ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ಕೂಂಬಿಂಗ್ ಕಾರ್ಯಚರಣೆ ಮುಂದುವರೆಸಲಾಗಿದೆ. ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ, ಕೆರೆಕಟ್ಟೆ. ಸುತ್ತಿನಗುಡ್ಡ ಹಾಗು ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಜಿಲ್ಲೆಯ ಗಡಿಯಂಚಿನ ಚೆಕ್ ಪೋಸ್ಟ್ಗಳಲ್ಲಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಗಳ ಅರಣ್ಯ ವ್ಯಾಪ್ತಿಗಳಲ್ಲಿ ನಕ್ಸಲರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಕಳೆದ ವಾರ ನಕ್ಸಲ್ ವಿಕ್ರಂಗೌಡ ಎನ್ಕೌಂಟರ್ ಬಳಿಕ ಸುಮಾರು 3 ಮಂದಿ ನಕ್ಸಲರು ಅರಣ್ಯದಲ್ಲಿ ತಪ್ಪಿಸಿಕೊಂಡಿದ್ದಾರೆ. ಮುಂಡಗಾರು ಲತಾ, ಜಯಣ್ಣ, ವನಜಾಕ್ಷಿ ತಂಡ ಕಾಡಿನಲ್ಲಿ ಇರುವ ಅನುಮಾನವಿದ್ದು ಕೂಂಬಿಂಗ್ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಕ್ಸಲರಿಗೆ ಶರಣಾಗುವಂತೆ ಸರ್ಕಾರ ಸೂಚನೆ : ನಕ್ಸಲ್ ನಾಯಕ ವಿಕ್ರಂ ಗೌಡನ ಹತ್ಯೆ ಬಳಿಕ ಆತನ ಸಹಚರರಿಗೆ ಸಮಾಜದ ಮುಖ್ಯವಾಹಿನಿಗೆ ಬರಲು ಶರಣಾಗಲು ಸರ್ಕಾರ ಅವಕಾಶ ನೀಡಿದೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್ ನಕ್ಸಲರು ತಮ್ಮ ನಿಲುವು ಬದಲಿಸುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ. ಶರಣಾಗುವ ನಕ್ಸಲರಿಗೆ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…