ವರ್ಷಕ್ಕೆ 15 ಕ್ಕಿಂತ ಹೆಚ್ಚು ಗ್ಯಾಸ್‌ ಸಿಲಿಂಡರ್‌ ಬೇಕಾದರೆ ದಾಖಲೆ ಅಗತ್ಯ |

September 29, 2022
6:41 PM

ಸರ್ಕಾರ ಈಗ ಗೃಹಬಳಕೆಯ ಅನಿಲ ಸಿಲಿಂಡರ್ ಗಳಿಗೆ ಕೋಟಾವನ್ನು ನಿಗದಿಪಡಿಸಿದೆ. ಆದರೆ ಹೆಚ್ಚುವರಿ ಗ್ಯಾಸ್‌ ಸಿಲಿಂಡರ್‌ ಅಗತ್ಯವಿದ್ದರೆ ದಾಖಲೆ ತೋರಿಸಬೇಕಾಗುತ್ತದೆ.  ಹೊಸ ಆದೇಶದ ಪ್ರಕಾರ, ಗೃಹಬಳಕೆಯ ಅನಿಲ ಗ್ರಾಹಕರು ಈಗ ವರ್ಷಕ್ಕೆ 15 ಬಾರಿ ಮಾತ್ರ ಗ್ಯಾಸ್ ಸಿಲಿಂಡರ್ ಗಳನ್ನು ರೀಫಿಲ್ ಮಾಡಲು ಸಾಧ್ಯವಾಗುತ್ತದೆ.  ಹೆಚ್ಚುವರಿ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಸರಿಯಾದ ಕಾರಣವೇನು ಎಂಬುದನ್ನು ದಾಖಲೆಗಳ ಮೂಲಕ ತಿಳಿಸಬೇಕು.

Advertisement

ಒಂದು ವರ್ಷದಲ್ಲಿ 15 ಸಿಲಿಂಡರ್‌ಗಳ ರೀ ಫಿಲ್ಲಿಂಗ್ ನಿಗದಿಪಡಿಸಲಾಗಿದೆ., ಆದರೆ ಯಾರಾದರೂ ಹೆಚ್ಚಿನ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಬಯಸಿದರೆ ಅದರ ಮೇಲೆ ಯಾವುದೇ ನಿರ್ಬಂಧವಿರುವುದಿಲ್ಲ. ಇದಕ್ಕೆ ದಾಖಲೆಗಳನ್ನು ತೋರಿಸಬೇಕು. ಹೆಚ್ಚುವರಿ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಲು ಸರಿಯಾದ ಕಾರಣವೇನು ಎಂಬುದನ್ನು ದಾಖಲೆಗಳ ಮೂಲಕ ತಿಳಿಸಬೇಕಾಗುತ್ತದೆ.

ಹೊಸ ನಿಯಮದ ಪ್ರಕಾರ ವರ್ಷದಲ್ಲಿ ಕೇವಲ 15 ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು ಎಂದು ಹೇಳಲಾಗಿದೆ, ಆದರೆ ಹೊಸ ನಿಯಮ ಅನ್ವಯಿಸಿದರೆ, ವರ್ಷದಲ್ಲಿ ಪ್ರತಿ ಪ್ರಕಾರದ ಒಟ್ಟು 15 ಗ್ಯಾಸ್ ಸಿಲಿಂಡರ್ ಅನ್ನು ಮಾತ್ರ ಬುಕ್ ಮಾಡಬಹುದು. ಸದ್ಯಕ್ಕೆ ಸಬ್ಸಿಡಿ ರಹಿತ ಸಿಲಿಂಡರ್‌ಗಳಿಗೆ ಯಾವುದೇ ಕೋಟಾ ನಿಗದಿಯಾಗಿಲ್ಲ. ಸಿಲಿಂಡರ್ ಮೇಲೆ ಸಬ್ಸಿಡಿ ತೆಗೆದುಕೊಳ್ಳದವರು ಎಷ್ಟು ಬೇಕಾದರೂ ಸಿಲಿಂಡರ್ ತೆಗೆದುಕೊಳ್ಳಬಹುದು. ಆದರೆ ಹೊಸ ನಿಯಮ ಜಾರಿಯಾದ ನಂತರ ಒಂದು ವರ್ಷದಲ್ಲಿ 15 ಸಿಲಿಂಡರ್ ಬುಕ್ಕಿಂಗ್ ಮಾಡಬಹುದಾಗಿದೆ. ಹೆಚ್ಚುವರಿ ಸಿಲಿಂಡರ್‌ಗಳನ್ನು ಯಾವ ಅಗತ್ಯಕ್ಕೆ ಕಾಯ್ದಿರಿಸಲಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಕೆಲವು ದಾಖಲೆಗಳನ್ನು ಸಹ ನೀಡಬೇಕಾಗಬಹುದು. ಪಡಿತರ ಚೀಟಿ, ಕುಟುಂಬದ ಸಂಖ್ಯೆ ಮುಂತಾದ ವಿವರಗಳ ದಾಖಲೆಗಳನ್ನು ನೀಡಬೇಕಾಗುತ್ತದೆ. ಈ ದಾಖಲೆಗಳನ್ನು ವಿತರಕರಿಗೆ ಸಲ್ಲಿಸಬೇಕು ಮತ್ತು ಅವರು ಅದನ್ನು ಪರಿಶೀಲಿಸುತ್ತಾರೆ ಮತ್ತು ಸಿಲಿಂಡರ್ ನೀಡುತ್ತಾರೆ. ಕಾಳಸಂತೆ ತಡೆಯಲು ಹಾಗೂ ಬಡವರಿಗೆ ಸಕಾಲಕ್ಕೆ ಸಿಲಿಂಡರ್‌ಗಳನ್ನು ಪೂರೈಸಲು ಈ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂಬುದು ಇಲಾಖೆಯ ಮಾಹಿತಿ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ
May 12, 2025
2:17 PM
by: ಸಾಯಿಶೇಖರ್ ಕರಿಕಳ
ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |
May 12, 2025
11:31 AM
by: ದ ರೂರಲ್ ಮಿರರ್.ಕಾಂ
ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |
May 12, 2025
7:32 AM
by: ದ ರೂರಲ್ ಮಿರರ್.ಕಾಂ
ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ
May 11, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group