ಪ್ರಕೃತಿ ವಿಕೋಪಗಳಿಂದ ಅಡಿಕೆ ತೋಟಗಳಿಗೆ ಆಗುತ್ತಿರುವ ಭಾರೀ ನಷ್ಟಕ್ಕೆ ಹೋಲಿಸಿದರೆ ಎನ್ಡಿಆರ್ಎಫ್ (NDRF) ಮಾರ್ಗಸೂಚಿಯಡಿ ನೀಡಲಾಗುತ್ತಿರುವ ಪರಿಹಾರ ಮೊತ್ತ ಅತ್ಯಂತ ಕಡಿಮೆ ಎಂಬ ಅಸಮಾಧಾನ ರೈತ ವಲಯದಲ್ಲಿ ಈಗ ಚರ್ಚೆಯಾಗುತ್ತಿದೆ.
ಪ್ರಸ್ತುತ ನಿಯಮಗಳ ಪ್ರಕಾರ ಅಡಿಕೆ ತೋಟಗಳಿಗೆ ಪ್ರತಿ ಹೆಕ್ಟೇರ್ಗೆ ನೀಡುವ ಪರಿಹಾರ ಮೊತ್ತ ಬೆಳೆ ಸ್ಥಾಪನೆ ಮತ್ತು ನಿರ್ವಹಣೆಗೆ ಆಗುವ ನೈಜ ವೆಚ್ಚಕ್ಕೆ ಹೋಲಿಸಿದರೆ ಸಾಕಾಗುತ್ತಿಲ್ಲ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ. ಸದ್ಯ ಗಾಳಿಗೆ, ಪ್ರಕೃತಿ ವಿಕೋಪಕ್ಕೆ ಅಡಿಕೆ ಮರ ನಾಶವಾದರೆ ಒಂದು ಮರಕ್ಕೆ 18 ರೂಪಾಯಿ ನೀಡಲಾಗುತ್ತದೆ, ಅದೇ ವಿದ್ಯುತ್ ಕಂಬಕ್ಕೆ 5 ಸಾವಿರ ರೂಪಾಯಿ ನೀಡಲಾಗುತ್ತದೆ ಎನ್ನುವುದು ಚರ್ಚೆಯ ವಿಷಯ.
ರೈತರ ಅಭಿಪ್ರಾಯದಂತೆ, ಅಡಿಕೆ ತೋಟ ಸ್ಥಾಪನೆಗೆ ಲಕ್ಷಾಂತರ ರೂಪಾಯಿ ಹೂಡಿಕೆ ಅಗತ್ಯವಿದ್ದು, ಗಾಳಿ, ಮಳೆ, ಭೂಕುಸಿತ ಹಾಗೂ ಪ್ರವಾಹದಿಂದ ಸಂಪೂರ್ಣ ತೋಟ ಹಾನಿಯಾದರೂ ಸಿಗುವ ಪರಿಹಾರದಿಂದ ನಷ್ಟ ಭರಿಸಲಾಗುವುದಿಲ್ಲ. ಹೀಗಾಗಿ ಅಡಿಕೆ ಸೇರಿದಂತೆ ತೋಟಗಾರಿಕಾ ಬೆಳೆಗಳಿಗೆ ಪ್ರತ್ಯೇಕ ಹಾಗೂ ವಾಸ್ತವಿಕ ಪರಿಹಾರ ಮಾನದಂಡ ರೂಪಿಸುವಂತೆ ಆಗ್ರಹಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
ತಜ್ಞರ ಅಭಿಪ್ರಾಯದಂತೆ, ತೋಟಗಾರಿಕಾ ಬೆಳೆಗಳ ಉತ್ಪಾದನಾ ವೆಚ್ಚ, ಬೆಳೆಯ ವಯಸ್ಸು, ಆದಾಯ ನಷ್ಟ ಹಾಗೂ ಮರುನೆಡುವ ವೆಚ್ಚವನ್ನು ಪರಿಗಣಿಸಿ ಪರಿಹಾರ ನಿಗದಿಪಡಿಸಿದರೆ ಮಾತ್ರ ರೈತರಿಗೆ ನ್ಯಾಯ ಸಿಗಲಿದೆ.
Farmers have expressed concern that the compensation provided under NDRF norms for arecanut crop losses due to natural disasters is far below the actual investment and damage incurred. They have demanded a revision of compensation norms for plantation crops.
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…
ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…
ಜುಲೈ 5ರಿಂದ 9ರವರೆಗೆ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ.…