Advertisement
MIRROR FOCUS

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

Share

ಪ್ರಕೃತಿ ವಿಕೋಪಗಳಿಂದ ಅಡಿಕೆ ತೋಟಗಳಿಗೆ ಆಗುತ್ತಿರುವ ಭಾರೀ ನಷ್ಟಕ್ಕೆ ಹೋಲಿಸಿದರೆ ಎನ್‌ಡಿಆರ್‌ಎಫ್ (NDRF) ಮಾರ್ಗಸೂಚಿಯಡಿ ನೀಡಲಾಗುತ್ತಿರುವ ಪರಿಹಾರ ಮೊತ್ತ ಅತ್ಯಂತ ಕಡಿಮೆ ಎಂಬ ಅಸಮಾಧಾನ ರೈತ ವಲಯದಲ್ಲಿ ಈಗ ಚರ್ಚೆಯಾಗುತ್ತಿದೆ.

ಪ್ರಸ್ತುತ ನಿಯಮಗಳ ಪ್ರಕಾರ ಅಡಿಕೆ ತೋಟಗಳಿಗೆ ಪ್ರತಿ ಹೆಕ್ಟೇರ್‌ಗೆ ನೀಡುವ ಪರಿಹಾರ ಮೊತ್ತ ಬೆಳೆ ಸ್ಥಾಪನೆ ಮತ್ತು ನಿರ್ವಹಣೆಗೆ ಆಗುವ ನೈಜ ವೆಚ್ಚಕ್ಕೆ ಹೋಲಿಸಿದರೆ ಸಾಕಾಗುತ್ತಿಲ್ಲ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ. ಸದ್ಯ ಗಾಳಿಗೆ, ಪ್ರಕೃತಿ ವಿಕೋಪಕ್ಕೆ ಅಡಿಕೆ ಮರ ನಾಶವಾದರೆ ಒಂದು ಮರಕ್ಕೆ 18 ರೂಪಾಯಿ ನೀಡಲಾಗುತ್ತದೆ, ಅದೇ ವಿದ್ಯುತ್‌ ಕಂಬಕ್ಕೆ 5 ಸಾವಿರ ರೂಪಾಯಿ ನೀಡಲಾಗುತ್ತದೆ ಎನ್ನುವುದು ಚರ್ಚೆಯ ವಿಷಯ.

ರೈತರ ಅಭಿಪ್ರಾಯದಂತೆ, ಅಡಿಕೆ ತೋಟ ಸ್ಥಾಪನೆಗೆ ಲಕ್ಷಾಂತರ ರೂಪಾಯಿ ಹೂಡಿಕೆ ಅಗತ್ಯವಿದ್ದು, ಗಾಳಿ, ಮಳೆ, ಭೂಕುಸಿತ ಹಾಗೂ ಪ್ರವಾಹದಿಂದ ಸಂಪೂರ್ಣ ತೋಟ ಹಾನಿಯಾದರೂ ಸಿಗುವ ಪರಿಹಾರದಿಂದ ನಷ್ಟ ಭರಿಸಲಾಗುವುದಿಲ್ಲ. ಹೀಗಾಗಿ ಅಡಿಕೆ ಸೇರಿದಂತೆ ತೋಟಗಾರಿಕಾ ಬೆಳೆಗಳಿಗೆ ಪ್ರತ್ಯೇಕ ಹಾಗೂ ವಾಸ್ತವಿಕ ಪರಿಹಾರ ಮಾನದಂಡ ರೂಪಿಸುವಂತೆ ಆಗ್ರಹಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ತಜ್ಞರ ಅಭಿಪ್ರಾಯದಂತೆ, ತೋಟಗಾರಿಕಾ ಬೆಳೆಗಳ ಉತ್ಪಾದನಾ ವೆಚ್ಚ, ಬೆಳೆಯ ವಯಸ್ಸು, ಆದಾಯ ನಷ್ಟ ಹಾಗೂ ಮರುನೆಡುವ ವೆಚ್ಚವನ್ನು ಪರಿಗಣಿಸಿ ಪರಿಹಾರ ನಿಗದಿಪಡಿಸಿದರೆ ಮಾತ್ರ ರೈತರಿಗೆ ನ್ಯಾಯ ಸಿಗಲಿದೆ.

Farmers have expressed concern that the compensation provided under NDRF norms for arecanut crop losses due to natural disasters is far below the actual investment and damage incurred. They have demanded a revision of compensation norms for plantation crops.

ನಿಮ್ಮ ಅಭಿಪ್ರಾಯ, ಪ್ರತಿಕ್ರಿಯೆಗಳನ್ನು ಕಮೆಂಟ್‌ ಮೂಲಕ ತಿಳಿಸಿ…
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

51 minutes ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

7 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

15 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

19 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

24 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago