Advertisement
ರಾಜ್ಯ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರಿದ  ನಕ್ಸಲ್ ಕೂಂಬಿಂಗ್ ಕಾರ್ಯಚರಣೆ | ನಕ್ಸಲರಿಗೆ ಶರಣಾಗುವಂತೆ ಸರ್ಕಾರ ಸೂಚನೆ |

Share

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ಕೂಂಬಿಂಗ್ ಕಾರ್ಯಚರಣೆ ಮುಂದುವರೆಸಲಾಗಿದೆ. ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ, ಕೆರೆಕಟ್ಟೆ. ಸುತ್ತಿನಗುಡ್ಡ ಹಾಗು ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಜಿಲ್ಲೆಯ ಗಡಿಯಂಚಿನ ಚೆಕ್ ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ. ಉಡುಪಿ, ದಕ್ಷಿಣ ಕನ್ನಡ,  ಶಿವಮೊಗ್ಗ ಜಿಲ್ಲೆಗಳ ಅರಣ್ಯ ವ್ಯಾಪ್ತಿಗಳಲ್ಲಿ ನಕ್ಸಲರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಕಳೆದ ವಾರ ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್ ಬಳಿಕ ಸುಮಾರು 3 ಮಂದಿ ನಕ್ಸಲರು ಅರಣ್ಯದಲ್ಲಿ ತಪ್ಪಿಸಿಕೊಂಡಿದ್ದಾರೆ. ಮುಂಡಗಾರು ಲತಾ, ಜಯಣ್ಣ, ವನಜಾಕ್ಷಿ ತಂಡ ಕಾಡಿನಲ್ಲಿ ಇರುವ ಅನುಮಾನವಿದ್ದು ಕೂಂಬಿಂಗ್ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಕ್ಸಲರಿಗೆ ಶರಣಾಗುವಂತೆ ಸರ್ಕಾರ ಸೂಚನೆ : ನಕ್ಸಲ್ ನಾಯಕ ವಿಕ್ರಂ ಗೌಡನ ಹತ್ಯೆ ಬಳಿಕ  ಆತನ ಸಹಚರರಿಗೆ ಸಮಾಜದ ಮುಖ್ಯವಾಹಿನಿಗೆ ಬರಲು ಶರಣಾಗಲು ಸರ್ಕಾರ ಅವಕಾಶ ನೀಡಿದೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್ ನಕ್ಸಲರು ತಮ್ಮ ನಿಲುವು ಬದಲಿಸುವುದು ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ. ಶರಣಾಗುವ ನಕ್ಸಲರಿಗೆ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

4 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

13 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

14 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

18 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

19 hours ago