Advertisement
MIRROR FOCUS

ನಕ್ಸಲರ ಶರಣಾಗತಿ ಹಿನ್ನೆಲೆ | ಶಸ್ತ್ರಾಸ್ತ್ರಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ತನಿಖೆ

Share

ರಾಜ್ಯದಲ್ಲಿ ಶರಣಾದ ನಕ್ಸಲರನ್ನು  ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.  ಈ ನಡುವೆ ಶರಣಾದ ಮಾವೋವಾದಿಗಳ ತನಿಖೆಗಾಗಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಕಾರಿ ಬಾಲಾಜಿ ಸಿಂಗ್ ಅವರನ್ನು ನಿಯೋಜಿಸಲಾಗಿದೆ.

Advertisement
Advertisement
Advertisement
Advertisement

ಸರ್ಕಾರದ ಮುಂದೆ ಶರಣಾದಾಗ ನಕ್ಸಲರು ಶಸ್ತಾಸ್ತ್ರಗಳನ್ನು ತ್ಯಜಿಸಿರಲಿಲ್ಲ. ಸಾಂಕೇತಿಕವಾಗಿ ಶರಣಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ಅವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಿದ್ದಾರೆ.  ಮುಂಡಗಾರು ಲತಾ, 85 ಪ್ರಕರಣಗಳನ್ನು ಎದುರಿಸುತ್ತಿದ್ದು, ಸುಂದರಿ 71, ಮಾರಪ್ಪ ಅರೋಲಿ 50, ವನಜಾಕ್ಷಿ 29, ವಸಂತ 8 ಮತ್ತು ಜೀಶಾ 11 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ನಕ್ಸಲರ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬರಿಗೆ ಮೂರು ಲಕ್ಷ ರೂಪಾಯಿ ಬಿಡುಗಡೆ ಮಾಡಲು ಚಿಕ್ಕಮಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಆದೇಶಿಸಿದೆ.

Advertisement

ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗಿರುವುದರಲ್ಲಿ ತಪ್ಪೇನಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನಕ್ಸಲರ ಮನ ಪರಿವರ್ತನೆಗೆ ಸರ್ಕಾರ ಅವಕಾಶ ಕೊಟ್ಟಿದೆ. ನಕ್ಸಲರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸರ್ಕಾರದ ಮುಂದೆ ಶರಣಾಗಿದ್ದಾರೆ. ಶಸ್ತ್ರಾಸ್ತ್ರಗಳನ್ನು ಎಲ್ಲಿ ಎಸೆದು ಬಂದಿದ್ದಾರೆ ಎಂಬುದರ ಕುರಿತು ಪೊಲೀಸ್ ಇಲಾಖೆಯಿಂದ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ ಎಂದು ಹೇಳಿದ್ದಾರೆ. ಪರಿಶಿಷ್ಟ ಸಮುದಾಯದ ಸಮಾವೇಶದ ಕುರಿತು ಕರೆದಿದ್ದ ಸಭೆ ಮುಂದೂಡಲು ಅನೇಕ ಕಾರಣಗಳಿವೆ ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಾವಿನ ನಂತರ  ಬಾಳೆಯು ಪ್ರಮುಖ ಹಣ್ಣಿನ ಬೆಳೆ

ಬಾಳೆಯು ಮಾವಿನ ನಂತರ ನಮ್ಮ ದೇಶದ ಪ್ರಮುಖ ಹಣ್ಣಿನ ಬೆಳೆಯಾಗಿದ್ದು, ಭಾರತ ದೇಶವು…

26 mins ago

ಜಲಜೀವನ್ ಮಿಷನ್ ಯೋಜನೆ | ದಿನದ 24 ಗಂಟೆಯೂ ಶುದ್ಧ ಕುಡಿಯುವ ನೀರು ಪೂರೈಕೆ

ಜಲಜೀವನ್  ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ…

29 mins ago

ಕೃಷಿ ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ ವಿಶ್ವವಿದ್ಯಾಲಯ ಶ್ರಮಿಸಬೇಕು

ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ…

37 mins ago

ಫೆ.21 “ಭಾವತೀರ ಯಾನ” ಸಿನಿಮಾ ಬಿಡುಗಡೆ | ಇಬ್ಬರು ಗೆಳೆಯರ ಭಾವಯಾನ | ಮಲೆನಾಡಿನಲ್ಲಿ ನಡೆದಿದೆ ಚಿತ್ರೀಕರಣ |

ಪ್ರೀತಿ ಎಂದರೆ ಹುಡುಗ-ಹುಡುಗಿಯ ನಡುವಿನ ಪ್ರೇಮವೊಂದೇ ಅಲ್ಲ.ವ್ಯಕ್ತಿಯ ಒಳಗಿನ ಭಾವ ಅದು. ಹೀಗಾಗಿ…

1 day ago

ನನಗೆ ಹೇಗೆ ಕೂಡುತ್ತೋ, ಹಾಗೆ ಮಾತ್ರ ನಾನು ಕೃಷಿ ಮಾಡೋದು…

ಸಾಕಷ್ಟು ಜನ ಅಡಿಕೆ‌ ರೈತರು ಕೇವಲ ಹವ್ಯಾಸೀ ಕೃಷಿಕರು ಹೊರತು ವೃತ್ತಿಪರ ಅಲ್ಲವೇ…

2 days ago

ದೆಹಲಿ ಚುನಾವಣೆ “ರಾಜಕೀಯ ಅಹಂಕಾರ”ಕ್ಕೆ ಉತ್ತರ | ರಚನಾತ್ಮಕ ವಿಪಕ್ಷವಾಗಿ ಕೆಲಸ ಮಾಡಬಹುದೇ ಎಎಪಿ..?

ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್‌ ಆದ್ಮಿಪಕ್ಷ ಕೇವಲ 13…

2 days ago