Advertisement
MIRROR FOCUS

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

Share

ಪ್ರಕೃತಿ ವಿಕೋಪಗಳಿಂದ ಅಡಿಕೆ ತೋಟಗಳಿಗೆ ಆಗುತ್ತಿರುವ ಭಾರೀ ನಷ್ಟಕ್ಕೆ ಹೋಲಿಸಿದರೆ ಎನ್‌ಡಿಆರ್‌ಎಫ್ (NDRF) ಮಾರ್ಗಸೂಚಿಯಡಿ ನೀಡಲಾಗುತ್ತಿರುವ ಪರಿಹಾರ ಮೊತ್ತ ಅತ್ಯಂತ ಕಡಿಮೆ ಎಂಬ ಅಸಮಾಧಾನ ರೈತ ವಲಯದಲ್ಲಿ ಈಗ ಚರ್ಚೆಯಾಗುತ್ತಿದೆ.

ಪ್ರಸ್ತುತ ನಿಯಮಗಳ ಪ್ರಕಾರ ಅಡಿಕೆ ತೋಟಗಳಿಗೆ ಪ್ರತಿ ಹೆಕ್ಟೇರ್‌ಗೆ ನೀಡುವ ಪರಿಹಾರ ಮೊತ್ತ ಬೆಳೆ ಸ್ಥಾಪನೆ ಮತ್ತು ನಿರ್ವಹಣೆಗೆ ಆಗುವ ನೈಜ ವೆಚ್ಚಕ್ಕೆ ಹೋಲಿಸಿದರೆ ಸಾಕಾಗುತ್ತಿಲ್ಲ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ. ಸದ್ಯ ಗಾಳಿಗೆ, ಪ್ರಕೃತಿ ವಿಕೋಪಕ್ಕೆ ಅಡಿಕೆ ಮರ ನಾಶವಾದರೆ ಒಂದು ಮರಕ್ಕೆ 18 ರೂಪಾಯಿ ನೀಡಲಾಗುತ್ತದೆ, ಅದೇ ವಿದ್ಯುತ್‌ ಕಂಬಕ್ಕೆ 5 ಸಾವಿರ ರೂಪಾಯಿ ನೀಡಲಾಗುತ್ತದೆ ಎನ್ನುವುದು ಚರ್ಚೆಯ ವಿಷಯ.

ರೈತರ ಅಭಿಪ್ರಾಯದಂತೆ, ಅಡಿಕೆ ತೋಟ ಸ್ಥಾಪನೆಗೆ ಲಕ್ಷಾಂತರ ರೂಪಾಯಿ ಹೂಡಿಕೆ ಅಗತ್ಯವಿದ್ದು, ಗಾಳಿ, ಮಳೆ, ಭೂಕುಸಿತ ಹಾಗೂ ಪ್ರವಾಹದಿಂದ ಸಂಪೂರ್ಣ ತೋಟ ಹಾನಿಯಾದರೂ ಸಿಗುವ ಪರಿಹಾರದಿಂದ ನಷ್ಟ ಭರಿಸಲಾಗುವುದಿಲ್ಲ. ಹೀಗಾಗಿ ಅಡಿಕೆ ಸೇರಿದಂತೆ ತೋಟಗಾರಿಕಾ ಬೆಳೆಗಳಿಗೆ ಪ್ರತ್ಯೇಕ ಹಾಗೂ ವಾಸ್ತವಿಕ ಪರಿಹಾರ ಮಾನದಂಡ ರೂಪಿಸುವಂತೆ ಆಗ್ರಹಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ತಜ್ಞರ ಅಭಿಪ್ರಾಯದಂತೆ, ತೋಟಗಾರಿಕಾ ಬೆಳೆಗಳ ಉತ್ಪಾದನಾ ವೆಚ್ಚ, ಬೆಳೆಯ ವಯಸ್ಸು, ಆದಾಯ ನಷ್ಟ ಹಾಗೂ ಮರುನೆಡುವ ವೆಚ್ಚವನ್ನು ಪರಿಗಣಿಸಿ ಪರಿಹಾರ ನಿಗದಿಪಡಿಸಿದರೆ ಮಾತ್ರ ರೈತರಿಗೆ ನ್ಯಾಯ ಸಿಗಲಿದೆ.

Farmers have expressed concern that the compensation provided under NDRF norms for arecanut crop losses due to natural disasters is far below the actual investment and damage incurred. They have demanded a revision of compensation norms for plantation crops.

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

21 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago