Advertisement
MIRROR FOCUS

ನಕ್ಸಲರ ಶರಣಾಗತಿ ಹಿನ್ನೆಲೆ | ಶಸ್ತ್ರಾಸ್ತ್ರಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ತನಿಖೆ

Share

ರಾಜ್ಯದಲ್ಲಿ ಶರಣಾದ ನಕ್ಸಲರನ್ನು  ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.  ಈ ನಡುವೆ ಶರಣಾದ ಮಾವೋವಾದಿಗಳ ತನಿಖೆಗಾಗಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಕಾರಿ ಬಾಲಾಜಿ ಸಿಂಗ್ ಅವರನ್ನು ನಿಯೋಜಿಸಲಾಗಿದೆ.

ಸರ್ಕಾರದ ಮುಂದೆ ಶರಣಾದಾಗ ನಕ್ಸಲರು ಶಸ್ತಾಸ್ತ್ರಗಳನ್ನು ತ್ಯಜಿಸಿರಲಿಲ್ಲ. ಸಾಂಕೇತಿಕವಾಗಿ ಶರಣಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ಅವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಿದ್ದಾರೆ.  ಮುಂಡಗಾರು ಲತಾ, 85 ಪ್ರಕರಣಗಳನ್ನು ಎದುರಿಸುತ್ತಿದ್ದು, ಸುಂದರಿ 71, ಮಾರಪ್ಪ ಅರೋಲಿ 50, ವನಜಾಕ್ಷಿ 29, ವಸಂತ 8 ಮತ್ತು ಜೀಶಾ 11 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ನಕ್ಸಲರ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬರಿಗೆ ಮೂರು ಲಕ್ಷ ರೂಪಾಯಿ ಬಿಡುಗಡೆ ಮಾಡಲು ಚಿಕ್ಕಮಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಆದೇಶಿಸಿದೆ.

ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗಿರುವುದರಲ್ಲಿ ತಪ್ಪೇನಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನಕ್ಸಲರ ಮನ ಪರಿವರ್ತನೆಗೆ ಸರ್ಕಾರ ಅವಕಾಶ ಕೊಟ್ಟಿದೆ. ನಕ್ಸಲರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಸರ್ಕಾರದ ಮುಂದೆ ಶರಣಾಗಿದ್ದಾರೆ. ಶಸ್ತ್ರಾಸ್ತ್ರಗಳನ್ನು ಎಲ್ಲಿ ಎಸೆದು ಬಂದಿದ್ದಾರೆ ಎಂಬುದರ ಕುರಿತು ಪೊಲೀಸ್ ಇಲಾಖೆಯಿಂದ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ ಎಂದು ಹೇಳಿದ್ದಾರೆ. ಪರಿಶಿಷ್ಟ ಸಮುದಾಯದ ಸಮಾವೇಶದ ಕುರಿತು ಕರೆದಿದ್ದ ಸಭೆ ಮುಂದೂಡಲು ಅನೇಕ ಕಾರಣಗಳಿವೆ ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

3 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

14 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

16 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

16 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

16 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

16 hours ago