಗಳಲ್ಲಿ ನಕ್ಸಲರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಕಳೆದ ವಾರ ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್ ಬಳಿಕ ಸುಮಾರು 3 ಮಂದಿ ನಕ್ಸಲರು ಅರಣ್ಯದಲ್ಲಿ ತಪ್ಪಿಸಿಕೊಂಡಿದ್ದಾರೆ. ಮುಂಡಗಾರು ಲತಾ, ಜಯಣ್ಣ, ವನಜಾಕ್ಷಿ ತಂಡ ಕಾಡಿನಲ್ಲಿ ಇರುವ ಅನುಮಾನವಿದ್ದು ಕೂಂಬಿಂಗ್ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಕ್ಸಲರಿಗೆ ಶರಣಾಗುವಂತೆ ಸರ್ಕಾರ ಸೂಚನೆ : ನಕ್ಸಲ್ ನಾಯಕ ವಿಕ್ರಂ ಗೌಡನ ಹತ್ಯೆ ಬಳಿಕ  ಆತನ ಸಹಚರರಿಗೆ ಸಮಾಜದ ಮುಖ್ಯವಾಹಿನಿಗೆ ಬರಲು ಶರಣಾಗಲು ಸರ್ಕಾರ ಅವಕಾಶ ನೀಡಿದೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್ ನಕ್ಸಲರು ತಮ್ಮ ನಿಲುವು ಬದಲಿಸುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ. ಶರಣಾಗುವ ನಕ್ಸಲರಿಗೆ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

22 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago