Advertisement
MIRROR FOCUS

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

Share

ಪ್ರಕೃತಿ ವಿಕೋಪಗಳಿಂದ ಅಡಿಕೆ ತೋಟಗಳಿಗೆ ಆಗುತ್ತಿರುವ ಭಾರೀ ನಷ್ಟಕ್ಕೆ ಹೋಲಿಸಿದರೆ ಎನ್‌ಡಿಆರ್‌ಎಫ್ (NDRF) ಮಾರ್ಗಸೂಚಿಯಡಿ ನೀಡಲಾಗುತ್ತಿರುವ ಪರಿಹಾರ ಮೊತ್ತ ಅತ್ಯಂತ ಕಡಿಮೆ ಎಂಬ ಅಸಮಾಧಾನ ರೈತ ವಲಯದಲ್ಲಿ ಈಗ ಚರ್ಚೆಯಾಗುತ್ತಿದೆ.

ಪ್ರಸ್ತುತ ನಿಯಮಗಳ ಪ್ರಕಾರ ಅಡಿಕೆ ತೋಟಗಳಿಗೆ ಪ್ರತಿ ಹೆಕ್ಟೇರ್‌ಗೆ ನೀಡುವ ಪರಿಹಾರ ಮೊತ್ತ ಬೆಳೆ ಸ್ಥಾಪನೆ ಮತ್ತು ನಿರ್ವಹಣೆಗೆ ಆಗುವ ನೈಜ ವೆಚ್ಚಕ್ಕೆ ಹೋಲಿಸಿದರೆ ಸಾಕಾಗುತ್ತಿಲ್ಲ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ. ಸದ್ಯ ಗಾಳಿಗೆ, ಪ್ರಕೃತಿ ವಿಕೋಪಕ್ಕೆ ಅಡಿಕೆ ಮರ ನಾಶವಾದರೆ ಒಂದು ಮರಕ್ಕೆ 18 ರೂಪಾಯಿ ನೀಡಲಾಗುತ್ತದೆ, ಅದೇ ವಿದ್ಯುತ್‌ ಕಂಬಕ್ಕೆ 5 ಸಾವಿರ ರೂಪಾಯಿ ನೀಡಲಾಗುತ್ತದೆ ಎನ್ನುವುದು ಚರ್ಚೆಯ ವಿಷಯ.

ರೈತರ ಅಭಿಪ್ರಾಯದಂತೆ, ಅಡಿಕೆ ತೋಟ ಸ್ಥಾಪನೆಗೆ ಲಕ್ಷಾಂತರ ರೂಪಾಯಿ ಹೂಡಿಕೆ ಅಗತ್ಯವಿದ್ದು, ಗಾಳಿ, ಮಳೆ, ಭೂಕುಸಿತ ಹಾಗೂ ಪ್ರವಾಹದಿಂದ ಸಂಪೂರ್ಣ ತೋಟ ಹಾನಿಯಾದರೂ ಸಿಗುವ ಪರಿಹಾರದಿಂದ ನಷ್ಟ ಭರಿಸಲಾಗುವುದಿಲ್ಲ. ಹೀಗಾಗಿ ಅಡಿಕೆ ಸೇರಿದಂತೆ ತೋಟಗಾರಿಕಾ ಬೆಳೆಗಳಿಗೆ ಪ್ರತ್ಯೇಕ ಹಾಗೂ ವಾಸ್ತವಿಕ ಪರಿಹಾರ ಮಾನದಂಡ ರೂಪಿಸುವಂತೆ ಆಗ್ರಹಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ತಜ್ಞರ ಅಭಿಪ್ರಾಯದಂತೆ, ತೋಟಗಾರಿಕಾ ಬೆಳೆಗಳ ಉತ್ಪಾದನಾ ವೆಚ್ಚ, ಬೆಳೆಯ ವಯಸ್ಸು, ಆದಾಯ ನಷ್ಟ ಹಾಗೂ ಮರುನೆಡುವ ವೆಚ್ಚವನ್ನು ಪರಿಗಣಿಸಿ ಪರಿಹಾರ ನಿಗದಿಪಡಿಸಿದರೆ ಮಾತ್ರ ರೈತರಿಗೆ ನ್ಯಾಯ ಸಿಗಲಿದೆ.

Farmers have expressed concern that the compensation provided under NDRF norms for arecanut crop losses due to natural disasters is far below the actual investment and damage incurred. They have demanded a revision of compensation norms for plantation crops.

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

5 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

6 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

10 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

10 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

20 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

21 hours ago