ನಕ್ಸಲರ ಶರಣಾಗತಿ ಹಿನ್ನೆಲೆ | ಶಸ್ತ್ರಾಸ್ತ್ರಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ತನಿಖೆ

January 10, 2025
6:45 AM

ರಾಜ್ಯದಲ್ಲಿ ಶರಣಾದ ನಕ್ಸಲರನ್ನು  ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.  ಈ ನಡುವೆ ಶರಣಾದ ಮಾವೋವಾದಿಗಳ ತನಿಖೆಗಾಗಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಕಾರಿ ಬಾಲಾಜಿ ಸಿಂಗ್ ಅವರನ್ನು ನಿಯೋಜಿಸಲಾಗಿದೆ.

Advertisement
Advertisement
Advertisement
Advertisement

ಸರ್ಕಾರದ ಮುಂದೆ ಶರಣಾದಾಗ ನಕ್ಸಲರು ಶಸ್ತಾಸ್ತ್ರಗಳನ್ನು ತ್ಯಜಿಸಿರಲಿಲ್ಲ. ಸಾಂಕೇತಿಕವಾಗಿ ಶರಣಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ಅವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಿದ್ದಾರೆ.  ಮುಂಡಗಾರು ಲತಾ, 85 ಪ್ರಕರಣಗಳನ್ನು ಎದುರಿಸುತ್ತಿದ್ದು, ಸುಂದರಿ 71, ಮಾರಪ್ಪ ಅರೋಲಿ 50, ವನಜಾಕ್ಷಿ 29, ವಸಂತ 8 ಮತ್ತು ಜೀಶಾ 11 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ನಕ್ಸಲರ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬರಿಗೆ ಮೂರು ಲಕ್ಷ ರೂಪಾಯಿ ಬಿಡುಗಡೆ ಮಾಡಲು ಚಿಕ್ಕಮಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಆದೇಶಿಸಿದೆ.

Advertisement

ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗಿರುವುದರಲ್ಲಿ ತಪ್ಪೇನಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನಕ್ಸಲರ ಮನ ಪರಿವರ್ತನೆಗೆ ಸರ್ಕಾರ ಅವಕಾಶ ಕೊಟ್ಟಿದೆ. ನಕ್ಸಲರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸರ್ಕಾರದ ಮುಂದೆ ಶರಣಾಗಿದ್ದಾರೆ. ಶಸ್ತ್ರಾಸ್ತ್ರಗಳನ್ನು ಎಲ್ಲಿ ಎಸೆದು ಬಂದಿದ್ದಾರೆ ಎಂಬುದರ ಕುರಿತು ಪೊಲೀಸ್ ಇಲಾಖೆಯಿಂದ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ ಎಂದು ಹೇಳಿದ್ದಾರೆ. ಪರಿಶಿಷ್ಟ ಸಮುದಾಯದ ಸಮಾವೇಶದ ಕುರಿತು ಕರೆದಿದ್ದ ಸಭೆ ಮುಂದೂಡಲು ಅನೇಕ ಕಾರಣಗಳಿವೆ ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಫೆ.21 “ಭಾವತೀರ ಯಾನ” ಸಿನಿಮಾ ಬಿಡುಗಡೆ | ಇಬ್ಬರು ಗೆಳೆಯರ ಭಾವಯಾನ | ಮಲೆನಾಡಿನಲ್ಲಿ ನಡೆದಿದೆ ಚಿತ್ರೀಕರಣ |
February 10, 2025
6:29 AM
by: The Rural Mirror ಸುದ್ದಿಜಾಲ
ದುಬೈಯಿಂದ ಅಡಿಕೆ ಕಳ್ಳಸಾಗಾಣಿಕೆ ದಂಧೆ | 1.47 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ | 6 ಮಂದಿ ಬಂಧನ |
February 8, 2025
7:44 PM
by: The Rural Mirror ಸುದ್ದಿಜಾಲ
ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವು
February 8, 2025
7:57 AM
by: The Rural Mirror ಸುದ್ದಿಜಾಲ
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಕಳಸ ಬಂದ್ |
February 8, 2025
7:48 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror