ಪ್ರಕೃತಿ ವಿಕೋಪಗಳಿಂದ ಅಡಿಕೆ ತೋಟಗಳಿಗೆ ಆಗುತ್ತಿರುವ ಭಾರೀ ನಷ್ಟಕ್ಕೆ ಹೋಲಿಸಿದರೆ ಎನ್ಡಿಆರ್ಎಫ್ (NDRF) ಮಾರ್ಗಸೂಚಿಯಡಿ ನೀಡಲಾಗುತ್ತಿರುವ ಪರಿಹಾರ ಮೊತ್ತ ಅತ್ಯಂತ ಕಡಿಮೆ ಎಂಬ ಅಸಮಾಧಾನ ರೈತ ವಲಯದಲ್ಲಿ ಈಗ ಚರ್ಚೆಯಾಗುತ್ತಿದೆ.
ಪ್ರಸ್ತುತ ನಿಯಮಗಳ ಪ್ರಕಾರ ಅಡಿಕೆ ತೋಟಗಳಿಗೆ ಪ್ರತಿ ಹೆಕ್ಟೇರ್ಗೆ ನೀಡುವ ಪರಿಹಾರ ಮೊತ್ತ ಬೆಳೆ ಸ್ಥಾಪನೆ ಮತ್ತು ನಿರ್ವಹಣೆಗೆ ಆಗುವ ನೈಜ ವೆಚ್ಚಕ್ಕೆ ಹೋಲಿಸಿದರೆ ಸಾಕಾಗುತ್ತಿಲ್ಲ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ. ಸದ್ಯ ಗಾಳಿಗೆ, ಪ್ರಕೃತಿ ವಿಕೋಪಕ್ಕೆ ಅಡಿಕೆ ಮರ ನಾಶವಾದರೆ ಒಂದು ಮರಕ್ಕೆ 18 ರೂಪಾಯಿ ನೀಡಲಾಗುತ್ತದೆ, ಅದೇ ವಿದ್ಯುತ್ ಕಂಬಕ್ಕೆ 5 ಸಾವಿರ ರೂಪಾಯಿ ನೀಡಲಾಗುತ್ತದೆ ಎನ್ನುವುದು ಚರ್ಚೆಯ ವಿಷಯ.
ರೈತರ ಅಭಿಪ್ರಾಯದಂತೆ, ಅಡಿಕೆ ತೋಟ ಸ್ಥಾಪನೆಗೆ ಲಕ್ಷಾಂತರ ರೂಪಾಯಿ ಹೂಡಿಕೆ ಅಗತ್ಯವಿದ್ದು, ಗಾಳಿ, ಮಳೆ, ಭೂಕುಸಿತ ಹಾಗೂ ಪ್ರವಾಹದಿಂದ ಸಂಪೂರ್ಣ ತೋಟ ಹಾನಿಯಾದರೂ ಸಿಗುವ ಪರಿಹಾರದಿಂದ ನಷ್ಟ ಭರಿಸಲಾಗುವುದಿಲ್ಲ. ಹೀಗಾಗಿ ಅಡಿಕೆ ಸೇರಿದಂತೆ ತೋಟಗಾರಿಕಾ ಬೆಳೆಗಳಿಗೆ ಪ್ರತ್ಯೇಕ ಹಾಗೂ ವಾಸ್ತವಿಕ ಪರಿಹಾರ ಮಾನದಂಡ ರೂಪಿಸುವಂತೆ ಆಗ್ರಹಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
ತಜ್ಞರ ಅಭಿಪ್ರಾಯದಂತೆ, ತೋಟಗಾರಿಕಾ ಬೆಳೆಗಳ ಉತ್ಪಾದನಾ ವೆಚ್ಚ, ಬೆಳೆಯ ವಯಸ್ಸು, ಆದಾಯ ನಷ್ಟ ಹಾಗೂ ಮರುನೆಡುವ ವೆಚ್ಚವನ್ನು ಪರಿಗಣಿಸಿ ಪರಿಹಾರ ನಿಗದಿಪಡಿಸಿದರೆ ಮಾತ್ರ ರೈತರಿಗೆ ನ್ಯಾಯ ಸಿಗಲಿದೆ.
Farmers have expressed concern that the compensation provided under NDRF norms for arecanut crop losses due to natural disasters is far below the actual investment and damage incurred. They have demanded a revision of compensation norms for plantation crops.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…